Mantralaya: ಮಂತ್ರಾಲಯದಲ್ಲಿ 36 ಅಡಿ ಅಭಯರಾಮ ಮೂರ್ತಿ ಸ್ಥಾಪನೆ
Team Udayavani, Jan 20, 2024, 10:18 PM IST
ರಾಯಚೂರು: ಶ್ರೀಕ್ಷೇತ್ರ ಮಂತ್ರಾಲಯದ ಹೊರವಲಯದಲ್ಲಿ 36 ಅಡಿ ಎತ್ತರದ ಶ್ರೀ ಅಭಯ ರಾಮನ ಬೃಹತ್ ಶಿಲಾಮೂರ್ತಿ ತಲೆ ಎತ್ತಿದೆ.
32 ಅಡಿ ಎತ್ತರದ ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಎದುರಲ್ಲೇ ಅಭಯ ರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಧನುರ್ಧಾರಿ ಶ್ರೀರಾಮನ ಮೂರ್ತಿ ಎಲ್ಲರನ್ನು ಆಕರ್ಷಿಸುತ್ತಿದೆ. ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿ ಪತಿ ಶ್ರೀ ಸುಬುಧೇಂದ್ರ ತೀರ್ಥರು ಶನಿವಾರ ಪೂಜೆ ನೆರವೇರಿಸಿದ ಬಳಿಕ ಕ್ರೇನ್ ಸಹಾಯದಿಂದ ಮೂರ್ತಿಯನ್ನು ಪದಸ್ಥಲದ ಪೀಠದಲ್ಲಿ ನಿಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಶ್ರೀ ಸುಬುಧೇಂದ್ರ ತೀರ್ಥರು, ಅಯೋಧ್ಯೆಯಲ್ಲಿ ಬಾಲರಾಮನ ಮೂರ್ತಿ ಸ್ಥಾಪನೆಯಾಗುತ್ತಿರುವ ಶುಭ ಮುಹೂರ್ತದಲ್ಲೇ ಮಂತ್ರಾಲಯದಲ್ಲೂ ಶ್ರೀರಾಮನ ಏಕಶಿಲಾ ಮೂರ್ತಿ ಸ್ಥಾಪಿಸಲಾಗಿದೆ. ಜ.22ರಂದು ಇಲ್ಲಿಯೂ ಸಾಂಕೇತಿಕವಾಗಿ ಪೂಜೆ ನೆರವೇರಿಸಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಶಿಲ್ಪಿ ಗುಡಿಗಾರ ಅವರ ಕೈಯಿಂದ ಮೂರ್ತಿ ಸುಂದರವಾಗಿ ಮೂಡಿ ಬಂದಿದೆ. ಈ ಸ್ಥಳದಲ್ಲಿ ಕಟ್ಟಡ, ಉದ್ಯಾನವನ ಸಹಿತ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯಬೇಕಿವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
MUST WATCH
ಹೊಸ ಸೇರ್ಪಡೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್