ಲೋಕಸಭಾ ಕ್ಷೇತ್ರ ಮರುವಿಂಗಡಣೆ ವೇಳೆ ದಕ್ಷಿಣ ರಾಜ್ಯಗಳ ಹಿತವೂ ಪರಿಗಣನೆ
ದಕ್ಷಿಣದ ರಾಜ್ಯಗಳ ಆಕ್ಷೇಪ ಹಿನ್ನೆಲೆಯಲ್ಲಿ ಕೇಂದ್ರದಿಂದ ಈ ಭರವಸೆ
Team Udayavani, Jan 3, 2024, 11:45 PM IST
ಹೊಸದಿಲ್ಲಿ: ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ವೇಳೆ ಕರ್ನಾಟಕ ಸಹಿತ ದಕ್ಷಿಣದ ರಾಜ್ಯಗಳ ಕಳವಳಗಳನ್ನೂ ಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ಕೇಂದ್ರ ಸರಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಮೂಲಕ ಜನಸಂಖ್ಯೆ ಆಧರಿತವಾಗಿ ಕ್ಷೇತ್ರ ಪುನರ್ವಿಂಗಡಣೆಯಾದರೆ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂಬ ಕೂಗಿಗೆ ಕೇಂದ್ರ ಸ್ಪಂದಿಸಿದಂತಾಗಿದೆ.
“2024ರ ಲೋಕಸಭೆ ಚುನಾವಣೆ ಬಳಿಕ ಜನಗಣತಿ ನಡೆಸಲಾಗುತ್ತದೆ. ಅದಾದ ಅನಂತರ, ಗಣತಿಯ ಆಧಾರದಲ್ಲೇ ಲೋಕಸಭೆ ಕ್ಷೇತ್ರಗಳ ಪುನರ್ವಿಂಗಡಣೆ ಪ್ರಕ್ರಿಯೆ ನಡೆಯಲಿದೆ. ಆ ಸಂದರ್ಭದಲ್ಲಿ ದಕ್ಷಿಣದ ರಾಜ್ಯಗಳ ಅಹವಾಲುಗಳು, ಕಳವಳಗಳನ್ನು ಗಣನೆಗೆ ತೆಗೆದುಕೊಳ್ಳುತ್ತೇವೆ’ ಎಂದು ಅಧಿಕಾರಿ ತಿಳಿಸಿದ್ದಾರೆ. ದೇಶದಲ್ಲಿ ಈವರೆಗೆ ಒಟ್ಟು 4 ಬಾರಿ ಕ್ಷೇತ್ರ ಪುನರ್ವಿಂಗಡಣೆ ಆಯೋಗಗಳನ್ನು ರಚಿಸಲಾಗಿತ್ತು. 1952 ರಲ್ಲಿ ಮೊದಲ ಸಾರ್ವತ್ರಿಕ ಚುನಾವಣೆ ನಡೆದಾಗ 489 ಇದ್ದ ಲೋಕಸಭೆ ಕ್ಷೇತ್ರಗಳು, ಅನಂತರ ನಡೆದ ಮರುವಿಂಗಡಣೆ ಪ್ರಕ್ರಿಯೆಯಿಂದ ಈಗ ಒಟ್ಟು ಕ್ಷೇತ್ರಗಳ ಸಂಖ್ಯೆ 543ಕ್ಕೇರಿದೆ.
ದಕ್ಷಿಣದ ರಾಜ್ಯಗಳ ಆಕ್ಷೇಪ ಏಕೆ?
ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರ, ತೆಲಂಗಾಣಗಳು ಈಗಾಗಲೇ ವಿವಿಧ ಕುಟುಂಬ ಯೋಜನೆ ಕ್ರಮಗಳ ಮೂಲಕ ಜನಸಂಖ್ಯೆಯ ಏರಿಕೆಗೆ ಕಡಿವಾಣ ಹಾಕಿವೆ. ಆದರೆ ಉತ್ತರ ಭಾರತದ ರಾಜ್ಯಗಳಲ್ಲಿ ಜನಸಂಖ್ಯೆ ಏರುತ್ತಲೇ ಇವೆ. ಜನಸಂಖ್ಯೆ ಆಧರಿಸಿ ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆಯಾದರೆ, ಉತ್ತರದ ರಾಜ್ಯಗಳಿಗೆ ಹೆಚ್ಚಿನ ಸೀಟುಗಳು ಲಭ್ಯವಾಗಲಿವೆ. ಲೋಕಸಭಾ ಸೀಟುಗಳ ಲಭ್ಯತೆಯಲ್ಲಿ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲಿವೆ. ಅಲ್ಲದೆ, ಸಂಸತ್ನಲ್ಲಿ ದಕ್ಷಿಣದ ಪ್ರಾತಿನಿಧ್ಯವೂ ಕುಗ್ಗಲಿದ್ದು, ರಾಷ್ಟ್ರ ರಾಜಕಾರಣದಲ್ಲಿ ಈ ರಾಜ್ಯಗಳ ದನಿ ಕ್ಷೀಣಿಸಲಿದೆ. ಈ ತಾರತಮ್ಯವು ಕೇವಲ ಸಂಸತ್ ಸ್ಥಾನಗಳಿಗೆ ಸೀಮಿತವಾಗಿರದೇ, ಬೇರೆ ಬೇರೆ ರೀತಿಯಲ್ಲಿ ಅಸಮಾನತೆಗೆ ದಾರಿಮಾಡಿ ಕೊಡ ಲಿದೆ ಎನ್ನುವುದು ದಕ್ಷಿಣದ ರಾಜ್ಯಗಳ ಅಳಲು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ