28 ಕೋಟಿ ರೂ.ಗೆ ವಿಶ್ವನಾಥ್‌ ಸೇಲಾಗಿದ್ದಾರಾ?


Team Udayavani, Jul 20, 2019, 3:07 AM IST

28koti-ruge

ವಿಧಾನಸಭೆ: “ಜೆಡಿಎಸ್‌ನ ಎಚ್‌.ವಿಶ್ವನಾಥ್‌ ಅವರು ಎಷ್ಟು ಕೋಟಿಗೆ ಸೇಲಾಗಿದ್ದಾರೆ ಎಂಬುದನ್ನು ಈ ಸದನಕ್ಕೆ ಬಂದು ತಿಳಿಸಬೇಕು. ಬಿಜೆಪಿ ಜತೆ ವ್ಯವಹಾರ ಕುದುರಿಸಿದ್ದ ಬಗ್ಗೆ ನನ್ನ ಜತೆ ಅವರು ಹೇಳಿದ್ದಾರೆ’ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಬಾಂಬ್‌ ಸಿಡಿಸಿದ್ದಾರೆ.

ವಿಶ್ವಾಸಮತ ನಿರ್ಣಯದ ಮೇಲಿನ ಚರ್ಚೆ ಮೇಲೆ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತನಾಡುತ್ತಿದ್ದಾಗ ಮಧ್ಯಪ್ರವೇಶ ಮಾಡಿದ ಅವರು, ಜೆಡಿಎಸ್‌ ಶಾಸಕ ಎಚ್‌.ವಿಶ್ವನಾಥ್‌ ಅವರು ಒಬ್ಬ ಪತ್ರಕರ್ತರ ಮಧ್ಯಸ್ಥಿಕೆಯಲ್ಲಿ 28 ಕೋಟಿ ರೂ.ಗೆ ವ್ಯವಹಾರ ಕುದುರಿಸಿದ್ದಾರೆ ಎಂಬ ಮಾಹಿತಿಯಿದೆ. ಪತ್ರಕರ್ತರ ಗ್ಯಾಲರಿಯಲ್ಲಿ ವಿಶ್ವನಾಥ್‌ ಮುಂಬೈಗೆ ಹೋಗಲು ಮಧ್ಯಸ್ಥಿಕೆ ವಹಿಸಿದ ಪತ್ರಕರ್ತ ಇದ್ದಾರೆ. ಸಭಾಧ್ಯಕ್ಷರು ಅವಕಾಶ ಕೊಟ್ಟರೆ ಜಿ.ಟಿ.ದೇವೇಗೌಡರಿಗೆ ಆಪ್ತರಾದ ಆ ಪತ್ರಕರ್ತರ ಹೆಸರು ಹೇಳುತ್ತೇನೆ ಎಂದರು.

ಪುರಸಭೆ ಚುನಾವಣೆಯಲ್ಲಿ ವಿಶ್ವನಾಥ್‌ ಅವರು ಕೇಳಿದವರಿಗೆ ಆರು “ಬಿ’ ಫಾರಂ ಕೊಟ್ಟಿದ್ದೆ. ಆದರೂ ಅವರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನ ವಿರುದ್ಧವೇ ಆರೋಪ ಮಾಡಿ ರಾಜೀನಾಮೆ ಕೊಟ್ಟಿದ್ದರು. ಆಗ ಅವರನ್ನು ನನ್ನ ತೋಟಕ್ಕೆ ಕರೆಸಿದ್ದೆ. ಮಂತ್ರಿಯಾಗುವ ಆಸೆಯಿದೆಯೇ ಎಂದು ಕೇಳಿದ್ದೆ. ಆಗ ಅವರು ಅಂತದ್ದೇನೂ ಇಲ್ಲ. ಚುನಾವಣೆಗೆ ಸಾಲ ಮಾಡಿಕೊಂಡಿದ್ದೇನೆ. 18 ಕೋಟಿ ರೂ.ಸಾಲ ಆಗಿದೆ. ಬಿಜೆಪಿಯವರು ಬರುವಂತೆ ಒತ್ತಾಯಿಸುತ್ತಿದ್ದಾರೆ ಎಂದು ತಿಳಿಸಿದರು.

ಆಗ, ನಾನು ವೈಯಕ್ತಿಕವಾಗಿ ಸಂಪಾದಿಸಿರುವ ಹಣವನ್ನು ಪ್ರತಿ ತಿಂಗಳು ಇಷ್ಟಿಷ್ಟು ಎಂದು ಕೊಡುತ್ತೇನೆ. ಸಾಲ ತೀರಿಸಿಕೊಳ್ಳಿ ಎಂದು ಹೇಳಿದ್ದೆ. ನಾನು ಅಮೆರಿಕದಲ್ಲಿ ಇದ್ದಾಗ ಅವರಿಗೆ ಕರೆ ಮಾಡಿ, ಕಂತು ಪ್ರಕಾರ ಹಣ ಕೊಡುತ್ತೇನೆ, ಯಾರಿಗೆ ಸಾಲ ಕೊಡಬೇಕು ಹೇಳಿ ಅವರಿಗೆ ತಲುಪಿಸುತ್ತೇನೆ ಎಂದರೂ ಆಗ ಅವರು ನಾನು ಬಂದು ಮಾತಾಡ್ತೀನಪ್ಪ ಎಂದು ಸುಮ್ಮನಾದರು. ಇದು ನನ್ನ ತಂದೆ, ತಾಯಿ, ಹೆಂಡತಿ ಮಕ್ಕಳಾಣೆ ನಿಜ. ಸುಳ್ಳಾದರೆ ರಾಜಕೀಯ ಬಿಟ್ಟು ಬಿಡುತ್ತೇನೆ ಎಂದು ಸವಾಲು ಹಾಕಿದರು.

ನನ್ನ ಬಳಿ ಇರುವುದು ಪ್ರವಾಸೋದ್ಯಮ ಖಾತೆ. ಜೀವನದಲ್ಲಿ ಒಮ್ಮೆ ಸಚಿವನಾಗಬೇಕು ಎಂದುಕೊಂಡಿದ್ದೆ, ಆಗಿದ್ದೇನೆ. ನನ್ನದು ಗೈಡ್‌ ಇಲಾಖೆ. ನನಗೆ ಒಳ್ಳೆ ಖಾತೆ ಕೊಡಲು ರೇವಣ್ಣ ಅವರು ಬಿಡಲಿಲ್ಲ ಎಂದು ಸಾ.ರಾ.ಮಹೇಶ್‌ ಚಟಾಕಿ ಹಾರಿಸಿದರು.

ನನಗೂ ಆಫ‌ರ್‌ ಇತ್ತು: ಈ ಮಧ್ಯೆ, ಜೆಡಿಎಸ್‌ ಶಾಸಕ ಕೆ.ಶ್ರೀನಿವಾಸಗೌಡ, “ನನಗೂ ಹಿಂದೆ ಬಿಜೆಪಿಗೆ ಬರುವಂತೆ ಆಹ್ವಾನಿಸಿ ಐದು ಕೋಟಿ ರೂ.ಗಳನ್ನು ನನ್ನ ಮನೆಗೆ ತಂದು ಇಟ್ಟಿದ್ದರು. ಬಿಜೆಪಿ ಶಾಸಕರಾದ ಅಶ್ವಥ್‌ನಾರಾಯಣ, ವಿಶ್ವನಾಥ್‌, ಮಾಜಿ ಶಾಸಕ ಯೋಗೇಶ್ವರ್‌ ಅವರು ಹಣ ತಂದು ಇಟ್ಟಿದ್ದರು. ನಾನು ಅಂತಹ ವ್ಯಕ್ತಿಯಲ್ಲ ಎಂದು ವಾಪಸ್‌ ಕಳುಹಿಸಿದ್ದೆ.  ಈಗಲೂ ನನಗೆ ಆಫ‌ರ್‌ ಕೊಟ್ಟಿದ್ದರು. 30 ಕೋಟಿ ರೂ.ವರೆಗೂ ಕೊಡುವುದಾಗಿ ತಿಳಿಸಿದ್ದರು.

ರಾಜಕಾರಣ ಎಲ್ಲಿಗೆ ಬಂದು ನಿಂತಿದೆ. ಕೋಟಿ, ಕೋಟಿ ದುಡ್ಡು ಎಲ್ಲಿಂದ ಬರುತ್ತದೆ. ನಾವು ಇಂದು ಇರುತ್ತೇವೆ, ನಾಳೆ ಸಾಯುತ್ತೇವೆ. ಎಲ್ಲರೂ ಒಂದು ದಿನ ಹೋಗಲೇಬೇಕು. ಆದರೆ, ಹೀಗೆಲ್ಲಾ ಮಾಡಿ ಅಧಿಕಾರ ಹಿಡಿಯಬೇಕಾ?’ ಎಂದು ಪ್ರಶ್ನಿಸಿದರು. ಕೆ.ಶ್ರೀನಿವಾಸಗೌಡ ಹಾಗೂ ಸಾ.ರಾ.ಮಹೇಶ್‌ ಅವರು ಆರೋಪಿಸಿರುವ ಬಗ್ಗೆ ತನಿಖೆಯಾಗಬೇಕು ಎಂದು ಕಾಂಗ್ರೆಸ್‌-ಜೆಡಿಎಸ್‌ ಸದಸ್ಯರು ಈ ವೇಳೆ ಒತ್ತಾಯಿಸಿದರು.

ನನ್ನ ತೇಜೋವಧೆ ಮಾಡಲಾಗಿದೆ – ರೂಪಕಲಾ: ಕಾಂಗ್ರೆಸ್‌ನ ರೂಪಕಲಾ ಶಶಿಧರ್‌ ಮಾತನಾಡಿ, ನಾವು ಹೊಸದಾಗಿ ಆಯ್ಕೆಯಾಗಿ ಈ ಸದನಕ್ಕೆ ಬಂದಿದ್ದೇವೆ. ಇಲ್ಲಿಗೆ ಬರಲು ನಾವೆಲ್ಲಾ ಎಷ್ಟು ಕಷ್ಟಪಟ್ಟಿದ್ದೇವೆ ಎಂಬುದು ಗೊತ್ತಿದೆ. ಕಾಂಗ್ರೆಸ್‌ ಪಕ್ಷದ ಕೆಲವರು ಸ್ವಹಿತಾಸಕ್ತಿಯಿಂದ ಹೋಗಿರಬಹುದು. ಆದರೆ, ಪಕ್ಷ ಮುಖ್ಯ. ನಾನು ಹೋಟೆಲ್‌ ಹಾಗೂ ರೆಸಾರ್ಟ್‌ನಿಂದ ವೈಯಕ್ತಿಕ ಕಾರಣಗಳಿಗೆ ಹೊರಗೆ ಹೋದಾಗ “ಆಪರೇಷನ್‌ ಕಮಲ’ ಎಂದು ತೇಜೋವಧೆ ಮಾಡಲಾಗಿದೆ ಎಂದು ಆರೋಪಿಸಿದರು.

ಸಾ.ರಾ.ಮಹೇಶ್‌ ಅವರು ಸದನದಲ್ಲಿ ಮಾಡಿರುವ ಆರೋಪ ಸುಳ್ಳು. ನಾನು ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಾಗಲೇ ಇಂತದ್ದೊಂದು ಆರೋಪ ಮಾಡಿದ್ದರು. ನನಗೆ ಚುನಾವಣೆಗೆ ಮಾಡಿರುವ ಸಾಲ ಇರಬಹುದು. ಆದರೆ, ಸಾಲಕ್ಕೋಸ್ಕರ ನನ್ನನ್ನು ನಾನು ಅಡಮಾನ ಇಟ್ಟುಕೊಳ್ಳುವವನಲ್ಲ. 40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನದೇ ಆದ ಮೌಲ್ಯ, ತತ್ವ, ಸಿದ್ಧಾಂತ ಇಟ್ಟುಕೊಂಡಿದ್ದೇನೆ. ಸದನದಲ್ಲಿ ಇಂತದ್ದೊಂದು ಹೇಳಿಕೆ ನೀಡಲು ಅವಕಾಶ ಕೊಟ್ಟಿದ್ದು ಎಷ್ಟು ಸರಿ? ಸಾ.ರಾ.ಮಹೇಶ್‌ ಒಬ್ಬ ರಿಯಲ್‌ ಎಸ್ಟೇಟ್‌ ಮಾಡುವ ವ್ಯಕ್ತಿ.
-ಎಚ್‌.ವಿಶ್ವನಾಥ್‌

ಶ್ರೀನಿವಾಸಗೌಡರಿಗೆ ವಯಸ್ಸಾಗಿದೆ. ಅರುಳ್ಳೋ, ಮರುಳ್ಳೋ. ಅವರ ಆರೋಪದ ಬಗ್ಗೆ ಎಸಿಬಿಯಲ್ಲೂ ದೂರು ದಾಖಲಾಗಿತ್ತು. ನಾನು ಸುಳ್ಳು ಹೇಳಿದ್ದೇನೆ ಅಂತ ಹೇಳಿ ಕೇಸ್‌ ಕ್ಲೋಸ್‌ ಮಾಡಿಕೊಂಡು ಬಂದು ಇದೀಗ ಸದನದ ದಿಕ್ಕು ತಪ್ಪಿಸಲು ಈ ರೀತಿ ಮಾತನಾಡಿದ್ದಾರೆ. ಸಾ.ರಾ.ಮಹೇಶ್‌ ಹಾಗೂ ಶ್ರೀನಿವಾಸಗೌಡರ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡುತ್ತೇವೆ.
-ಎಸ್‌.ಆರ್‌.ವಿಶ್ವನಾಥ್‌, ಬಿಜೆಪಿ ಶಾಸಕ

ಟಾಪ್ ನ್ಯೂಸ್

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.