ಮುಂಬೈ ಕೈಯಲ್ಲಿ ಚೆನ್ನೈ ಭವಿಷ್ಯ; ಸೋತರೆ ಅಧಿಕೃತವಾಗಿ ಹೊರಬೀಳಲಿದೆ ಧೋನಿ ಟೀಮ್‌


Team Udayavani, May 12, 2022, 6:45 AM IST

thumb 3

ಮುಂಬಯಿ: ಐದು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ 9 ಸೋಲುಂಡು 2022ರ ಐಪಿಎಲ್‌ನಿಂದ ಹೊರಬಿದ್ದಾಗಿದೆ.

ಐಪಿಎಲ್‌ನ ದ್ವಿತೀಯ ಯಶಸ್ವಿ ತಂಡವಾದ ಚೆನ್ನೈ ಸೂಪರ್‌ ಕಿಂಗ್ಸ್‌ ಹಗ್ಗದ ಮೇಲಲ್ಲ, ನೂಲಿನ ಮೇಲೆ ಸರ್ಕಸ್‌ ಮಾಡುತ್ತಿದೆ. ಒಂದು ಪಂದ್ಯದಲ್ಲಿ ಎಡವಿದರೂ ಅಧಿಕೃತವಾಗಿ ನಿರ್ಗಮಿಸಲಿದೆ. ಸದ್ಯ ಧೋನಿ ಪಡೆಯ ಭವಿಷ್ಯ ಮುಂಬೈ ಕೈಯಲ್ಲಿದೆ. ಇತ್ತಂಡಗಳು ಗುರುವಾರ ದ್ವಿತೀಯ ಸುತ್ತಿನ ಸೆಣಸಾಟಕ್ಕೆ ಇಳಿಯಲಿವೆ.

ಮುಂಬೈಗೆ ಹೋಲಿಸಿದರೆ ಚೆನ್ನೈ ಸಾಧನೆ ಸ್ವಲ್ಪವೇ ಮೇಲ್ಮಟ್ಟದಲ್ಲಿದೆ. 11ರಲ್ಲಿ 4 ಪಂದ್ಯಗಳನ್ನು ಗೆದ್ದಿದೆ. ಆದರೆ ಚೆನ್ನೈ ಗೆಲುವಿನ ಆಟ ಬಹಳ ವಿಳಂಬವಾಗಿ ಮೊದಲ್ಗೊಂಡಿತು. ನಂಬುಗೆಯ ಆಟಗಾರರೆಲ್ಲ ತಡವಾಗಿ ಫಾರ್ಮ್ ಕಂಡುಕೊಂಡರು. ಇನ್ನು ಕೆಲವರು ಲೆಕ್ಕದ ಭರ್ತಿಯ ಆಟಗಾರರಾಗಿಯೇ ಉಳಿದುಕೊಂಡರು. ಈ ನಡುವೆ ನಾಯಕತ್ವ ಹಸ್ತಾಂತರಗೊಂಡಿತು. ಧೋನಿ ಮಿಶ್ರ ಫಲ ಅನುಭವಿಸಿದರು.

ಯಾವತ್ತೋ ಹೊರಬೀಳಬೇಕಾಗಿದ್ದ ಚೆನ್ನೈ ಇನ್ನೂ ಉಸಿರಾಡುತ್ತಿರುವುದೇ ಒಂದು ಅಚ್ಚರಿ.

ಮುಂಬೈಗೆ ಸೇಡಿನ ಪಂದ್ಯ
ಮುಂಬೈ ಎದುರಿನ ಮೊದಲ ಸುತ್ತಿನ ಪಂದ್ಯದಲ್ಲಿ ಧೋನಿ ಬೆಸ್ಟ್‌ ಫಿನಿಶರ್‌ ಪಾತ್ರ ವಹಿಸಿ ಚೆನ್ನೈಗೆ 3 ವಿಕೆಟ್‌ಗಳ ರೋಮಾಂಚಕಾರಿ ಗೆಲುವನ್ನು ತಂದಿತ್ತಿದ್ದರು. ಮನಸ್ಸು ಮಾಡಿದರೆ ಮುಂಬೈ ಇದಕ್ಕೆ ಸೇಡು ತೀರಿಸಿಕೊಂಡು ಧೋನಿ ಪಡೆಯನ್ನು ತನ್ನ ಕೈಯಿಂದಲೇ ಕೂಟದಿಂದ ಹೊರದಬ್ಬಬಹುದು. ಆದರೆ ಮುಂಬೈ ಅವಸ್ಥೆ ಹೇಳತೀರದು. ಹೇಗೋ ಮಾಡಿ ಉಳಿದ 3 ಪಂದ್ಯಗಳನ್ನು ಆಡಿ ಮುಗಿಸಿದರೆ ಸಾಕು ಎಂಬಂತಿದೆ ರೋಹಿತ್‌ ಬಳಗದ ಸ್ಥಿತಿ!

ಗಂಭೀರವಾಗಿ ಆಡಿದ್ದೇ ಆದಲ್ಲಿ ಕಳೆದ ಪಂದ್ಯದಲ್ಲಿ ಕೋಲ್ಕತಾವನ್ನು ಹೊರದಬ್ಬುವ ಅವಕಾಶ ಮುಂಬೈ ಮುಂದಿತ್ತು. ತಾನು ಬೇಗ ನಿರ್ಗಮಿಸಿದ್ದಕ್ಕೆ ಪ್ರತಿಫಲವಾಗಿ ಉಳಿದ ತಂಡಗಳ ಪಾಲಿಗೆ ಕಂಟಕವಾಗಿ ಕಾಡುವ ಮೂಲಕ ಸುದ್ದಿಯಲ್ಲಿರಬಹುದಿತ್ತು. ಆದರೆ ಮುಂಬೈ 113ಕ್ಕೆ ಆಲೌಟಾಗಿ ತಾನೇ ಹಳ್ಳಕ್ಕೆ ಬಿತ್ತು. ಕೋಲ್ಕತಾಕ್ಕೆ ಲೈಫ್‌ ಕೊಟ್ಟಿತು. ವಿಳಂಬವಾಗಿ ಫಾರ್ಮ್ ಗೆ ಮರಳಿ 5 ವಿಕೆಟ್‌ ಉಡಾಯಿಸಿದ ಬುಮ್ರಾ ಸಾಧನೆ ವ್ಯರ್ಥಗೊಂಡಿತು. ಇನ್ನೀಗ ಚೆನ್ನೈಯನ್ನು ಹೊರದಬ್ಬಲು ಮುಂಬೈಯಿಂದ ಸಾಧ್ಯವೇ ಎಂಬ ಪ್ರಶ್ನೆ ಕಾಡದೇ ಇರದು.

ಜೋಶ್‌ ತೋರೀತೇ ಚೆನ್ನೈ?
ಚೆನ್ನೈ ಕೊನೆಯ ಪಂದ್ಯದಲ್ಲಿ ಡೆಲ್ಲಿಯನ್ನು 91 ರನ್ನುಗಳ ಭಾರೀ ಅಂತರದಿಂದ ಪರಾಭವಗೊಳಿಸಿ ಪರಾಕ್ರಮವೊಂದನ್ನು ತೋರ್ಪಡಿಸಿದೆ. ಧೋನಿ ವರ್ಸಸ್‌ ಪಂತ್‌ ಮುಖಾಮುಖಿ ಇದಾಗಿತ್ತು. ಚೆನ್ನೈ 6ಕ್ಕೆ 208 ರನ್‌ ಪೇರಿಸಿದರೆ, ಡೆಲ್ಲಿ 117ಕ್ಕೆ ಗಂಟುಮೂಟೆ ಕಟ್ಟಿತ್ತು. ಚೆನ್ನೈ ಇದೇ ಜೋಶ್‌ನಲ್ಲಿದ್ದರೆ ಮುಂಬೈಗೆ ಅಪಾಯ ತಪ್ಪಿದ್ದಲ್ಲ. ಆಗ ಧೋನಿ ಪಡೆ ಇನ್ನೂ ಕೆಲವು ದಿನ ರೇಸ್‌ನಲ್ಲಿರಬಹುದು.

ಆಲ್‌ರೌಂಡರ್‌ ರವೀಂದ್ರ ಜಡೇಜ ಗಾಯಾಳಾಗಿ ಕೂಟದಿಂದ ಹೊರಬಿದ್ದಿರುವುದರಿಂದ ಚೆನ್ನೈಗೆ ನಷ್ಟವೇನೂ ಇಲ್ಲ. ಅವರು ಈ ಕೂಟದಲ್ಲಿ ಸಾಧಿಸಿದ್ದು ಅಷ್ಟರಲ್ಲೇ ಇದೆ. ಸದ್ಯ ಚಾಲ್ತಿಯಲ್ಲಿರುವ ಆಟಗಾರನೆಂದರೆ ಕಿವೀಸ್‌ ಆರಂಭಕಾರ ಡೇವನ್‌ ಕಾನ್ವೆ. ಅವರು ಸತತ 3 ಅರ್ಧ ಶತಕ ಬಾರಿಸಿ ತಂಡಕ್ಕೆ ಹೊಸ ದಾರಿಯೊಂದನ್ನು ಕಲ್ಪಿಸಿದ್ದಾರೆ.

ಮೊಯಿನ್‌ ಅಲಿ ಕೂಡ ಫಾರ್ಮ್ ಗೆ ಮರಳಿದ್ದಾರೆ. ಯುವ ಬೌಲರ್‌ಗಳಾದ ಮುಕೇಶ್‌ ಚೌಧರಿ, ಸಿಮ್ರನ್‌ಜಿತ್‌ ಸಿಂಗ್‌, ಲಂಕೆಯ ಮಹೀಶ್‌ ತೀಕ್ಷಣ ಮತ್ತೆ ಹರಿತವಾದ ದಾಳಿ ಸಂಘಟಿಸಿದರೆ ಚೆನ್ನೈ ಮೇಲುಗೈಯನ್ನು ನಿರೀಕ್ಷಿಸಬಹುದು.

ಧೋನಿ ಸಾಹಸದಲ್ಲಿ ಗೆದ್ದ ಚೆನ್ನೈ
ಇತ್ತಂಡಗಳ ಮೊದಲ ಸುತ್ತಿನ ಪಂದ್ಯ ಅತ್ಯಂತ ರೋಚಕವಾಗಿ ಸಾಗಿತ್ತು. ಜೈದೇವ್‌ ಉನಾದ್ಕತ್‌ ಅವರ ಅಂತಿಮ ಓವರ್‌ನಲ್ಲಿ 17 ರನ್‌ ತೆಗೆಯುವ ಸವಾಲನ್ನು ಧೋನಿ ದಿಟ್ಟ ರೀತಿಯಲ್ಲಿ ಸ್ವೀಕರಿಸಿ, ಲಾಸ್ಟ್‌ ಬಾಲ್‌ ಫೋರ್‌ ಮೂಲಕ ಚೆನ್ನೈಗೆ 3 ವಿಕೆಟ್‌ಗಳ ಅಮೋಘ ಗೆಲುವನ್ನು ತಂದಿತ್ತಿದ್ದರು. ಮುಂಬೈ ಸೋಲು ಸತತ 7 ಪಂದ್ಯಗಳಿಗೆ ವಿಸ್ತರಿಸಲ್ಪಟ್ಟಿತ್ತು.

ಡ್ವೇನ್‌ ಪ್ರಿಟೋರಿಯಸ್‌ ಮೊದಲ ಎಸೆತಕ್ಕೆ ಔಟಾಗಿದ್ದರು. ಬ್ರಾವೊಗೆ ಗಳಿಸಲು ಸಾಧ್ಯವಾದದ್ದು ಒಂದು ರನ್‌ ಮಾತ್ರ. ಉಳಿದ 4 ಎಸೆತಗಳಿಂದ 16 ರನ್‌ ಬಾರಿಸುವ ಸವಾಲು ಚೆನ್ನೈ ಮುಂದಿತ್ತು. ಧೋನಿ 6, 4, 2, 4 ರನ್‌ ಸಿಡಿಸುವ ಮೂಲಕ ಮುಂಬೈಗೆ ಮರ್ಮಾಘಾತವಿಕ್ಕಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದರೂ ತಾನಿನ್ನೂ ಬೆಸ್ಟ್‌ ಫಿನಿಶರ್‌ ಆಗಿಯೇ ಉಳಿದಿದ್ದೇನೆ ಎಂಬುದನ್ನು ಧೋನಿ ಸಾಧಿಸಿ ತೋರಿಸಿದ್ದರು!

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.