ಅತ್ಯಾಧುನಿಕ ವೆಂಟಿಲೇಟರ್‌, ಸಾಂದ್ರಕ ಸಿದ್ಧಪಡಿಸಿದೆ ಇಸ್ರೋ


Team Udayavani, May 16, 2021, 7:10 AM IST

ಅತ್ಯಾಧುನಿಕ ವೆಂಟಿಲೇಟರ್‌, ಸಾಂದ್ರಕ ಸಿದ್ಧಪಡಿಸಿದೆ ಇಸ್ರೋ

ಹೊಸದಿಲ್ಲಿ: ಕೊರೊನಾ ಕಾರಣಕ್ಕೆ ಇಸ್ರೋಕ್ಕೂ ಬಾಹ್ಯಾಕಾಶ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಆಗುತ್ತಿಲ್ಲ. ಹಾಗಂತ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸುಮ್ಮನೆ ಕುಳಿತಿಲ್ಲ. ವಿಕ್ರಮ್‌ ಸಾರಾಭಾಯಿ ಬಾಹ್ಯಾಕಾಶ ಸಂಶೋಧನ ಕೇಂದ್ರದಲ್ಲಿರುವ (ವಿಎಸ್‌ಎಸ್‌ಸಿ) ಇಸ್ರೋ ವಿಜ್ಞಾನಿಗಳು ಅತ್ಯಾಧುನಿಕ ಸ್ವದೇಶಿ ತಂತ್ರಜ್ಞಾನದ ವೆಂಟಿಲೇಟರ್‌ಗಳು, ಆಮ್ಲಜನಕ ಸಾಂದ್ರಕಗಳನ್ನು ಸಿದ್ಧಪಡಿಸಿದ್ದಾರೆ. ಮಾತ್ರವಲ್ಲ ಪ್ರಸ್ತುತ ಪರಿಸ್ಥಿತಿಯಲ್ಲಿ ಈ ತಂತ್ರಜ್ಞಾನವನ್ನು ವಿವಿಧ ಉದ್ಯಮಗಳಿಗೆ ಉಚಿತವಾಗಿ ಹಂಚಲು ನಿರ್ಧರಿಸಿದ್ದಾರೆ. ಹೀಗೆಂದು ವಿಎಸ್‌ಎಸ್‌ಸಿ ನಿರ್ದೇಶಕ ಡಾ| ಎಸ್‌.ಸೋಮನಾಥ್‌ ತಿಳಿಸಿದ್ದಾರೆ.

ಇಸ್ರೋ ಮೂರು ಮಾದರಿಯ ವೆಂಟಿಲೇಟರ್‌ಗಳನ್ನು ತಯಾರಿಸಿದೆ. ಈ ಅಷ್ಟೂ ಪಕ್ಕಾ ಅತ್ಯಾಧುನಿಕವಾಗಿವೆ. ಮೊದಲನೆಯ ವೆಂಟಿಲೇಟರ್‌ ದಿನಬಳಕೆಯ ಗುಣಮಟ್ಟವನ್ನು ಹೊಂದಿದೆ. ಎರಡನೆಯದ್ದು ಗಾಳಿ ಕಡಿಮೆ ಪ್ರಮಾಣದಲ್ಲಿದ್ದಾಗಲೂ ಕಾರ್ಯನಿರ್ವಹಿಸಬಲ್ಲ ಕ್ಷಮತೆ ಹೊಂದಿದೆ. ಮೂರನೆಯದ್ದರ ವಿಶೇಷವೆಂದರೆ ಇದರಲ್ಲಿ ವಿದ್ಯುತ್‌ ಮೋಟಾರ್‌ ಇಲ್ಲ. ಹಾಗೆಯೇ ಇದು ಕಾರ್ಯನಿರ್ವಹಿಸಲು ವಿದ್ಯುತ್‌ ಅಗತ್ಯವೇ ಇಲ್ಲ! ಸಾಂದ್ರಗೊಂಡ ಗಾಳಿ, ಇತರ ತಂತ್ರಜ್ಞಾನದ ನೆರವಿನಿಂದ ಉಸಿರಾಟಕ್ಕೆ ನೆರವು ನೀಡುತ್ತದೆ.

ಆಮ್ಲಜನಕ ಸಾಂದ್ರಕ: ಇದೇನು ಹೊಸ ವಿಷಯವಲ್ಲ. ಆದರೆ ಭಾರತ ಪ್ರಸ್ತುತ ವಿದೇಶಗಳಿಂದ ಸಾಂದ್ರಕಗಳನ್ನು ತರಿಸಿಕೊಳ್ಳುತ್ತಿದೆ. ಇದನ್ನು ಮನಗಂಡ ಇಸ್ರೋ ಶ್ವಾಸ್‌ ಹೆಸರಿನ ಸ್ವದೇಶಿ ತಂತ್ರಜ್ಞಾನಾಧಾರಿತ ಸಾಧನವೊಂದನ್ನು ಸಿದ್ಧಪಡಿಸಿದೆ. ಈ ಸಾಧನ ಗಾಳಿಯಲ್ಲಿರುವ ಸಾರಜನಕವನ್ನು ಹೀರಿಕೊಂಡು ಶೇ.95ರಷ್ಟು ಶುದ್ಧ ಆಮ್ಲಜನಕವನ್ನು ಶರೀರಕ್ಕೆ ಪೂರೈಸುತ್ತದೆ.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.