ಖಾತೆಗಳಲ್ಲಿ ಹಸ್ತಕ್ಷೇಪ: ಸಚಿವರ ಪರಸ್ಪರ ಆರೋಪ
Team Udayavani, Apr 17, 2020, 4:54 AM IST
ಬೆಂಗಳೂರು: ಕೋವಿಡ್ 19 ನಿಯಂತ್ರಣ ಸಂದರ್ಭ ಸಚಿವರ ನಡುವಿನ ಪ್ರತಿಷ್ಠೆ ಬಯಲಾಗುತ್ತಿದ್ದು, ಆರೋಗ್ಯ ಸಚಿವ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ನಡುವಿನ ಶೀತಲ ಸಮರ ಇನ್ನೂ ಮುಂದುವರಿದಿರುವ ನಡುವೆಯೇ, ಈಗ ತೋಟಗಾರಿಕೆ ಸಚಿವ ನಾರಾಯಣ ಗೌಡ – ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ನಡುವೆ ಆರೋಪ-ಪ್ರತ್ಯಾರೋಪ ನಡೆದಿದೆ.
ಗುರುವಾರ ಡಿಸಿಎಂ ಡಾ| ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಾಗಾಟ ಹಾಗೂ ಮಾರಾಟ ಮಾಡುವ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿ ಸಲು ಕರೆದಿದ್ದ ಸಭೆಯಲ್ಲಿ ತೋಟ ಗಾರಿಕೆ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡು ತ್ತಿರುವ ಬಗ್ಗೆ ನಾರಾಯಣ ಗೌಡ ಆಕ್ಷೇಪ ಎತ್ತಿದ್ದು, ಈ ಸಂಬಂಧ ಇಬ್ಬರು ಸಚಿವರ ನಡುವೆ ಮಾತಿನ ಚಕಮಕಿ ನಡೆದಿದೆ.
ತೋಟಗಾರಿಕೆ ಇಲಾಖೆಯಲ್ಲಿ ಹಸ್ತ ಕ್ಷೇಪ ಮಾಡುತ್ತಿರುವ ಬಗ್ಗೆ ನಾರಾಯಣ ಗೌಡ ಆಕ್ಷೇಪ ಎತ್ತಿರುವುದಕ್ಕೆ ಎಸ್. ಟಿ. ಸೊಮಶೇಖರ್ ತೋಟಗಾರಿಕೆಯು ಸಹಕಾರ ಇಲಾಖೆ ವ್ಯಾಪ್ತಿಗೂ ಬರು ತ್ತದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಅನಂತರ ಇಬ್ಬರನ್ನೂ ಅಶ್ವತ§ನಾರಾಯಣ ಸಮಾಧಾನ ಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಹಕಾರ ಸಚಿವ ಸೋಮಶೇಖರ್, ಸಣ್ಣ ಪುಟ್ಟ ವಿಚಾರಗಳು ನಡೆಯುತ್ತಿರುತ್ತವೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ