Session: ಜಮೀರ್‌ ಮಾತು ಪರಿಷತ್‌ನಲ್ಲಿ ಮತ್ತೆ ಪ್ರತಿಧ್ವನಿ

ಸಚಿವರ ರಾಜೀನಾಮೆ, ಕ್ಷಮೆಯಾಚನೆಗೆ ಪಟ್ಟು ಹಿಡಿದ ಬಿಜೆಪಿ ಸದಸ್ಯರಿಂದ ಸಭಾತ್ಯಾಗ

Team Udayavani, Dec 13, 2023, 11:24 PM IST

zameer ahmed

ಬೆಳಗಾವಿ: ತೆಲಂಗಾಣ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ವಸತಿ ಸಚಿವ ಜಮೀರ್‌ ಅಹ್ಮದ್‌ ಅವರು ಸ್ಪೀಕರ್‌ ಹುದ್ದೆಯ ಬಗ್ಗೆ ಆಡಿದ ಮಾತುಗಳು ಬುಧವಾರ ವಿಧಾನ ಪರಿಷತ್ತಿನಲ್ಲಿ ಪ್ರತಿಧ್ವನಿಸಿ ಬಿಜೆಪಿ ಹಾಗೂ ಜೆಡಿಎಸ್‌ ಸದಸ್ಯರ ಪ್ರತಿಭಟನೆಗೆ ಕಾರಣವಾಯಿತು.

ಪ್ರಶ್ನೋತ್ತರ ವೇಳೆಯಲ್ಲಿ ಎರಡು ಪ್ರಶ್ನೆಗಳು ಮುಗಿದ ಅನಂತರ ಈ ವಿಷಯ ಕೈಗೆತ್ತಿಕೊಂಡ ವಿಪಕ್ಷದ ಸದಸ್ಯರು ಸಚಿವ ಜಮೀರ್‌ ಅಹ್ಮದ್‌ ರಾಜೀನಾಮೆ ಇಲ್ಲವೇ ಕ್ಷಮೆಗೆ ಒತ್ತಾಯಿಸಿದರು. ಇದರಿಂದಾಗಿ ಸಭಾಪತಿ ಬಸವರಾಜ ಹೊರಟ್ಟಿ ಎರಡು ಬಾರಿ ಕಲಾಪವನ್ನು ಮುಂದೂಡಿದರು.

ವಿಪಕ್ಷ ಸದಸ್ಯರ ಆರೋಪಗಳಿಗೆ ಸಚಿವ ಜಮೀರ್‌ ಅಹ್ಮದ್‌ ಉತ್ತರ ನೀಡಿದರೂ ಬಿಜೆಪಿ ಸದಸ್ಯರು ತೃಪ್ತರಾಗಲಿಲ್ಲ. ಸಚಿವರು ಪೂರ್ಣ ಮಾತನಾಡಲು ಅವಕಾಶ ಕೊಡಲಿಲ್ಲ. ಸಭಾಪತಿಯವರು ಸಾಕಷ್ಟು ಬಾರಿ ವಿನಂತಿ ಮಾಡಿಕೊಂಡರೂ ಪ್ರಯೋಜನವಾಗಲಿಲ್ಲ. ಸಚಿವರು ರಾಜೀನಾಮೆ ನೀಡಬೇಕು. ಇಲ್ಲವೇ ಕ್ಷಮಾಪಣೆ ಕೇಳಬೇಕು ಎಂದು ಪಟ್ಟುಹಿಡಿದರು. ಸಚಿವರು ಇದಕ್ಕೆ ಒಪ್ಪಲಿಲ್ಲ. ಸಭಾಪತಿಗಳು ಪ್ರತಿಭಟನೆ ಮುಂದುವರಿಸಲು ಅವಕಾಶ ಕೊಡಲಿಲ್ಲ. ಇದರಿಂದ ಅಸಮಾಧಾನಗೊಂಡ ಬಿಜೆಪಿ ಸದಸ್ಯರು ಕಲಾಪ ಬಹಿಷ್ಕರಿಸಿ ಸಭಾತ್ಯಾಗ ಮಾಡಿದರು.

ಸಚಿವ ಜಮೀರ್‌ ಸಮರ್ಥನೆ

ಬಿಜೆಪಿ ಸದಸ್ಯರ ಆರೋಪಗಳಿಗೆ ಉತ್ತರ ನೀಡಿದ ಸಚಿವ ಜಮೀರ್‌ ಅಹ್ಮದ್‌, ನಾನು ಸಂವಿಧಾನ ಹುದ್ದೆಗೆ ಅಗೌರವ ತೋರಿಸಿಲ್ಲ. ಪೀಠದ ಬಗ್ಗೆ ಗೌರವವಿದೆ. ನಾನು ಯಾವತ್ತೂ ಇದಕ್ಕೆ ಅಗೌರವ ತೋರುವುದಿಲ್ಲ. ಸದನಕ್ಕೆ ತಪುು³ ಮಾಹಿತಿ ನೀಡಲು ಹೋಗಬೇಡಿ. ಸದನಕ್ಕೆ ಅಗೌರವ ತೋರಿಸಿದ್ದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದರು.

ಸಚಿವರ ಉತ್ತರದ ಅನಂತರವೂ ವಿಪಕ್ಷದ ಸದಸ್ಯರು ಪ್ರತಿಭಟನೆ ಮುಂದುವರಿಸಿದರು. ಆಗ 10 ನಿಮಿಷ ಕಲಾಪ ಮುಂದೂಡಿದ ಸಭಾಪತಿಗಳು ಸಂಧಾನ ಸಭೆ ನಡೆಸಿದರೂ ಫ‌ಲ ಸಿಗಲಿಲ್ಲ. ಕಲಾಪ ಅರಂಭವಾಗುತ್ತಿದ್ದಂತೆ ಮತ್ತೆ ಪ್ರತಿಭಟನೆಗೆ ಮುಂದಾದರು. ಇದರಿಂದ ಕೋಪಗೊಂಡ ಸಭಾಪತಿ ಹೊರಟ್ಟಿ, ಇದೇ ರೀತಿ ಮುಂದುವರಿದರೆ ಸದನವನ್ನು ಅನಿರ್ದಿಷ್ಟ ಅವಧಿಯವರೆಗೆ ಮುಂದೂಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಚಿವ ಜಮೀರ್‌ ಅಹ್ಮದ್‌ ಸಂವಿಧಾನದ ಹುದ್ದೆಗೆ ಅಗೌರವ ತೋರಿದ್ದಾರೆ. ಪೀಠಕ್ಕೆ ಧರ್ಮದ ಲೇಪನ ಮಾಡಿದ್ದಾರೆ. ಅವರು ಕೇವಲ ಒಂದು ಸಮುದಾಯದ ಅಥವಾ ಪಕ್ಷಕ್ಕೆ ಸೀಮಿತವಾದ ಸಚಿವರಲ್ಲ. ಈ ರೀತಿಯ ಹೇಳಿಕೆ ಮೂಲಕ ಅವರು ಘೋರ ಅಪರಾಧ ಮಾಡಿದ್ದಾರೆ. ಕೂಡಲೇ ಸರಕಾರ ಅವರ ರಾಜೀನಾಮೆ ಪಡೆಯಬೇಕು. ಇಲ್ಲವೇ ಸಚಿವರು ಕ್ಷಮೆ ಕೇಳಬೇಕು ಎಂದು ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, ರಘುನಾಥ ಮಲ್ಕಾಪುರೆ, ರವಿಕುಮಾರ ಮೊದಲಾದವರು ಒತ್ತಾಯಿಸಿದರು.

ಸಭಾನಾಯಕ ಎನ್‌.ಎಸ್‌.ಭೋಸರಾಜು ಅವರು, ಇದು ಈ ಪೀಠಕ್ಕೆ ಸಂಬಂಧಿಸಿದ ವಿಷಯವಲ್ಲ. ಅವರು ಅಗೌರವ ತೋರಿಸಿಲ್ಲ. ಇದಲ್ಲದೆ ಸಚಿವರು ಸಹ ತಮ್ಮ ಉತ್ತರದಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಹೇಳಿದರು. ಸಭಾನಾಯಕರು, ಸಚಿವರ ಉತ್ತರ ಹಾಗೂ ಸಭಾಪತಿಗಳ ಮನವಿಗೆ ಸ್ಪಂದಿಸದ ಬಿಜೆಪಿ ಸದಸ್ಯರು ಪ್ರತಿಭಟನೆ ಕೈಬಿಡಲಿಲ್ಲ. ಇದರ ಮಧ್ಯೆ ಸಭಾಪತಿಗಳು ಪ್ರಶ್ನೋತ್ತರ‌ ಕಲಾಪ ಮುಂದುವರಿಸಿದಾಗ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು.

ಬಿಜೆಪಿ ಸದಸ್ಯರ ಅನುಪಸ್ಥಿತಿಯಲ್ಲಿ ಎರಡು ಮಸೂದೆ ಅಂಗೀಕಾರ
ಬಿಜೆಪಿ ಸದಸ್ಯರ ಅನುಪಸ್ಥಿತಿಯಲ್ಲಿ ವಿಧಾನಪರಿಷತ್‌ನಲ್ಲಿ ಎರಡು ಮಸೂದೆಗಳಿಗೆ ಯಾವುದೇ ಚರ್ಚೆ-ತಿದ್ದುಪಡಿ, ಸಲಹೆ ಇಲ್ಲದೆ ಅಂಗೀಕಾರ ನೀಡಲಾಯಿತು. ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ)ಮಸೂದೆ ಹಾಗೂ ಕರಾವಳಿ ಅಭಿವೃದ್ಧಿ ಮಂಡಳಿ ಮಸೂದೆಗಳಿಗೆ ಒಪ್ಪಿಗೆ ದೊರೆಯಿತು.

ಬರ ನಿರ್ವಹಣೆಯಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ, ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದ ಹಿನ್ನೆಲೆಯಲ್ಲಿ ಪ್ರಮುಖ ವಿಪಕ್ಷ ಸದಸ್ಯರ ಗೈರು ಹಾಜರಿಯಲ್ಲಿ ಯೋಜನೆ ಮತ್ತು ಸಾಂಖ್ಯೀಕ ಸಚಿವ ಡಿ. ಸುಧಾಕರ ಅವರು ಕರಾವಳಿ ಅಭಿವೃದ್ಧಿ ಮಂಡಳಿ ಮಸೂದೆ ಮಂಡಿಸಿ, ಕರಾವಳಿ ಪ್ರದೇಶದ ಸರ್ವತೋಮುಖ ಅಭಿವೃದ್ಧಿಯಿಂದಾಗಿ ಪ್ರಾಧಿಕಾರ ಎಂಬ ಬದಲಾಗಿ ಪ್ರದೇಶಾಭಿವೃದ್ಧಿ ಮಂಡಳಿ ಎಂದು ಬದಲಾಯಿಸಲಾಗಿದ್ದು, ಮಸೂದೆಗೆ ಅಂಗೀಕಾರ ನೀಡಬೇಕೆಂದು ಮನವಿ ಮಾಡಿದರು.

ಮಸೂದೆ ಮಂಡಿಸಿದ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ ಖರ್ಗೆ ಮಸೂದೆ ಅಂಗೀಕಾರಕ್ಕೆ ಮನವಿ ಮಾಡಿದರು. ಎರಡು ಮಸೂದೆಗಳಿಗೆ ಧ್ವನಿ ಮತದ ಮೂಲಕ ಅಂಗೀಕಾರ ನೀಡಲಾಯಿತು.

ಟಾಪ್ ನ್ಯೂಸ್

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.