ಉಗ್ರರ ನೆಲೆಯಾಯಿತೇ ಚಾಮರಾಜನಗರ?
Team Udayavani, Jan 13, 2020, 3:06 AM IST
ಚಾಮರಾಜನಗರ: ಈ ಜಿಲ್ಲೆಯಲ್ಲಿ ಯಾವ ಘಳಿಗೆಯಲ್ಲಿ ಬೇಕಾದರೂ ನಕ್ಸಲ್ ಚಟುವಟಿಕೆ ಅಥವಾ ಉಗ್ರರ ಚಟುವಟಿಕೆಗಳು ನಡೆಯಬಹುದೆಂಬ ಆತಂಕ ಇತ್ತು. ಅದೀಗ ನಿಜವಾಗಿದೆ. ಕೇರಳ ಮತ್ತು ತಮಿಳುನಾಡು ರಾಜ್ಯಗಳಿಗೆ ಹೊಂದಿಕೊಂಡಂತೆ ಇರುವ ಚಾಮರಾಜನಗರ ಕರ್ನಾಟಕದ ದಕ್ಷಿಣ ಗಡಿ ಜಿಲ್ಲೆ. ದಟ್ಟವಾದ ಅರಣ್ಯದಲ್ಲಿ ಉಗ್ರರು, ನಕ್ಸಲಿಗರು ಇರುವ ಮಾಹಿತಿ ಪೊಲೀಸ್ ಗುಪ್ತದಳಕ್ಕೆ ಸಿಕ್ಕಿದ್ದು, ಹೀಗಾಗಿ ನೆರೆ ರಾಜ್ಯದ ಪೊಲೀಸರು ಅರಣ್ಯ ಇಲಾಖೆಯನ್ನು ಸಂಪರ್ಕಿಸಿದ್ದಾರೆ.
ಕಳೆದ ಅಕ್ಟೋಬರ್ ತಿಂಗಳಲ್ಲಿ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಮೊಬೈಲ್ ಟವರ್ನಿಂದ ಅಂತರ್ ರಾಷ್ಟ್ರೀಯ ಕರೆಯೊಂದು ಹೋಗಿತ್ತು. ಇದಾದ ಬಳಿಕ ಪೊಲೀಸರು ಹೆಚ್ಚು ಜಾಗರೂಕರಾಗಿದ್ದರು. ಕೇರಳ ಸೇರಿ ಇತರ ರಾಜ್ಯಗಳೊಂದಿಗೆ ನಿರಂತರ ಸಂಪರ್ಕ ಹೊಂದಿದವರ ಮೇಲೆ ನಿಗಾ ಇರಿಸಲಾಗಿತ್ತು. ಇದರ ಫಲವಾಗಿ ಶನಿವಾರ ರಾತ್ರಿ ಇಬ್ಬರು ಶಂಕಿತ ಉಗ್ರರನ್ನ ಬಂಧಿಸಲಾಗಿದೆ.
ಇಬ್ಬರು ಶಂಕಿತ ಉಗ್ರರ ಬಂಧನದ ನಂತರ ಗಡಿ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳಕ್ಕೆ ಸಂಪರ್ಕ ಕಲ್ಪಿಸುವ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್ ಪೋಸ್ಟ್ ನಲ್ಲಿ ಎಲ್ಲಾ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.
* ಕೆ.ಎಸ್. ಬನಶಂಕರ ಆರಾಧ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ