Hamas: ಭೂದಾಳಿಗೆ ಇಸ್ರೇಲ್‌ ಮುನ್ನುಡಿ: ಹಮಾಸ್‌ ವಿರುದ್ಧ ಕ್ಷಿಪ್ರ ಕಾರ್ಯಾಚರಣೆ

ಇದು ಅಭ್ಯಾಸವಷ್ಟೇ ಎಂದ ನೆತನ್ಯಾಹು

Team Udayavani, Oct 27, 2023, 1:16 AM IST

ISREAL TANKER

ರಾಫಾ/ಟೆಲ್‌ ಅವಿವ್‌: ಹಮಾಸ್‌ ಉಗ್ರರ ವಿರುದ್ಧ ಯಾವುದೇ ಕ್ಷಣದಲ್ಲಿ ಭೂದಾಳಿಯನ್ನು ಇಸ್ರೇಲ್‌ ನಡೆಸಲಿದೆ ಎಂಬ ಸುದ್ದಿಗಳು ಇರುವಂತೆಯೇ, ಬುಧ ವಾರ ಅಲ್ಪಾವಧಿಗೆ ಗಾಜಾದಲ್ಲಿ ಭೂದಾಳಿ ನಡೆಸ ಲಾಗಿದೆ. ಪರಿಣಾಮವಾಗಿ ಉಗ್ರರಿಗೆ ಭಾರೀ ಪ್ರಮಾಣದ ಹಾನಿ ಉಂಟು ಮಾಡಲಾಗಿದೆ.

ಆ ಪ್ರದೇಶದಲ್ಲಿರುವ ಸಶಸ್ತ್ರ ಮೂಲ ಸೌಕರ್ಯಗಳು, ಟ್ಯಾಂಕ್‌ ವಿರೋಧಿ ಕ್ಷಿಪಣಿ ಗಳನ್ನು ಉಡಾಯಿಸುವ ಘಟಕಗಳನ್ನು ಧ್ವಂಸ ಗೊಳಿಸಲಾಗಿದೆ. ಅದಕ್ಕಾಗಿ ಅತ್ಯಾಧುನಿಕವಾಗಿರುವ ಯುದ್ಧ ಟ್ಯಾಂಕ್‌ಗಳನ್ನು ಬಳಸಲಾಗಿದೆ. ಯಾವುದೇ ಕ್ಷಣದಲ್ಲಿ ನಡೆಸಲಾಗುವ ಭೂ ದಾಳಿಗೆ ಇದೊಂದು ಪ್ರಾಯೋಗಿಕ ಅಭ್ಯಾಸ ಎಂದು ಬೆಂಜಮಿನ್‌ ನೆತನ್ಯಾಹು ಸರಕಾರ ಹೇಳಿಕೊಂಡಿದೆ.

ಕೆಲವು ಗಂಟೆಗಳ ಕಾಲ ನಡೆದ ಕಾರ್ಯಾ ಚರಣೆಯಲ್ಲಿ ಹಲವಾರು ಮಂದಿ ಹಮಾಸ್‌ ಉಗ್ರರನ್ನು ಕೊಲ್ಲಲಾಗಿದ್ದು, ತನ್ನ ಯಾವೊಬ್ಬ ಯೋಧನೂ ಗಾಯಗೊಂಡಿಲ್ಲ ಎಂದು ಇಸ್ರೇಲ್‌ ಹೇಳಿಕೊಂಡಿದೆ. ಒಂದರ್ಥದಲ್ಲಿ ಹಮಾಸ್‌ ವಿರುದ್ಧ ಇಸ್ರೇಲ್‌ ಸೇನಾ ಪಡೆ ಸರ್ಜಿಕಲ್‌ ದಾಳಿ ನಡೆಸಿದೆ ಎಂದು ವಿಶ್ಲೇಷಿಸಲಾಗಿದೆ.

ಈ ದಾಳಿಯ ಬಳಿಕ ಕೂಡಲೇ ಇಸ್ರೇಲ್‌ ಪಡೆಗಳು ತಮ್ಮ ಸ್ಥಾನಕ್ಕೆ ವಾಪಸಾಗಿವೆ. ಗಾಜಾ ಪಟ್ಟಿಯಲ್ಲಿ ಸತತ ದಾಳಿಯಿಂದ ವಿದ್ಯುತ್‌, ನೀರು ಸಹಿತ ಅಗತ್ಯ ವಸ್ತುಗಳ ಕೊರತೆ ಉಂಟಾಗಲಿದೆ ಎಂಬ ವಿಶ್ವಸಂಸ್ಥೆ ನೀಡಿದ ಎಚ್ಚ ರಿಕೆ ನಡುವೆಯೇ ಈ ಬೆಳವಣಿಗೆ ನಡೆದಿದೆ.

ಗಾಜಾಪಟ್ಟಿಯ ಖಾನ್‌ ಯೂನಿಸ್‌ನಲ್ಲಿ ಇಸ್ರೇಲ್‌ ಸೇನಾಪಡೆಯ ಮುಂದು ವರಿದ ವೈಮಾನಿಕ ದಾಳಿಯಲ್ಲಿ 15 ಮಂದಿ ಅಸುನೀಗಿದ್ದಾರೆ. ಜತೆಗೆ ಒಂದೇ ಕುಟುಂಬಕ್ಕೆ ಸೇರಿದ ಎಂಟು ಮನೆಗಳನ್ನು ಧ್ವಂಸಗೊಳಿಸಲಾಗಿದೆ.

ಇರಾನ್‌ ತರಬೇತಿ?
ಘಾತಕ ದಾಳಿ ನಡೆಸುವ ನಿಟ್ಟಿನಲ್ಲಿ ಹಮಾಸ್‌ ಹಾಗೂ ಪ್ಯಾಲೆಸ್ತೀನಿಯನ್‌ ಇಸ್ಲಾಮಿಕ್‌ ಜಿಹಾದ್‌ (ಪಿಐಜೆ) ಎಂಬ ಸಂಘಟನೆಗೆ ಇರಾನ್‌ನಿಂದಲೇ ತರಬೇತಿ ನೀಡಲಾಗಿತ್ತು ಎಂದು “ದ ವಾಲ್‌ಸ್ಟ್ರೀಟ್‌ ಜರ್ನಲ್‌’ ಪತ್ರಿಕೆ ವರದಿ ಮಾಡಿದೆ. ಎರಡೂ ಸಂಘಟನೆಗಳ ಆಯ್ದ 500 ಮಂದಿಗೆ ಇರಾನ್‌ನಲ್ಲಿ ವಿಶೇಷ ತರಬೇತಿ ನೀಡಲಾಗಿತ್ತು. ಅದಕ್ಕೆ ಇರಾನ್‌ ಸೇನೆ ಇಸ್ಲಾಮಿಕ್‌ ರೆವೊಲ್ಯೂಷನರಿ ಗಾರ್ಡ್‌ ಕಾಪ್ಸ್‌ (ಐಆರ್‌ಜಿಸಿ) ನೇತೃತ್ವ ವಹಿಸಿತ್ತು ಎಂದು ವರದಿಯಲ್ಲಿ ತಿಳಿಸಲಾಗಿದೆ. ದಿಢೀರ್‌ ದಾಳಿಗೆ ಕಾರಣ ಯಾರು ಎಂಬ ಪ್ರಶ್ನೆ ಮೂಡಿದ್ದಾಗಲೇ, ಇದಕ್ಕೆ ಇರಾನ್‌ ಕಾರಣ. ಆಗಸ್ಟ್‌ನಿಂದ ಈಚೆಗೆ ಎರಡೂ ಸಂಘಟನೆಗಳು ಭೂಮಿ, ವಾಯು ಮತ್ತು ಸಮುದ್ರದ ಮೂಲಕ ದಾಳಿಗೆ ಸರ್ವ ಸಿದ§ತೆಯನ್ನೂ ಮಾಡಿಕೊಂಡಿತ್ತು ಎಂದು ಪತ್ರಿಕೆ ಹೇಳಿಕೊಂಡಿದೆ. ಆದರೆ ಇದನ್ನು ಇರಾನ್‌ ಸರಾಸಗಟಾಗಿ ತಿರಸ್ಕರಿಸಿದೆ.

50 ಇಸ್ರೇಲಿ ಒತ್ತೆಯಾಳುಗಳ ಹತ್ಯೆ?
ಇದುವರೆಗೆ ಐವತ್ತು ಮಂದಿ ಇಸ್ರೇಲ್‌ನ ಒತ್ತೆಯಾಳುಗಳನ್ನು ಕೊಂದು ಹಾಕಿದ್ದೇವೆ ಎಂದು ಹಮಾಸ್‌ ಹೇಳಿಕೊಂಡಿದೆ. ಅ.7ರಂದು ಇಸ್ರೇಲ್‌ ವಿರುದ್ಧ ದಾಳಿ ನಡೆಸಿದ ದಿನದಿಂದ ಪ್ರತಿ ದಾಳಿ ಆರಂಭವಾಗಿತ್ತು. ಆ ದಿನದಿಂದಲೇ ಒತ್ತೆಯಾಳುಗಳ ಪೈಕಿ ಕೆಲವರನ್ನು ಕೊಲ್ಲಲಾಗಿದೆ ಎಂದು ಟೆಲಿಗ್ರಾಂ ಚಾನೆಲ್‌ನಲ್ಲಿ ಉಗ್ರ ಸಂಘಟನೆ ಅಪ್‌ಲೋಡ್‌ ಮಾಡಲಾಗಿರುವ ಸಂದೇಶದಲ್ಲಿ ತಿಳಿಸಲಾಗಿದೆ. ಆದರೆ ಯಾವುದೇ ಅಂತಾರಾಷ್ಟ್ರೀಯ ಸುದ್ದಿಸಂಸ್ಥೆಗಳು ಸಂಘಟನೆಯ ಹೇಳಿಕೆಯನ್ನು ಪುಷ್ಟೀಕರಿಸಿಲ್ಲ.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.