Solar park: ವಿದ್ಯುತ್ ಉಪಕೇಂದ್ರಗಳ ಬಳಿ ಸೌರ ಉದ್ಯಾನ ಸ್ಥಾಪನೆ
ಸೋಲಾರ್ ಪಾರ್ಕ್ ಸ್ಥಾಪನೆಗೆ ಜಾಗ ಗುರುತಿಸಿದ ಕಂಪೆನಿ
Team Udayavani, Aug 23, 2023, 11:19 PM IST
ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ವಿದ್ಯುತ್ ಸರಬರಾಜು ಕಂಪೆನಿ (ಎಸ್ಕಾಂ)ಯ ಉಪಕೇಂದ್ರ (ಸಬ್ ಸ್ಟೇಷನ್)ಗಳ ಬಳಿ ಸೌರ ಉದ್ಯಾನ (ಸೋಲಾರ್ ಪಾರ್ಕ್) ಸ್ಥಾಪನೆ ಹಾಗೂ ಐಪಿ ಫೀಡರ್ಗಳನ್ನು ಸೋಲಾರೈಸೇಷನ್ ಮಾಡಲು ಸರಕಾರ ಮುಂದಾಗಿದೆ.
ಈ ಸಂಬಂಧ ಬುಧವಾರ ಬೆಂಗಳೂರಿನ ಬೆಳಕು ಭವನದಲ್ಲಿ ಎಸ್ಕಾಂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಇಂಧನ ಸಚಿವ ಕೆ.ಜೆ. ಜಾರ್ಜ್, ಈ ಯೋಜನೆಯ ಅನುಷ್ಠಾನದಿಂದ ಸ್ಥಳೀಯವಾಗಿ ವಿದ್ಯುತ್ ಉತ್ಪಾದನೆ ಹೆಚ್ಚುತ್ತದೆ. ಇದರಿಂದಾಗಿ ರೈತರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ಸಾಧ್ಯವಾಗಲಿದೆ ಎಂದರು.
ರಾಜ್ಯದ ಪ್ರಗತಿಯಲ್ಲಿ ಇಂಧನವು ಮಹತ್ವದ ಪಾತ್ರವನ್ನು ವಹಿಸುತ್ತದೆ. ಅದನ್ನು ಅತ್ಯಂತ ಪರಿಣಾಮಕಾರಿಯಾಗಿ ಸಂರಕ್ಷಿಸ ಬೇಕು.
ಸೌರಶಕ್ತಿಯ ಸುಲಭ ಸ್ಥಾಪನೆ ಮತ್ತು ದೀರ್ಘಕಾಲ ಬಾಳಿಕೆ ಬರುವ ಕಾರಣದಿಂದ ಗ್ರಾಮೀಣ ಪ್ರದೇಶಗಳಲ್ಲೂ ಸೌರ ತಂತ್ರಜ್ಞಾನ ಹೆಚ್ಚು ಜನಪ್ರಿಯವಾಗುತ್ತಿದೆ. ಐದು ವಿದ್ಯುತ್ ಸರಬರಾಜು ಕಂಪನಿಗಳ ಪೈಕಿ ಬೆಸ್ಕಾಂ, ಸೆಸ್ಕಾಂ ಮತ್ತು ಹೆಸ್ಕಾಂ ಈಗಾಗಲೇ ಸೋಲಾರ್ ಪಾರ್ಕ್ಗಳನ್ನು ಸ್ಥಾಪಿಸಲು ಭೂಮಿ ಗುರುತಿಸಿವೆ. ಉಳಿದ ವಿದ್ಯುತ್ ಸರಬರಾಜು ಕಂಪನಿಗಳು ಭೂಮಿ ಗುರುತಿಸುವ ಪ್ರಕ್ರಿಯೆಯಲ್ಲಿವೆ ಎಂದು ವಿವರಿಸಿದರು.
ಇದೇ ವೇಳೆ ಸೌರಶಕ್ತಿ ಚಾಲಿತ ನೀರಾವರಿ ಪಂಪ್ ಸೆಟ್ (ಐಪಿ) ತಯಾರಕರೊಂದಿಗೆ ಸಭೆ ನಡೆಸಿದ ಸಚಿವರು, ಸೋಲಾರ್ ಪಂಪ್ ಸೆಟ್ ಅಳವಡಿಕೆಯನ್ನು ಹೆಚ್ಚಿಸುವ ಸಾಧ್ಯತೆಯನ್ನು ಪರಿಶೀಲಿಸಲು ಸೂಚಿಸಿದರು.
ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಮತ್ತು ಕರ್ನಾಟಕ ಸರ್ಕಾರದ ಧನ ಸಹಾಯದೊಂದಿಗೆ ರಾಜ್ಯದಲ್ಲಿ 2014-15ರಲ್ಲಿ ಸೌರಚಾಲಿತ ಪಂಪ್ಸೆಟ್ ಯೋಜನೆ ಪ್ರಾರಂಭಿಸಲಾಯಿತು. ಕರ್ನಾಟಕ ಇಂಧನ ಸಚಿವಾಲಯವು ರಾಜ್ಯದಲ್ಲಿ ಒಟ್ಟು 4369 ಸೋಲಾರ್ ಪಂಪ್ ಸೆಟ್ಗಳನ್ನು ಸ್ಥಾಪಿಸಿದೆ. ಪ್ರಧಾನಮಂತ್ರಿ ಕುಸುಮ್ ಯೋಜನೆಯಡಿ ಗ್ರಿಡ್ ಪೂರೈಕೆ ಲಭ್ಯವಿಲ್ಲದಿರುವೆಡೆ ಡೀಸೆಲ್ ಕೃಷಿ ಪಂಪ್ಗ್ಳು, ನೀರಾವರಿ ವ್ಯವಸ್ಥೆ ಬದಲಿಗೆ 7.5 ಎಚ್ಪಿವರೆಗಿನ ಸೌರ ಕೃಷಿ ಪಂಪ್ ಸೆಟ್ಗಳನ್ನು ಸ್ಥಾಪಿಸಲು ರೈತರಿಗೆ ಹಣಕಾಸಿನ ನೆರವು ನೀಡಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡರು.
ಸಭೆಯಲ್ಲಿ ಇಂಧನ ಮತ್ತು ಮೂಲಸೌಕರ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ನ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ ರುದ್ರಪ್ಪಯ್ಯ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ