ಗಜೇಂದ್ರಗಡದಲ್ಲಿ ಹಲಸಿನ ಹಣ್ಣಿನ ಘಮ!

ವಾಣಿಜ್ಯ ನಗರಕ್ಕೆ ಲಗ್ಗೆ ;ಇದರ ಪರಿಮಳಕ್ಕೆ ಮನ ಸೋಲದವರಿಲ್ಲ ;ಗಾತ್ರಕ್ಕೆ ತಕ್ಕಂತೆ ದರ

Team Udayavani, Jun 29, 2022, 3:55 PM IST

13

ಗಜೇಂದ್ರಗಡ: ವಾಣಿಜ್ಯ ನಗರಿ ಗಜೇಂದ್ರಗಡಕ್ಕೆ ಈಗ ಹಲಸು ಲಗ್ಗೆ ಇಟ್ಟಿದ್ದು, ಪರಿಮಳ ಸೂಸುತ್ತಾ ದಾರಿ ಹೋಕರ ಗಮನ ಸೆಳೆಯುತ್ತಿದೆ. ಪಟ್ಟಣದ ರಸ್ತೆ ಬದಿಯಲ್ಲಿ ಇದರ ಮಾರಾಟ ಜೋರಾಗಿ ನಡೆಯುತ್ತಿದೆ.

ಶಿವಮೊಗ್ಗ, ಶಿಕಾರಿಪುರ, ಸಾಗರ, ಶಿರಸಿ ಕಡೆ ಇದನ್ನು ಬೆಳೆಯುತ್ತಿದ್ದು,ಅಲ್ಲಿಯ ಬೆಳೆಗಾರರು ಹುಬ್ಬಳ್ಳಿ ಮಾರುಕಟ್ಟೆಯಲ್ಲಿ ಇದನ್ನು ಮಾರಾಟ ಮಾಡುತ್ತಾರೆ. ಪಟ್ಟಣದ ಮಾರಾಟಗಾರರು ಅಲ್ಲಿಂದ ತಂದು ಗಾತ್ರಕ್ಕೆ ತಕ್ಕಂತೆ ಮಾರುತ್ತಾರೆ. ಸಣ್ಣ ಗಾತ್ರದ ಹಣ್ಣಿಗೆ 150 ರೂ, ದೊಡ್ಡ ಗಾತ್ರ 300 ರಿಂದ 500ರ ವರೆಗೆ ಮಾರಾಟ ಆಗುತ್ತವೆ. ಆದರೆ ಇಲ್ಲಿ ಪೂರ್ಣ ಹಣ್ಣುಗಳನ್ನು ಖರೀದಿಸದೇ ಇರುವುದರಿಂದ ಒಂದು ಪೀಸ್‌ ಹಲಸಿನ ಹಣ್ಣಿಗೆ 5 ರೂ.ನಂತೆ ಮಾರುತ್ತಾರೆ. ಹಲಸು ಹಣ್ಣಿನ ಪೀಸ್‌ ಕೆಜಿಗೆ 100 ರಿಂದ 120ರ ವರೆಗೆ ಮಾರಾಟ ಮಾಡುತ್ತಿದ್ದಾರೆ.

ಹಲಸಿನಿಂದ ಬಗೆಬಗೆಯ ಖಾದ್ಯ: ಬಿಳಿ, ಹಳದಿ, ಹೆಬ್ಬು, ಚಂದ್ರ, ಅಂಬು, ಬಿಳಿ ತೊಳೆ ಹೀಗೆ ಹಲಸಿನಲ್ಲಿ ವಿವಿಧ ತಳಿಗಳಿವೆ. ಹಲಸಿನ ಹಣ್ಣು ತಿನ್ನುವುದಕ್ಕೆ ಅಷ್ಟೆ ಅಲ್ಲ ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸುತ್ತಾರೆ. ಚಿಪ್ಸ್‌, ಹಪ್ಪಳ, ದೋಸೆ, ಪಾನಕ, ಕೇಸರಿಬಾತ್‌, ಪಾಯಸ, ಕಡುಬು, ಸಿರಾ, ಹಲ್ವಾ, ಪಕೋಡ ಸೇರಿದಂತೆ ವಿವಿಧ ಬಗೆ ಖಾದ್ಯಗಳನ್ನು ತಯಾರಿಸುತ್ತಾರೆ. ಹಲಸಿನ ಕಾಯಿಯಿಂದ ಪಲ್ಯ ಸಹ ಮಾಡುತ್ತಾರೆ. ಹಲಸಿನ ಹಣ್ಣಿನ ಬೀಜ ಸುಟ್ಟುಕೊಂಡು ಹಾಗೂ ಸಾರು ಮಾಡುತ್ತಾರೆ.

ಜುಲೈನಲ್ಲಿ ಸುಗ್ಗಿ ಮುಕ್ತಾಯ: ಡಿಸೆಂಬರ್‌ನಲ್ಲಿ ಆರಂಭಗೊಳ್ಳುವ ಹಲಸಿನ ಸುಗ್ಗಿ ಜುಲೈನಲ್ಲಿ ಮುಕ್ತಾಯಗೊಳ್ಳುತ್ತದೆ.ಹಲಸಿನ ಹಣ್ಣನ್ನು ಹಸಿದು ತಿಂದರೆ ಚೆನ್ನ. ಹಲಸಿನ ಹಣ್ಣಿನ ರಸಾಯನ ಚಪ್ಪರಿಸಿಕೊಂಡು ತಿಂದರೆ ಅದರ ರುಚಿಯೇ ಬೇರೆ. ಮಾರುಕಟ್ಟೆಗಳಿಗಿಂತ ನಗರ, ಪಟ್ಟಣ, ಹೆದ್ದಾರಿ ಹಾಗೂ ರಸ್ತೆ ಬದಿಯಲ್ಲಿ ಹಲಸಿನ ಹಣ್ಣಿನ ವ್ಯಾಪಾರ ಬಲು ಜೋರಾಗಿ ನಡೆಯುತ್ತದೆ. ಹಲಸುಗಳನ್ನು ಬಿಡಿಸಿ, ಒಂದು ಗಾಜಿನ ಡಬ್ಟಾದಲ್ಲಿ ಹಾಕಿ ರಸ್ತೆ ಬದಿಯ ತಳ್ಳುವ ಗಾಡಿಯಲ್ಲಿಟ್ಟುಕೊಂಡು ಮಾರಾಟ ಮಾಡುತ್ತಾರೆ.

ನಿಜವಾದ ಹಣ್ಣುಗಳ ರಾಜ: ಹಣ್ಣುಗಳ ರಾಜ ಮಾವು ಎಂಬುದು ಸಾರ್ವತ್ರಿಕ. ಆದರೆ ನಿಜವಾಗಿ ಗಾತ್ರ, ವಿನ್ಯಾಸ, ಮರ, ರುಚಿ, ಅಡುಗೆ ಹೀಗೆ ಒಂದಿಲ್ಲೊಂದು ಬಳಕೆಗೆ ಸಿಗುವ ಹಲಸು ನಿಜವಾದ ಮಹಾರಾಜ. ಈ ಹಣ್ಣು ಗಾತ್ರದಲ್ಲಿ ಹೇಗೆ ದೊಡ್ಡ ಸ್ಥಾನ ಪಡೆದಿದೆಯೋ ಹಾಗೆಯೇ ಆರೋಗ್ಯದ ವಿಚಾರದಲ್ಲೂ ಬಹು ಮಹತ್ತರವಾದ ಪ್ರಯೋಜನಗಳನ್ನು ಒಳಗೊಂಡಿದೆ.

ಈ ಭಾಗದಲ್ಲಿ ಹಲಸು ಹಣ್ಣಿನ ಕಂಡು ಬರುವುದು ಕಡಿಮೆ. ಹೀಗಾಗಿ ಪ್ರತಿ ವರ್ಷ ಬೇರೆ ಊರುಗಳಿಂದ ಹಲಸಿನ ಹಣ್ಣು ತಂದು ಇಲ್ಲಿ ಮಾರಾಟ ಮಾಡುತ್ತಿದ್ದೇವೆ. ವ್ಯಾಪಾರ ಚೆನ್ನಾಗಿ ನಡೆಯುತ್ತಿದೆ. ಇಲ್ಲಿನ ಗ್ರಾಹಕರು ಹಲಸಿನ ಹಣ್ಣಿನ ಸವಿ ಸವಿಯುತ್ತಿದ್ದಾರೆ.  –ಶಂಕ್ರಪ್ಪ ಪಾತ್ರೋಟಿ, ಹಲಸಿನ ಹಣ್ಣು ವ್ಯಾಪಾರಿ

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.