ಆರ್‌ಸಿಬಿ-ಮುಂಬೈಗೆ ಬಿಗ್‌ ಟೆಸ್ಟ್‌ : ಯಾರು ಗೆಲುವಿನ ಖಾತೆ ತೆರೆಯಲಿದ್ದಾರೆ


Team Udayavani, Sep 26, 2021, 8:00 AM IST

ಆರ್‌ಸಿಬಿ-ಮುಂಬೈಗೆ ಬಿಗ್‌ ಟೆಸ್ಟ್‌ : ಯಾರು ಗೆಲುವಿನ ಖಾತೆ ತೆರೆಯಲಿದ್ದಾರೆ

ದುಬಾೖ : ಐಪಿಎಲ್‌ ಯುಎಇಯಲ್ಲಿ ಮುಂದುವರಿದ ಬಳಿಕ ಆಡಿದ ಎರಡೂ ಪಂದ್ಯಗಳನ್ನು ಸೋತಿರುವ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು ವಿರಾಟ್‌ ಕೊಹ್ಲಿ ಸಾರಥ್ಯದ ರಾಯಲ್‌ ಚಾಲೆಂಜರ್ ಬೆಂಗಳೂರು ರವಿವಾರ ಮುಖಾಮುಖೀಯಾಗಲಿವೆ. ಎರಡೂ ತಂಡಗಳಿಗೆ ಇದೊಂದು ಬಿಗ್‌ ಟೆಸ್ಟ್‌ ಆಗಿದ್ದು, ಒಂದು ತಂಡ ಗೆಲುವಿನ ಖಾತೆ ತೆರೆಯಲಿದೆ. ಈ ಅದೃಷ್ಟ ಯಾರಿಗಿದೆ ಎಂಬುದೊಂದು ಕುತೂಹಲ.

ಅಬುಧಾಬಿಯಲ್ಲಿ ನಡೆಯುವ ದಿನದ ಮೊದಲ ಪಂದ್ಯದಲ್ಲಿ ಚೆನ್ನೈಮತ್ತು ಕೋಲ್ಕತಾ ನೈಟ್‌ರೈಡರ್ ಎದುರಾಗಲಿವೆ. ಈ ತಂಡಗಳು ಯುಎಇ ಆವೃತ್ತಿಯ ಎರಡೂ ಪಂದ್ಯಗಳನ್ನು ಗೆದ್ದಿವೆ. ಹೀಗಾಗಿ ಒಂದು ತಂಡಕ್ಕೆ ಮೊದಲ ಸೋಲು ಎದುರಾಗಲಿದ್ದು, ಇನ್ನೊಂದು ಟೀಮ್‌ ಗೆಲುವಿನ ಹ್ಯಾಟ್ರಿಕ್‌ ಸಾಧಿಸಲಿದೆ.

ಫ‌ಸ್ಟ್‌ ರೌಂಡ್‌; ಆರ್‌ಸಿಬಿ ವಿನ್‌
2021ರ ಐಪಿಎಲ್‌ ಉದ್ಘಾಟನಾ ಪಂದ್ಯದಲ್ಲಿ ಮುಂಬೈ-ಆರ್‌ಸಿಬಿ ಎದುರಾಗಿದ್ದವು. ಚೆನ್ನೈಯಲ್ಲಿ ನಡೆದ ಈ ಮೇಲಾಟದಲ್ಲಿ ಕೊಹ್ಲಿ ಪಡೆ 2 ವಿಕೆಟ್‌ಗಳ ರೋಚಕ ಜಯ ಸಾಧಿಸಿತ್ತು. ಮುಂಬೈ 9 ವಿಕೆಟಿಗೆ 159 ರನ್‌ ಬಾರಿಸಿದರೆ, ಬೆಂಗಳೂರು 8 ವಿಕೆಟ್‌ ನಷ್ಟಕ್ಕೆ 160 ರನ್‌ ಹೊಡೆಯಿತು. ಅಂತಿಮ ಎಸೆತದಲ್ಲಿ ಹರ್ಷಲ್‌ ಸಿಂಗಲ್‌ ತೆಗೆದು ತಂಡವನ್ನು ಗೆಲ್ಲಿಸಿದ್ದರು. ಬೌಲಿಂಗ್‌ನಲ್ಲೂ ಮಿಂಚಿದ ಪಟೇಲ್‌ 27ಕ್ಕೆ 5 ವಿಕೆಟ್‌ ಹಾರಿಸಿ ಪಂದ್ಯಶ್ರೇಷ್ಠರಾಗಿ ಮೂಡಿಬಂದರು. ಆರ್‌ಸಿಬಿ ಕೂಟದ ಉದ್ಘಾಟನಾ ಪಂದ್ಯವನ್ನು ಗೆದ್ದ ಮೊದಲ ನಿದರ್ಶನ ಇದಾಗಿತ್ತು.

ಯುಎಇಗೆ ಆಗಮಿಸಿದ ಬಳಿಕ ಆರ್‌ಸಿಬಿ ಮತ್ತು ಮುಂಬೈ ಏಕರೀತಿಯ ಪ್ರದರ್ಶನ ನೀಡುತ್ತಿವೆ. ಎರಡೂ ತಂಡಗಳ ಬ್ಯಾಟಿಂಗ್‌ ಘೋರ ವೈಫ‌ಲ್ಯ ಕಂಡಿದೆ. ದೊಡ್ಡ ಮೊತ್ತ ದಾಖಲಾಗುತ್ತಿಲ್ಲ. ಹೀಗಾಗಿ ಬೌಲರ್ ಮೇಲೆ ಒತ್ತಡ ಬೀಳುತ್ತಿದೆ. ರವಿವಾರ ಪರಿಸ್ಥಿತಿ ಬದಲಾದೀತೇ ಎಂಬುದನ್ನು ಕಾದು ನೋಡಬೇಕು.

ಸೇಡು ತೀರಿಸುವ ತವಕ
ಯುಎಇಗೆ ಬಂದ ಬಳಿಕ ಕೆಕೆಆರ್‌ ನಸೀಬು ಬದಲಾದಂತಿದೆ. ಆಡಿದ ಎರಡೂ ಪಂದ್ಯಗಳನ್ನು ಅದು ಗೆದ್ದಿದೆ. ಮೊದಲು ಆರ್‌ಸಿಬಿ, ಬಳಿಕ ಮುಂಬೈಗೆ ಬಲೆ ಬೀಸುವಲ್ಲಿ ಯಶಸ್ವಿಯಾಗಿದೆ. ಎಡಗೈ ಆರಂಭಕಾರ ವೆಂಕಟೇಶ್‌ ಅಯ್ಯರ್‌ ಪ್ರಚಂಡ ಪ್ರದರ್ಶನ ನೀಡುತ್ತಿರುವುದು ಮಾರ್ಗನ್‌ ಪಡೆಗೆ ಬಂಪರ್‌ ಆಗಿ ಪರಿಣಮಿಸಿದೆ.

ಮುಂಬಯಿಯಲ್ಲಿ ನಡೆದ ಮೊದಲ ಸುತ್ತಿನ ದೊಡ್ಡ ಮೊತ್ತದ ಮೇಲಾಟದಲ್ಲಿ ಚೆನ್ನೈ 18 ರನ್ನುಗಳಿಂದ ಗೆದ್ದು ಬಂದಿತ್ತು. ಧೋನಿ ಪಡೆಯ 3ಕ್ಕೆ 220 ರನ್ನಿಗೆ ಜವಾಬಿತ್ತ ಕೆಕೆಆರ್‌ 19.1 ಓವರ್‌ಗಳಲ್ಲಿ 202ರ ತನಕ ಬಂದಿತ್ತು. ಅಂದಿನ ಸೋಲಿಗೆ ಮಾರ್ಗನ್‌ ಪಡೆ ಸೇಡು ತೀರಿಸುವ ತವಕದಲ್ಲಿದೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.