ಹಿಮವರ್ಷ: ಕಾಶ್ಮೀರದಲ್ಲಿ ವಿಮಾನ ಸಂಚಾರಕ್ಕೂ ಅಡ್ಡಿ
Team Udayavani, Jan 8, 2022, 10:24 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಲವೆಡೆ ಶುಕ್ರವಾರದಿಂದ ಭಾರೀ ಪ್ರಮಾಣದಲ್ಲಿ ಹಿಮವರ್ಷ ಸುರಿಯುತ್ತಿದ್ದು, ಶನಿವಾರ ಕಾಶ್ಮೀರದಲ್ಲಿ ವಿಮಾನ ಸಂಚಾರಕ್ಕೆ ಅಡ್ಡಿಯಾಗಿದೆ. 10ಕ್ಕೂ ಅಧಿಕ ವಿಮಾನಗಳ ಸಂಚಾರ ರದ್ದು ಮಾಡಲಾಗಿದ್ದರೆ, ಹಲವು ವಿಮಾನಗಳು ಗಂಟೆಗಳ ಕಾಲ ವಿಳಂಬವಾಗಿದೆ.
ಶ್ರೀನಗರದಲ್ಲಿ 4 ಇಂಚು ಹಿಮವರ್ಷವಾಗಿದೆ. ಗುಲ್ಮಾರ್ಗ್ನಲ್ಲಿ ಸುಮಾರು ಒಂದು ಅಡಿಯಷ್ಟು, ಕಾಜಿಗುಂದ್ ನಗರದಲ್ಲಿ 8 ಇಂಚು ಮತ್ತು ಶೋಪಿಯಾನ್ನಲ್ಲಿ 15 ಇಂಚು ಹಿಮವರ್ಷವಾಗಿರುವುದಾಗಿ ವರದಿಯಾಗಿದೆ. ಕೆಲ ಪ್ರದೇಶಗಳಲ್ಲಿ ಮಳೆಯೂ ಆಗಿರುವುದಾಗಿ ತಿಳಿಸಲಾಗಿದೆ. ಹಿಮವರ್ಷದಿಂದಾಗಿ ಕೇಂದ್ರಾಡಳಿತ ಪ್ರದೇಶದಾದ್ಯಂತ ವಿದ್ಯುತ್ ವ್ಯತ್ಯಯ, ಬ್ರಾಡ್ಬ್ಯಾಂಡ್ ಸಮಸ್ಯೆಯೂ ಉಂಟಾಗಿದೆ.
ಇದನ್ನೂ ಓದಿ:ನಾಯಿಯ ಬರ್ತ್ಡೇ ಪಾರ್ಟಿಗೆ ಬರೋಬ್ಬರಿ 7 ಲಕ್ಷ ರೂ. ಖರ್ಚು ಮಾಡಿದ ಕುಟುಂಬ!
ಇದೇ ವೇಳೆ ರಿಯಾಸಿ ಜಿಲ್ಲೆಯ ಮಾತಾ ವೈಷ್ಣೋದೇವಿ ದೇಗು ಲದಲ್ಲಿ ಸೀಸನ್ನ ಮೊದಲ ಹಿಮ ಮಳೆಯಾಗಿದೆ. ಇದರಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಹಿಮಾವೃತವಾಗಿದ್ದು, ವಾಹನ ಸಂಚಾರಕ್ಕೆ ತಡೆಯುಂಟಾಗಿದೆ. ಬನೀಹಾಲ್-ಬಾರಾಮುಲ್ಲಾ ನಡುವಿನ ರೈಲನ್ನು ಸ್ಥಗಿತಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?