ಸ್ವಂತ ಪಕ್ಷ ಕಟ್ಟುವತ್ತ ಪ್ರಶಾಂತ್ ಕಿಶೋರ್?
Team Udayavani, May 3, 2022, 8:05 AM IST
ಪಟ್ನಾ: ಹತ್ತಾರು ವರ್ಷಗಳಿಂದ ಬಿಜೆಪಿ, ಜೆಡಿಯು, ಟಿಎಂಸಿ, ಆಮ್ ಆದ್ಮಿ ಪಾರ್ಟಿ (ಆಪ್) ಪಕ್ಷಗಳಿಗೆ ಚುನಾವಣ ವ್ಯೂಹ ರಚನಾಕಾರರಾಗಿ ಆ ಪಕ್ಷಗಳನ್ನು ಅಧಿಕಾರಕ್ಕೆ ತರುವಲ್ಲಿ ಗಮನಾರ್ಹ ಪಾತ್ರ ವಹಿಸಿದ್ದ ಪ್ರಶಾಂತ್ ಕಿಶೋರ್, ತಮ್ಮ ತವರು ರಾಜ್ಯವಾದ ಬಿಹಾರದಲ್ಲಿ ಹೊಸತೊಂದು ಪಕ್ಷ ಕಟ್ಟುವ ಸುಳಿವು ನೀಡಿದ್ದಾರೆ.
ಕಾಂಗ್ರೆಸ್ ಸೇರುವ ಅವರ ಯತ್ನ ವಿಫಲದ ಬಳಿಕ ಈ ಬೆಳವಣಿಗೆ ನಡೆದಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, “ಜನ ಸ್ವರಾಜ್ಯ’ ಎಂಬ ಪರಿಕಲ್ಪನೆಯಡಿ, ಜನರ ಸಮಸ್ಯೆಗಳನ್ನು ಆಳವಾಗಿ ಅಧ್ಯ ಯನ ಮಾಡಿ, ಪ್ರಜಾಪ್ರಭುತ್ವ ಆಧಾರದಲ್ಲಿ ಅವರ ಸಮಸ್ಯೆಗಳಿಗೆ ಪರಿಹಾರ ನೀಡುವುದು ತಮ್ಮ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. ಮೇ 5ರಂದು ಅವರು ಪತ್ರಿಕಾಗೋಷ್ಠಿ ನಡೆಸಲಿದ್ದು ಅದರಲ್ಲಿ ಅವರ ಉದ್ದೇಶವನ್ನು ಸ್ಪಷ್ಟಪಡಿಸಲಿದ್ದಾರೆ.
2021ರಲ್ಲಿ ಪಶ್ಚಿಮ ಬಂಗಾಲದಲ್ಲಿ ಟಿಎಂಸಿಯನ್ನು ಪುನಃ ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾದ ಅನಂತರ, ವೃತ್ತಿಪರ ಚುನಾವಣ ವ್ಯೂಹ ರಚನೆಗಾರ ರಾಗಿ ತಾವು ಮುಂದುವರಿಯುವುದಿಲ್ಲ ಎಂದು ಕಿಶೋರ್ ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ