Jagadal; ರಾಜ್ಯ ಮಟ್ಟದ ಹೊನಲು ಬೆಳಕಿನ ಪಗಡೆಯಾಟ


Team Udayavani, Nov 11, 2023, 6:35 PM IST

1-sdsadsa

ರಬಕವಿ-ಬನಹಟ್ಟಿ : ಸಮೀಪದ ಜಗದಾಳ ಗ್ರಾಮದಲ್ಲಿ ಬ್ರಹ್ಮದೇವರ ಜಾತ್ರೆ ನಿಮಿತ್ಯ ಶುಕ್ರವಾರ, ಶನಿವಾರ ರಾಜ್ಯಮಟ್ಟದ ಹಗಲು ರಾತ್ರಿ ಪಗಡೆ ಪಂದ್ಯಾವಳಿಗಳು ನಡೆದು ನೂರಾರೂ ಜನರನ್ನು ಆಕರ್ಷಿಸಿದವು.

ಪಂದ್ಯಾವಳಿಗೆ ಜಗದಾಳದ ಹಿರಿಯರು ಚಾಲನೆ ನೀಡಿದರು. ಇಂದಿನ ಆಧುನಿಕ ಕಾಲದಲ್ಲಿಯೂ ಮಹಾಭಾರತದ ಶಕುನಿ ಮತ್ತು ಪಾಂಡವರ ನಡುವಿನ ಆಟವನ್ನು ನೆನಪಿಸುವ ಈ ಆಟ ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಕೂಡಾ ಮಹತ್ವವನ್ನು ಪಡೆದಿದ್ದು, ಹಿರಿಯರೊಂದಿಗೆ ಯುವಕರು ಕೂಡಾ ಪಗಡೆಯಾಟವನ್ನು ಆಡುವುದರ ಮೂಲಕ ಆಟವನ್ನು ಮುಂದಿನ ಪೀಳಿಗೆಗೆ ಕೊಂಡುಯ್ಯೂತ್ತಿದ್ದಾರೆ.

ಸಮೀಪದ ಜಾನಪದರ ಗ್ರಾಮ ಜಗದಾಳ ಗ್ರಾಮದಲ್ಲಿ ಪ್ರತಿ ವರ್ಷ ಬ್ರಹ್ಮದೇವರ ಹಬ್ಬದ ನಿಮಿತ್ಯ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ಪಗಡೆ ಸ್ಪರ್ಧೆಯನ್ನು ಏಪಡಿಸುವುದರ ಜೊತೆಗೆ ಅದರಲ್ಲಿ ಜಯಶಾಲಿಯಾದವರಿಗೆ ಭರ್ಜರಿ ಬಹುಮಾನ ಕೂಡಾ ಕೊಡುವ ವಾಡಿಕೆ ಇಟ್ಟುಕೊಂಡಿದ್ದಾರೆ.

ಸುಮಾರು 29 ವರ್ಷಗಳಿಂದ ಪಗಡೆ ಆಟದ ಸ್ಪರ್ಧೆಯನ್ನು ಗ್ರಾಮದ ಹಿರಿಯರು ನಡೆಸಿಕೊಂಡು ಬಂದಿದ್ದು, ಅದು ಇಂದಿಗೂ ಮುಂದುವರೆದಿದೆ. ವರ್ಷದಿಂದ ವರ್ಷಕ್ಕೆ ಜನಪ್ರೀಯತೆಯನ್ನು ಪಡೆಯುತ್ತಿರುವ ಪಗಡೆ ಸ್ಪರ್ಧೆ. ಈ ಭಾಗದಲ್ಲಿ ಹೆಚ್ಚು ಹೆಚ್ಚು ಸ್ಫರ್ಧೆಗಳು ನಡೆಯುತ್ತಿವೆ. ಇಂದು ನಡೆದ ಸ್ಪರ್ಧೆಯಲ್ಲಿ ಬಾಗಲಕೋಟ, ಬಿಜಾಪೂರ, ಗದಗ, ಬೆಳಗಾಂವ ಹಾಗೂ ಮಹಾರಾಷ್ಟ್ರದ ಸಾಂಗಲಿ, ಕೊಲ್ಲಾಪೂರ ಜಿಲ್ಲೆಗಳಿಂದ ಒಟ್ಟು 54 ತಂಡಗಳು ಆಗಮಿಸಿದ್ದವು.

ಭಾರೀ ಕೂತುಹಲ ಮೂಡಿಸಿದ್ದ ಪ್ರತಿ ಪಂದ್ಯಗಳು ನೋಡುಗರ ಕಣ್ಮಣ ಸೆಳೆದವು. ಗ್ರಾಮೀಣ ಕ್ರೀಡೆಯಾಗಿರುವ ಪಗಡೆ ಈಗಲೂ ಕೂಡಾ ಇಂತಹ ಹಳ್ಳಿಗಳಲ್ಲಿ ತನ್ನದೇ ಆದ ಅಸ್ಥಿತ್ವವನ್ನು ಉಳಿಸಿಕೊಂಡು ಹೊರಟಿದ್ದು ಅದಕ್ಕೆ ಜಗದಾಳ ಗ್ರಾಮದ ಬ್ರಹ್ಮದೇವರ ಹಬ್ಬದ ಜಾತ್ರಾ ಕಮೀಟಿ ಕೂಡಾ ಟೊಂಕಕಟ್ಟಿ ನಿಂತಿದೆ. ದೀಪಾವಳಿಯಂದು ವಿಶೇಷವಾಗಿ ಪೂಜಿಸಲ್ಪಡುವ ಬ್ರಹ್ಮದೇವರ ಹಬ್ಬವನ್ನು ಪ್ರತಿವರ್ಷ ದೇವಸ್ಥಾನದ ಮುಂದೆ ವಿಶೇಷವಾಗಿ ಬ್ರಹ್ಮದೇವರ ಜಾತ್ರಾ ಕಮಿಟಿಯ ಸದಸ್ಯರು ಆಚರಿಸುತ್ತಾ ಬಂದಿದ್ದಾರೆ. ಹಿರಿಯರಿಗೆ ಮಾತ್ರ ಸೀಮಿತವಾದ್ದ ಪಗಡೆ ಯುವಕರನ್ನು ಆಕರ್ಷಿಸುತ್ತಿರುವುದು ಪಗಡೆಯ ಉಳಿವಿಗೆ ಸಾಕ್ಷಿಯಾಗಿದೆ.

ಪ್ರಥಮ ಬಹುಮಾನ ಹಿರೋ ಎಚ್‌ಎಫ್ ಡಿಲಕ್ಸ್ ಬೈಕ್, ದ್ವಿತೀಯ ಬಹುಮಾನ 30,001 ರೂ., ತೃತೀಯ ಬಹುಮಾನ 20,001 ರೂ., ಚತುರ್ಥ ಬಹುಮಾನ 10,001 ರೂ. ಸೇರಿದಂತೆ ಬಹುಮಾನಗಳನ್ನು ವಿಜೇತರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಶಿವಲಿಂಗಯ್ಯ ಹಿರೇಮಠ, ಬಸಯ್ಯ ಕಾಡದೇವರಮಠ, ಶೇಖರ ನೀಲಕಂಠ, ಹನಮಂತಗೌಡ ಪಾಟೀಲ, ಹೊನ್ನಪ್ಪ ಕುಳ್ಳೋಳ್ಳಿ, ಕಾಡಪ್ಪ ಕಬಾಡಗಿ, ಸುಬಾಸ ಉಳ್ಳಾಗಡ್ಡಿ, ಶಿವಾನಂದ ಕಚ್ಚು, ಶ್ರೀಶೈಲ ದಡ್ಡಿಮನಿ, ಮಂಜುನಾಥ ಉಳ್ಳಾಗಡ್ಡಿ, ಮಾರುತಿ ಸೊರಗಾಂವಿ, ಚೇತನ ನಂದೇಶ್ವರ, ಅಮರ ಸೋರಗಾಂವಿ ಸೇರಿದಂತೆ ಅನೇಕರು ಇದ್ದರು.

ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.