ಗುಜರಾತ್‌ಗೆ ಪಂಚ್‌ ಕೊಟ್ಟೀತೇ ಪಂಜಾಬ್‌? ; ಗೆದ್ದರೆ ಗುಜರಾತ್‌ ಪ್ಲೇ ಆಫ್ ಖಾತ್ರಿ

ಸೋತರೆ ಪಂಜಾಬ್‌ಗೆ ಕಂಟಕ

Team Udayavani, May 3, 2022, 8:00 AM IST

ಗುಜರಾತ್‌ಗೆ ಪಂಚ್‌ ಕೊಟ್ಟಿàತೇ; ಗೆದ್ದರೆ ಗುಜರಾತ್‌ ಪ್ಲೇ ಆಫ್ ಖಾತ್ರಿ

ನವೀ ಮುಂಬಯಿ: ಐಪಿಎಲ್‌ ಪದಾರ್ಪಣೆಯಲ್ಲೇ ಅಮೋಘ ಪ್ರದರ್ಶನ ಕಾಯ್ದುಕೊಂಡು ಬಂದಿರುವ ಗುಜರಾತ್‌ ಟೈಟಾನ್ಸ್‌ ಮಂಗಳವಾರ ಹೊಸ ಎತ್ತರಕ್ಕೆ ಏರುವ ಸಾಧ್ಯತೆಯೊಂದರ ನಿರೀಕ್ಷೆಯಲ್ಲಿದೆ.

ಪಂಜಾಬ್‌ ಕಿಂಗ್ಸ್‌ ವಿರುದ್ಧ ಆಡಲಾಗುವ ಈ ಪಂದ್ಯವನ್ನು ಗೆದ್ದರೆ ಹಾರ್ದಿಕ್‌ ಪಾಂಡ್ಯ ಬಳಗ ಪ್ಲೇ ಆಫ್ಗೆ ಇನ್ನಷ್ಟು ಹತ್ತಿರವಾಗಲಿದೆ.

ಇನ್ನೊಂದೆಡೆ ಪಂಜಾಬ್‌ ಹಾದಿ ಕಠಿನಗೊಳ್ಳಲಿದೆ. ಎಂಥದೇ ಕಠಿನ ಸನ್ನಿವೇಶದಲ್ಲೂ ಎದುರಾಳಿಗೆ ತಿರುಗೇಟು ನೀಡಿ ಗೆದ್ದು ಬರುವ ಅಥವಾ ಎದುರಾಳಿ ಗೆಲುವನ್ನು ಕಸಿಯುವ ಅದೃಷ್ಟಶಾಲಿ ತಂಡ ಈ ಗುಜರಾತ್‌ ಟೈಟಾನ್ಸ್‌. ಆಡಿದ 9 ಪಂದ್ಯಗಳಲ್ಲಿ ಸೋತದ್ದು ಒಂದರಲ್ಲಿ ಮಾತ್ರ. ಹೊಂದಿರುವ ಅಂಕ 16. ರನ್‌ರೇಟ್‌ +0.377. ಇನ್ನೂ 5 ಪಂದ್ಯಗಳನ್ನು ಆಡಲಿಕ್ಕಿದೆ. ಹೀಗಾಗಿ ಗುಜರಾತ್‌ ಒತ್ತಡ ಮುಕ್ತ ತಂಡ. ಇದೇ ಖುಷಿ ಹಾಗೂ ಜೋಶ್‌ನಲ್ಲಿ ಪಂಜಾಬ್‌ ಮೇಲೆ ಸವಾರಿ ಮಾಡುವ ಸಿದ್ಧತೆಯಲ್ಲಿದೆ.

ಪಂಜಾಬ್‌ಗ ಜಯ ಅನಿವಾರ್ಯ
ಇನ್ನೊಂದೆಡೆ ಪಂಜಾಬ್‌ ಕಿಂಗ್ಸ್‌ 9 ಪಂದ್ಯಗಳಲ್ಲಿ ನಾಲ್ಕನ್ನಷ್ಟೇ ಜಯಿಸಿದೆ. ಗುಜರಾತ್‌ ಎದುರಿನ ಮೊದಲ ಸುತ್ತಿನ ಪಂದ್ಯವನ್ನು ಅಂತಿಮ ಎಸೆತದಲ್ಲಿ ಕಳೆದುಕೊಂಡಿದೆ. ಮತ್ತೆ ಸೋತರೆ ಮಾಯಾಂಕ್‌ ಅಗರ್ವಾಲ್‌ ಪಡೆಯ ಪ್ಲೇ ಆಫ್ ಪ್ರವೇಶಕ್ಕೆ ಭಾರೀ ಹೊಡೆತ ಬೀಳಲಿದೆ. ಹೀಗಾಗಿ ಪಂಜಾಬ್‌ಗ ಇಲ್ಲಿ ಗೆಲುವು ಅನಿವಾರ್ಯ. ಅಷ್ಟೇ ಅಲ್ಲ, ಮುಂದಿನೆಲ್ಲ ಪಂದ್ಯಗಳಲ್ಲೂ ಜಯ ಸಾಧಿಸುತ್ತ ಹೋಗಬೇಕಿದೆ.

ನಾಯಕ ಮಾಯಾಂಕ್‌ ಅಗರ್ವಾಲ್‌, ಶಿಖರ್‌ ಧವನ್‌, ಜಾನಿ ಬೇರ್‌ಸ್ಟೊ, ಲಿಯಮ್‌ ಲಿವಿಂಗ್‌ಸ್ಟೋನ್‌ ಅವರಂಥ ಸ್ಟಾರ್‌ ಆಟಗಾರರನ್ನು ಹೊಂದಿಯೂ ಪಂಜಾಬ್‌ ಇನ್ನೂ ನಿರೀಕ್ಷಿತ ಎತ್ತರ ತಲುಪಿಲ್ಲ. ಕಳೆದ ಪಂದ್ಯದಲ್ಲಿ ಲಕ್ನೋವನ್ನು 153ಕ್ಕೆ ನಿಯಂತ್ರಿಸಿದರೂ ಇದನ್ನು ಬೆನ್ನಟ್ಟಿ ಗೆಲ್ಲಲಾಗದಿದ್ದುದು ಪಂಜಾಬ್‌ ಅವಸ್ಥೆಗೆ ಸಾಕ್ಷಿ.
ರಬಾಡ, ಆರ್ಷದೀಪ್‌, ಸಂದೀಪ್‌, ರಿಷಿ ಧವನ್‌, ರಾಹುಲ್‌ ಚಹರ್‌ ಅವರನ್ನೊಳಗೊಂಡ ಪಂಜಾಬ್‌ ಬೌಲಿಂಗ್‌ ಪರವಾಗಿಲ್ಲ ಎಂಬ ಮಟ್ಟದಲ್ಲಿದೆ. ಆದರೆ ಬಲಿಷ್ಠ ಬ್ಯಾಟಿಂಗ್‌ ಲೈನ್‌ಅಪ್‌ ಹೊಂದಿರುವ ಹಾಗೂ ಉತ್ತಮ ಲಯದಲ್ಲಿರುವ ಗುಜರಾತ್‌ಗೆ ನಿಯಂತ್ರಣ ಹೇರುವುದು ಸುಲಭವಲ್ಲ. ಆರ್‌ಸಿಬಿ ಎದುರಿನ ಕಳೆದ ಪಂದ್ಯದ 171 ರನ್‌ ಗುರಿಯನ್ನು ಗುಜರಾತ್‌ ನಾಲ್ಕೇ ವಿಕೆಟ್‌ ನಷ್ಟದಲ್ಲಿ ಸಾಧಿಸಿತ್ತು.

ಗುಜರಾತ್‌ ವೈಭವ: ಸಾಹಾ, ಗಿಲ್‌, ಪಾಂಡ್ಯ, ಮಿಲ್ಲರ್‌, ತೆವಾಟಿಯಾ, ರಶೀದ್‌ ಖಾನ್‌ ಅವರೆಲ್ಲ ಒತ್ತಡವನ್ನು ಮೀರಿ ನಿಂತ ಆಟಗಾರರೆಂಬುದನ್ನು ಸಾಬೀತುಪಡಿಸಿದ್ದಾರೆ. ಇವರಲ್ಲಿ ಮ್ಯಾಥ್ಯೂ ವೇಡ್‌ ಬದಲು ಬಂದ ಸಾಹಾ ಅವಕಾಶವನ್ನು ಬಾಚಿಕೊಳ್ಳುತ್ತಿದ್ದಾರೆ. ನಾಯಕ ಪಾಂಡ್ಯ ಯಾವ ಕ್ರಮಾಂಕದಲ್ಲೂ ಬ್ಯಾಟ್‌ ಬೀಸಲು ಸೈ ಎಂಬುದನ್ನು ಸಾಬೀತುಪಡಿಸಿದ್ದಾರೆ. ಕೂಟದ ಬೆಸ್ಟ್‌ ಫಿನಿಶರ್‌ಗಳಾದ ಮಿಲ್ಲರ್‌, ತೆವಾಟಿಯಾ, ರಶೀದ್‌ ಒಂದೇ ತಂಡದಲ್ಲಿರುವುದು ಗುಜರಾತ್‌ ವೈಭವವನ್ನು ತೆರೆದಿಟ್ಟಿದೆ.

ಗುಜರಾತ್‌ ಬೌಲಿಂಗ್‌ ತೀರಾ ಘಾತಕವೇನಲ್ಲ. ಶಮಿ, ಫ‌ರ್ಗ್ಯುಸನ್‌, ಸಂಗ್ವಾನ್‌, ಜೋಸೆಫ್, ಆರೋನ್‌ ಇಲ್ಲಿನ ಪ್ರಮುಖರು. ಇವರಲ್ಲಿ ರಶೀದ್‌ ಖಾನ್‌ ಮೊದಲಿನ ಚಾರ್ಮ್ ಹೊಂದಿಲ್ಲ. ಇದರ ಲಾಭವೆತ್ತಿದರೆ ಪಂಜಾಬ್‌ಗ ಮೇಲುಗೈ ಸಾಧ್ಯ ಎನ್ನಬಹುದೋ ಏನೋ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.