IT: ಜಾಲತಾಣಗಳು ಹೊಣೆ ಹೊರಲಿ: ಸಚಿವ ರಾಜೀವ್ ಚಂದ್ರಶೇಖರ್ ಎಚ್ಚರಿಕೆ
ಅಮೆರಿಕದ 40 ಪ್ರಾಂತ್ಯಗಳಲ್ಲಿ ಮೆಟಾ ವಿರುದ್ಧ ಕೇಸು ದಾಖಲು ಬಗ್ಗೆ ಪ್ರತಿಕ್ರಿಯೆ
Team Udayavani, Oct 25, 2023, 11:51 PM IST
ಹೊಸದಿಲ್ಲಿ: ಭಾರತ ಸೇರಿದಂತೆ ಜಗತ್ತಿನಾದ್ಯಂತ ಮುಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಉತ್ತರದಾಯಿತ್ವತೆ ಹೊಂದಬೇಕಾಗುವ ದಿನಗಳು ಬರಲಿವೆ. ಮನಸ್ಸಿಗೆ ಬಂದಂತೆ ನಡೆದುಕೊಳ್ಳುವ ದಿನಗಳಿಗೆ ಪೂರ್ಣ ವಿರಾಮ ಸಿಗಲಿದೆ ಎಂದು ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ.
ಅಮೆರಿಕದಲ್ಲಿ ಫೇಸ್ಬುಕ್ನ ಮಾತೃಸಂಸ್ಥೆ ಮೆಟಾ ವಿರುದ್ಧ 40 ಪ್ರಾಂತ್ಯಗಳಲ್ಲಿ ದಾವೆ ಹೂಡಲಾಗಿರುವ ಹಿನ್ನೆಲೆಯಲ್ಲಿ ಮಾತನಾಡಿದ ಕೇಂದ್ರ ಮಾಹಿತಿ ತಂತ್ರಜ್ಞಾನ ಖಾತೆ ಸಹಾಯಕ ಸಚಿವ ರಾಜೀವ್ ಚಂದ್ರಶೇಖರ್, “ಇದುವರೆಗೆ ಜಗತ್ತಿನಲ್ಲಿರುವ ಎಲ್ಲರೂ ಜಾಲತಾಣಗಳ ಉತ್ತಮ ಅಂಶಗಳ ಬಗ್ಗೆ ಮಾತನಾಡುತ್ತಿದ್ದರು. ಈಗ ಅದರ ದುಷ್ಪರಿಣಾಮಗಳ ಬಗ್ಗೆ ಮಾತನಾಡುತ್ತಿದ್ದಾರೆ. ಇದುವರೆಗೆ ಜಗತ್ತಿನಲ್ಲಿ ಜಾಲತಾಣಗಳು ಹೊಣೆಗಾರಿಕೆ ಇಲ್ಲದೆ ವರ್ತಿಸುತ್ತಿದ್ದವು. ಅಮೆರಿಕದಲ್ಲಿ ವಿಶೇಷವಾಗಿ ಈ ಬಗ್ಗೆ ವಿಶೇಷವಾಗಿ ಗಮನಹರಿಸುತ್ತಿದ್ದಾರೆ ಎಂದು “ಎನ್ಡಿಟಿವಿ’ಗೆ ನೀಡಿದ ಸಂದರ್ಶನದಲ್ಲಿ ವಿವರಿಸಿದ್ದಾರೆ.
ಜಾಲತಾಣಗಳಲ್ಲಿ ಅಪ್ಲೋಡ್ ಆಗುವ ಮಾಹಿತಿಗಳಿಗೆ ಹೊಣೆ ಯಾರು ಎಂದು ಪ್ರಶ್ನಿಸಿದ ಅವರು, ನಮ್ಮ ಸರಕಾರ ಕೂಡ ಜಾಲತಾಣಗಳು ಹೊಣೆಗಾರಿಕೆಯಿಂದ ವರ್ತಿಸಬೇಕು ಎಂಬ ನಿಲುವು ಹೊಂದಿದೆ. ಈ ನಿಟ್ಟಿನಲ್ಲಿ ಎಚ್ಚೆತ್ತುಗೊಳ್ಳಬೇಕಾಗಿದೆ ಎಂದಿದ್ದಾರೆ.
ಮೆಟಾ ವ್ಯಾಪ್ತಿಯಲ್ಲಿ ಬರುವ ಫೇಸ್ಬುಕ್, ಇನ್ಸ್ಟಾಗ್ರಾಂ ಮತ್ತು ಇತರ ಜಾಲತಾಣಗಳು ಯುವ ಮನಸ್ಸಿನ ಮೇಲೆ ಪ್ರಭಾವ ಉಂಟು ಮಾಡಿ ಹೆಚ್ಚಿನ ಅವಧಿಯನ್ನು ಜಾಲತಾಣಗಳಲ್ಲಿ ಕಳೆಯುವಂತೆ ಮಾಡುತ್ತಿವೆ. ಇದರಿಂದಾಗಿ ಅವರ ಮನಸ್ಸಿನ ಮೇಲೆ ಖನ್ನತೆ, ನಿದ್ರಾಹೀನತೆ ಸೇರಿದಂತೆ ಹಲವು ಋಣಾತ್ಮಕ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಹಲವು ಸಂಶೋಧನಾ ವರದಿಗಳಲ್ಲಿ ಉಲ್ಲೇಖಗೊಂಡಿರುವ ಹಿನ್ನೆಲೆಯಲ್ಲಿ ಅಮೆರಿಕದಲ್ಲಿ ಫ್ರಾನ್ಸೆಸ್ ಹ್ಯೂಜೆನ್ ಎಂಬುವರು ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ