IPS: ನಿವೃತ್ತಿಗೆ 2 ತಿಂಗಳು ಇರುವಾಗಲೇ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ
Team Udayavani, Feb 9, 2024, 8:29 PM IST
ಬೆಂಗಳೂರು: ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿ ಸಿ.ಎಚ್.ಪ್ರತಾಪ್ ರೆಡ್ಡಿ ಅವರು ಸೇವಾ ನಿವೃತ್ತಿಗೆ ಎರಡು ತಿಂಗಳು ಬಾಕಿ ಇರುವಾಗಲೇ ಸ್ವಯಂ ನಿವೃತ್ತಿ ಕೋರಿ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಪ್ರತಾಪ್ ರೆಡ್ಡಿ ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ಸಲ್ಲಿಸಿದ್ದಾರೆಂದು ತಿಳಿದು ಬಂದಿದೆ. ಎ.30ಕ್ಕೆ ತನ್ನನ್ನು ಸೇವೆಯಿಂದ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಇವರು ಮುಂದಿನ ಮೇ ತಿಂಗಳು ನಿವೃತ್ತಿಯಾಗುವವರಿದ್ದರು. ಇದು ರಾಜ್ಯ ಪೊಲೀಸ್ ವಲಯದಲ್ಲಿ ಹಲವು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ.
ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರಾಗಿರುವ ಪ್ರತಾಪ್ ರೆಡ್ಡಿ ಬಿ.ಟೆಕ್. ಪದವೀಧರರಾಗಿದ್ದು, 1991ರಲ್ಲಿ ಕರ್ನಾಟಕ ಕೆಡರ್ನ ಐಪಿಎಸ್ ಅಧಿಕಾರಿಯಾಗಿ ಸೇವೆಗೆ ಸೇರಿದ್ದರು. ಸಿಬಿಐನ ಭ್ರಷ್ಟಾಚಾರ ನಿಗ್ರಹ ದಳದ ಮುಂಬಯಿ ಮತ್ತು ಬೆಂಗಳೂರು ವಿಭಾಗದಲ್ಲೂ ಸೇವೆ ಸಲ್ಲಿಸಿದ್ದಾರೆ. ಬ್ಯಾಂಕಿಂಗ್ ಮತ್ತು ಸೈಬರ್ ಸೆಕ್ಯುರಿಟಿ ವಿಭಾಗದ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವ ಮೂಲಕ ರಾಷ್ಟ್ರೀಯ ಮಟ್ಟದಲ್ಲೂ ಪ್ರಸಿದ್ಧಿ ಪಡೆದಿದ್ದರು. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ