ಜಪ್ಪಿನಮೊಗರು: ಮುಂದುವರಿದ ರಾಜಕಾಲುವೆ ಒತ್ತುವರಿ ತೆರವು
Team Udayavani, May 30, 2020, 5:02 AM IST
ಮಂಗಳೂರು: ರಾಜ ಕಾಲುವೆಗಳ ಒತ್ತುವರಿ ಆಗಿದ್ದನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ಪಾಲಿಕೆ ಮತ್ತೊಮ್ಮೆ ಕಾರ್ಯಾ ಚರಣೆಗೆ ಇಳಿದಿದೆ. ಜಪ್ಪಿನ ಮೊಗರು ಭಾಗದಲ್ಲಿಯೇ ಮತ್ತೆ ಬುಲ್ಡೋಜರ್ ಸಹಾಯದಿಂದ ರಾಜಕಾಲುವೆ ಒತ್ತುವರಿಯನ್ನು ಶುಕ್ರವಾರ ತೆರವು ಮಾಡಲಾಯಿತು.
ಸಾರ್ವಜನಿಕರ ದೂರಿನ ಮೇರೆಗೆ ಮೇ 26ರಂದು ಮೇಯರ್ ದಿವಾಕರ ಪಾಂಡೇಶ್ವರ ಹಾಗೂ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಅವರ ತಂಡವು ತೆರವು ಕಾರ್ಯಾಚರಣೆ ಆರಂಭಿಸಿತ್ತು. ಇದರ ಮುಂದುವರಿದ ಭಾಗವಾಗಿ ಶುಕ್ರವಾರವೂ ತೆರವು ಕಾರ್ಯ ನಡೆಯಿತು.
ಜಪ್ಪಿನಮೊಗರು ಭಾಗದ ಹೆದ್ದಾರಿಯ ಎಡಭಾಗದಲ್ಲಿ ಕೆಲವರು ರಾಜಕಾಲುವೆಯನ್ನು ಒತ್ತುವರಿ ಮಾಡಿದ ಬಗ್ಗೆ ಸ್ಥಳೀಯರ ದೂರಿನ ಮೇರೆಗೆ ಮೇಯರ್ ಹಾಗೂ ಅಧಿಕಾರಿಗಳ ತಂಡ ಶುಕ್ರವಾರ ಭೇಟಿ ನೀಡಿ ತೆರವು ನಡೆಸಿದೆ.
ಮಳೆಗಾಲ ಹತ್ತಿರವಾಗುತ್ತಿರುವ ಈ ಸಂದರ್ಭದಲ್ಲಿ ರಾಜಕಾಲುವೆಗಳನ್ನು ಸುಸ್ಥಿತಿಯಲ್ಲಿ ಇರಿಸುವಂತೆ ನೋಡಿ ಕೊಳ್ಳುವುದು ಪಾಲಿಕೆ ಜವಾಬ್ದಾರಿ. ರಾಜ ಕಾಲುವೆ ಸರಿ ಇಲ್ಲದಿದ್ದರೆ ಮಳೆನೀರಿನ ಸಮಸ್ಯೆ ಕಾಡುವ ಅಪಾಯವಿದೆ. ಇದರ ಬಗ್ಗೆ ಪರಿಶೀಲಿಸುವಾಗ ರಾಜ ಕಾಲುವೆ ಗಳನ್ನು ಅತಿಕ್ರಮಣ ಮಾಡಿದ ಸಂಗತಿ ಗೊತ್ತಾಗಿ, ಸ್ಥಳೀಯರ ಆಗ್ರಹದ ಮೇರೆಗೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಕೈಗೆತ್ತಿ ಕೊಳ್ಳಲಾಗಿದೆ. ರಾಜಕಾಲುವೆ ಒತ್ತುವರಿ ಆಗಿದ್ದರೆ ಅದನ್ನು ತೆರವು ಮಾಡುವ ನೆಲೆಯಲ್ಲಿ ಪಾಲಿಕೆ ಕ್ರಮ ಕೈಗೊಳ್ಳಲಿದೆ ಎಂದು ಮೇಯರ್ ದಿವಾಕರ ಪಾಂಡೇಶ್ವರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ