Shringeri: ವಿಧುಶೇಖರ ಶ್ರೀಗಳಿಗೆ ಅಯೋಧ್ಯೆ ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ ಆಹ್ವಾನ
Team Udayavani, Jan 11, 2024, 11:23 PM IST
ಶೃಂಗೇರಿ: ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಭವ್ಯ ಮೂರ್ತಿಯ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಟ್ರಸ್ಟ್ ವತಿಯಿಂದ ಬುಧವಾರ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳಿಗೆ ಸಮರ್ಪಿಸಲಾಯಿತು.
ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಶ್ರೀ ಮಠದಲ್ಲಿ ಜ.22ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಶ್ರೀ ರಾಮನಿಗೆ ವಿಶೇಷ ಪೂಜೆ ನಡೆಯಲಿದೆ. ಜಗದ್ಗುರುಗಳ ಆದೇಶದಂತೆ ಭಕ್ತರಿಂದ ಶ್ರೀರಾಮ ಜಪ, ಭಜನೆ ನಡೆಯುತ್ತಿದೆ. ಪಟ್ಟಣ ಸಹಿತ ಗ್ರಾಮೀಣ ಭಾಗದಲ್ಲಿರುವ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಜಪ, ಶ್ರೀ ರಾಮತಾರಕ ಹೋಮ ನಡೆಯಲಿದೆ. ಶ್ರೀಮಠದ ಶಕ್ತಿದೇವತೆ ಕೆರೆದಂಡೆಯಲ್ಲಿರುವ ಶ್ರೀ ಕೆರೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ತಾರಕ ಹೋಮ ಹಾಗೂ ವಿಶೇಷ ಪೂಜೆ ನಡೆಯಲಿದೆ.
ರಾಮ ದೇವಸ್ಥಾನದಲ್ಲಿ ಕುಂಭಾಭಿಷೇಕ
ವಿಶೇಷ ದಿನವಾದ ಜ.22ರಂದೇ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು ಶ್ರೀ ರಾಮ ದೇವರ ಪುನರ್ ಅಷ್ಟಬಂಧ ಮತ್ತು ಕುಂಭಾಭಿಷೇಕ ನೆರವೇರಿಸಲಿದ್ದಾರೆ. ಕುಂಭಾಭಿಷೇಕದ ಅಂಗವಾಗಿ ಜ.21ರಂದು ಮಹಾಸಂಕಲ್ಪ, ಶಾಂತಿ ಹೋಮ, ಜಲಾ ವಾಸ, ಬಿಂಬಶುದ್ಧಿ, ರಾಕ್ಷೊಘ್ನ ಹೋಮ, ವಾಸ್ತು ಹೋಮ ಮುಂತಾದ ಕಾರ್ಯಕ್ರಮ ನಡೆಯಲಿದೆ. ಜ.22ರಂದು ನಡೆಯುವ ಕುಂಬಾಭಿಷೇಕ ಕಾರ್ಯಕ್ರಮದಲ್ಲಿ ರತ್ನನ್ಯಾಸ, ಪ್ರತಿಷ್ಠೆ, ಅಷ್ಟಬಂಧ ಸಂಯೋಜನೆ, ಪ್ರತಿಷ್ಠಾಂಗ ಹೋಮ ನಡೆಯಲಿದೆ. ಬೆಳಗ್ಗೆ ಶ್ರೀರಾಮತಾರಕ ಹೋಮದ ಪೂರ್ಣಾಹುತಿಯಲ್ಲಿ ಜಗದ್ಗುರುಗಳು ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ