ಬಂದ್‌ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ ತರವೇ?


Team Udayavani, Sep 28, 2021, 5:45 AM IST

ಬಂದ್‌ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ ತರವೇ?

ಇಡೀ ದೇಶ ಈಗಷ್ಟೇ ಕೊರೊನಾ ಲಾಕ್‌ಡೌನ್‌ಗಳಿಂದ ಚೇತರಿಕೆ ಕಂಡು, ಆರ್ಥಿಕ ಅಭಿವೃದ್ಧಿಯತ್ತ ಸಾಗುತ್ತಿದೆ. ಜನರೂ ತಮ್ಮ ವ್ಯಾಪಾರ, ವ್ಯವಹಾರಗಳನ್ನು ಉತ್ತಮಗೊಳಿಸುವತ್ತ ನೋಡುತ್ತಿದ್ದಾರೆ. ಇದರ ಬೆನ್ನಲ್ಲೇ, ಪದೇ ಪದೆ ಪ್ರತಿಭಟನೆ, ಬಂದ್‌ ನೆಪದಲ್ಲಿ ಸಾರ್ವಜನಿಕರ ಬದುಕಿಗೆ ಅಡ್ಡಿ ಮಾಡುತ್ತಿರುವುದು ಸರಿಯೇ ಎಂಬ ಪ್ರಶ್ನೆ ಎದ್ದಿದೆ.

ಕೇಂದ್ರ ಸರಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ಒಂದು ವರ್ಷದಿಂದ ಪ್ರತಿಭಟನೆ, ಹೆದ್ದಾರಿ ತಡೆಗಳು, ಬಂದ್‌ನಂಥ ಹೋರಾಟಗಳು ನಡೆಯುತ್ತಲೇ ಇವೆ. ಇತ್ತ ಕೇಂದ್ರ ಸರಕಾರ, ತನ್ನ ಮೂರು ಕಾಯ್ದೆಗಳೂ ಉತ್ತಮವಾಗಿವೆ. ಹಾಗಾಗಿ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳುತ್ತಿದೆ. ಆದರೆ ಅತ್ತ ಸಂಯುಕ್ತ  ಕಿಸಾನ್‌ ಮೋರ್ಚಾವೂ ತನ್ನ ಪಟ್ಟು ಸಡಿಲಿಸುತ್ತಿಲ್ಲ. ಹೀಗಾಗಿ ಸರಕಾರ ಮತ್ತು ರೈತರ ನಡುವೆ ಸಾರ್ವಜನಿಕರು ಹೈರಾಣಾಗಿರುವುದು ಮಾತ್ರ ಸತ್ಯ.  ಈ ಪ್ರಶ್ನೆ ಎದ್ದಿರುವುದೇ ಸೋಮವಾರ ನಡೆದ ದೇಶವ್ಯಾಪಿ ಬಂದ್‌ ಬಗ್ಗೆ. ಹೋರಾಟವೇನೋ ಸರಿ, ಆದರೆ ಬಂದ್‌ ಆಚರಿಸುವ ಮೂಲಕ

ನಮ್ಮ ಮೇಲೇಕೆ ಗದಾಪ್ರಹಾರ ಎಂದು ಹೊಟೇಲ್‌ ಉದ್ಯಮಿಗಳು, ಅಂಗಡಿಗಳ ಮಾಲಕರು, ಇತರ ಸಣ್ಣಪುಟ್ಟ ವ್ಯಾಪಾರಿಗಳು ಪ್ರಶ್ನಿಸುತ್ತಿದ್ದಾರೆ. ಕೊರೊನಾ ಕಾಲದಲ್ಲಿ ನಾವು ತಿಂಗಳುಗಟ್ಟಲೆ ಲಾಕ್‌ಡೌನ್‌ನಂಥ ಬಂದ್‌ ಅನುಭವಿಸಿದ್ದೇವೆ. ಈಗಲೂ ಏನಾದರೂ ಒಂದು ನೆಪ ಮಾಡಿಕೊಂಡು ಬಂದ್‌ಗೆ ಕರೆ ನೀಡುವುದು ಸೂಕ್ತವೇ ಎಂಬುದು ಅವರ ಪ್ರಶ್ನೆಯಾಗಿದೆ.

ಇದನ್ನೂ ಓದಿ:ಬಿಜೆಪಿ ಸರ್ಕಾರ ಕೃಷಿ ವಿರೋಧಿ ನೀತಿ ಕೈ ಬಿಟ್ಟು ರೈತರ ಪರವಾಗಿ ನಿಲ್ಲಲಿ: ಪ್ರವೀಣ ಹೆಗಡೆ

ಅಷ್ಟೇ ಅಲ್ಲ, ರೈತರ ಹೋರಾಟಕ್ಕೆ ನಮ್ಮ ವಿರೋಧವಿಲ್ಲ, ಕಾಯ್ದೆಯಿಂದ ಅವರಿಗೆ ತೊಂದರೆಯಾಗುವುದಾದರೆ ಹೋರಾಟ ಮಾಡಲಿ. ಆದರೆ ಹೋರಾಟದ ದಾರಿ ಮಾತ್ರ ಸಾರ್ವಜನಿಕರಿಗೆ ತೊಂದರೆ ಕೊಡುವಂತೆ ಇರಬಾರದು ಎಂದು ಹೇಳಿದ್ದಾರೆ.  ಹೀಗಾಗಿಯೇ ಸೋಮವಾರ ಕರೆ ನೀಡಲಾಗಿದ್ದ ಭಾರತ್‌ ಬಂದ್‌ಗೆ ಪಂಜಾಬ್‌ ಮತ್ತು ಹರಿಯಾಣ ಬಿಟ್ಟು ಬೇರೆಡೆ ಅಷ್ಟೇನೂ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಕರ್ನಾಟಕದಲ್ಲೂ ಬಂದ್‌ಗೆ ನೈತಿಕ ಬೆಂಬಲವಷ್ಟೇ ಸಿಕ್ಕಿತು. ಹಾಗಂತ ರೈತರ ಹೋರಾಟಕ್ಕೆ ಯಾರೂ ಬೆಂಬಲ ಕೊಡುತ್ತಿಲ್ಲ ಎಂಬರ್ಥವಲ್ಲ. ಆದರೆ ಬಂದ್‌ ಮಾದರಿಯ ಹೋರಾಟ ಬೇಡ ಎಂಬುದು ಜನರ ನೇರ ಪ್ರತಿಕ್ರಿಯೆಯಾಗಿತ್ತು ಎಂಬುದನ್ನು ರೈತ ಮುಖಂಡರು ಅರ್ಥ ಮಾಡಿಕೊಳ್ಳಬೇಕು.

ಈಗಿನ ಪರಿಸ್ಥಿತಿ ಉತ್ತಮವಾಗಿಯೇನೂ ಇಲ್ಲ. ರೈತರ ಜತೆಗೆ ಎಲ್ಲ ವರ್ಗದವರೂ ಕಷ್ಟ ಅನುಭವಿಸುತ್ತಿದ್ದಾರೆ. ಕೊರೊನಾ ಇಡೀ ಮನುಕುಲಕ್ಕೇ ಕಾಡಿದೆ. ಮುಂದಿನ ದಿನಗಳಿಗಾದರೂ ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುವ ಹಪಾಹಪಿಯೂ ಎಲ್ಲರಲ್ಲೂ ಇದೆ. ಎಲ್ಲಿ ಮತ್ತೂಂದು ಕೊರೊನಾ ಲಾಕ್‌ಡೌನ್‌ ಬಂದು ಬಿಡುತ್ತದೆಯೋ ಎಂಬ ಆತಂಕವೂ ಜನರಲ್ಲಿದೆ. ಹೀಗಾಗಿ ಸಾರ್ವಜನಿಕ ಭಾವನೆಗಳಿಗೆ ಧಕ್ಕೆಯಾಗದ ರೀತಿಯಲ್ಲಿ  ಬಂದ್‌ಗೆ ಕರೆ ನೀಡುವವರು ವರ್ತಿಸಬೇಕು.

ಇನ್ನು ಕರ್ನಾಟಕದಲ್ಲೂ ಕೆಲವು ಮುಖಂಡರು ಬಂದ್‌ ಎಂಬ ಪದವನ್ನು ತೀರಾ ಹಗುರವಾಗಿ ಪರಿಗಣಿಸಿದಂತೆ ಕಾಣುತ್ತದೆ. ಎಲ್ಲದಕ್ಕೂ ಬಂದ್‌, ಪ್ರತಿಭಟನೆ, ಕೆಲಸಕ್ಕೆ ಗೈರು ಹೀಗೆ ನಾನಾ ರೀತಿಯ ವಿಧಾನಗಳನ್ನು ಅನುಸರಿಸಲಾಗುತ್ತಿದೆ. ಎಲ್ಲೋ ಒಂದು ಕಡೆ ಸಾರ್ವಜನಿಕರ ಆಕ್ರೋಶಕ್ಕೆ ತಾವು ತುತ್ತಾಗುತ್ತಿದ್ದೇವೆ ಎಂಬುದನ್ನು ಮರೆತಂತೆ ಕಾಣಿಸುತ್ತಿದೆ. ಇನ್ನು ಮುಂದಾದರೂ ಹೋರಾಟದ ನೆಪದಲ್ಲಿ ಸಾರ್ವಜನಿಕರಿಗೆ ಅಡ್ಡಿ ಪಡಿಸುವುದು ಬೇಡ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.