ತಾರಸಿ ಮೇಲೆ ಮಲ್ಲಿಗೆ ಕ್ರಾಂತಿ; ಆದಾಯವೆಲ್ಲ ಬಡ ಮಕ್ಕಳ ಶಿಕ್ಷಣಕ್ಕೆ

ಶಿರೂರಿನ ನವೋದಯ ಮಹಿಳೆಯಿಂದ ವಿಭಿನ್ನ ಸಮಾಜ ಸೇವೆ

Team Udayavani, Oct 5, 2021, 5:55 AM IST

ತಾರಸಿ ಮೇಲೆ ಮಲ್ಲಿಗೆ ಕ್ರಾಂತಿ; ಆದಾಯವೆಲ್ಲ ಬಡ ಮಕ್ಕಳ ಶಿಕ್ಷಣಕ್ಕೆ

ಬೈಂದೂರು: ಮನೆಯ ತಾರಸಿ ಮೇಲೆ ಮಲ್ಲಿಗೆ ಬೆಳೆದು ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಮೂಲಕ ಶಿರೂರಿನ ನವೋದಯ ಸಂಘದ ಅಕ್ಷತಾ (ಅನ್ನಪೂರ್ಣಾ) ಆನಂದ ಮೇಸ್ತ ಮಾದರಿ ಮಹಿಳೆಯಾಗಿ ಗುರುತಿಸಿಕೊಂಡಿದ್ದಾರೆ.

ಟಿ.ವಿ. ಕಾರ್ಯಕ್ರಮದಿಂದ ಪ್ರೇರಣೆ
ಕುಂದಾಪುರ ತಾಲೂಕಿನ ಶಿರೂರು ಕರಿಕಟ್ಟೆ ನಿತ್ಯಾನಂದ ನಗರದ ಅಕ್ಷತಾ ಮೇಸ್ತ ಕ್ರಿಯಾತ್ಮಕ ಚಟುವಟಿಕೆಯಲ್ಲಿ ಸದಾ ತೊಡಗಿಸಿ ಕೊಂಡಿದ್ದಾರೆ. ನವೋದಯ ಸಂಘದ ಸದಸ್ಯರಾಗಿರುವ ಅವರು ಸ್ಥಳೀಯ ಮಹಿಳಾ ಮಂಡಲದ ಅಧ್ಯಕ್ಷರಾಗಿದ್ದಾರೆ. ಅವರು ದೂರದರ್ಶನದಲ್ಲಿ ಮನೆಯ ಮಹಡಿ ಮೇಲೆ ತರಕಾರಿ ಹಾಗೂ ಹೂವಿನ ಗಿಡಗಳನ್ನು ಬೆಳೆಯುವ ಕಾರ್ಯಕ್ರಮವನ್ನು ನೋಡಿದಾಗ ತನ್ನ ಮನೆಯ ತಾರಸಿಯಲ್ಲೂ ಇದೇ ರೀತಿಯ ಪ್ರಯೋಗ ಮಾಡುವ ಯೋಚನೆ ಹೊಳೆಯಿತು ಎನ್ನುತ್ತಾರೆ.

ಬಡ ವಿದ್ಯಾರ್ಥಿಗಳಿಗೆ ನೆರವು
ಅಕ್ಷತಾ ಮೇಸ್ತ ಹವ್ಯಾಸಕ್ಕಾಗಿ ಪ್ರಾರಂಭಿಸಿದ ಮಲ್ಲಿಗೆ ಬೆಳೆ ಕೃಷಿಯ ಜತೆಗೆ ಅಕ್ಷರ ಕ್ರಾಂತಿಗೂ ಕಾರಣವಾಗಿದೆ. ಎರಡು ಗಿಡಗಳಿಂದ ಪ್ರಾರಂಭ ವಾದ ಮಲ್ಲಿಗೆ ಕೃಷಿ ಪ್ರಸ್ತುತ ಐವತ್ತಕ್ಕೂ ಅಧಿಕ ಗಿಡಗಳನ್ನು ಬೆಳೆಸುವವರೆಗೆ ಬಂದು ನಿಂತಿದೆ. ಪ್ಲಾಸ್ಟಿಕ್‌ ಚೀಲಗಳು, ಹಳೆಯ ಕ್ಯಾನ್‌, ಟಯರ್‌ ಗಳಿಗೆ ಗೊಬ್ಬರ ಹಾಗೂ ಮಣ್ಣನ್ನು ಸೇರಿಸಿ ಮಲ್ಲಿಗೆ ಬೆಳೆಯುತ್ತಿದ್ದಾರೆ. ಅವರು ಮಲ್ಲಿಗೆ ಬೆಳೆಯಿಂದ ಬರುವ ಆದಾಯವನ್ನು ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವಿನಿಯೋಗಿಸುವ ಮೂಲಕ ಮಾದರಿಯಾಗಿದ್ದಾರೆ. ಪ್ರತೀ ದಿನ ಅಕ್ಕಪಕ್ಕದ ಮನೆಯ ಆರರಿಂದ ಏಳು ವಿದ್ಯಾರ್ಥಿಗಳು ಮಲ್ಲಿಗೆ ಹೂವನ್ನು ಕಿತ್ತು ಹಾರವನ್ನು ಕಟ್ಟುತ್ತಾರೆ. ವರ್ಷದ ಎಲ್ಲ ಸಮಯದಲ್ಲೂ ಮಲ್ಲಿಗೆ ದೊರೆಯುತ್ತದೆ. ಚಳಿಗಾಲದಲ್ಲಿ ಬೆಳೆ ಕಡಿಮೆಯಾಗುತ್ತದೆ. ಪ್ರತಿದಿನ ಕನಿಷ್ಠ ಒಂದು ಸಾವಿರ ರೂ. ಆದಾಯ ಮಲ್ಲಿಗೆ ಹೂವಿನಿಂದ ದೊರೆಯುತ್ತದೆ. ಈ ಆದಾಯವನ್ನು ಪ್ರತೀ ದಿನ ಹೂ ಕಟ್ಟುವ ವಿದ್ಯಾರ್ಥಿಗಳ ಶಾಲಾ ಖರ್ಚಿಗೆ ವಿನಿಯೋಗಿಸುತ್ತಾರೆ.

ಇದನ್ನೂ ಓದಿ:140 ಅಡಿ ಕಂದಕಕ್ಕೆ ಬಿದ್ದರೂ ಬದುಕುಳಿದ ಯುವಕ |  

ಕೇವಲ ಮಲ್ಲಿಗೆ ಗಿಡ ಮಾತ್ರವಲ್ಲದೆ ಮೂವತ್ತಕ್ಕೂ ಅಧಿಕ ಬಣ್ಣದ ದಾಸವಾಳ ಹಾಗೂ ಇತರ ಹೂಗಳ ಗಿಡಗಳಿವೆ. ಪ್ರಾರಂಭದಲ್ಲಿ ತರಕಾರಿಗಳನ್ನು ಕೂಡ ಬೆಳೆದಿದ್ದಾರೆ.ಆದರೆ ನಿರ್ವಹಣೆ ಸಮಸ್ಯೆಯಿಂದಾಗಿ ಈಗ ಕೇವಲ ಮಲ್ಲಿಗೆಯನ್ನೇ ಪ್ರಧಾನವಾಗಿ ಬೆಳೆಯುತ್ತಾರೆ. ಮುಡೇìಶ್ವರದಲ್ಲಿ ಉಪನ್ಯಾಸಕರಾಗಿರುವ ಅವರ ಪತಿ ಆನಂದ ರಾಜು ಮೇಸ್ತ ಗಿಡಕ್ಕೆ ನೀರುಣಿಸುತ್ತಾರೆ. ತಾರ ಸಿ ಮೇಲೆ ಹೂಗಿಡಗಳನ್ನು ಬೆಳೆಸುವುದರಿಂದ ಮನೆಯ ಒಳಗಡೆ ತಂಪಾದ ವಾತಾವರಣವಿದೆ.

ಒಟ್ಟಾರೆಯಾಗಿ ಬಿಡುವಿನ ವೇಳೆಯಲ್ಲಿ ಟಿ.ವಿ. ಮುಂದೆ ಕುಳಿತು ಕಾಲಹರಣ ಮಾಡುವ ಬದಲು ಒಂದಿಷ್ಟು ಹೊಸತನಕ್ಕೆ ಒಗ್ಗಿಕೊಳ್ಳುವ ಗ್ರಾಮೀಣ ಭಾಗದ ನವೋದಯ ಮಹಿಳೆಯ ಸಮಾಜಮುಖೀ ಕಾರ್ಯ ಇತರರಿಗೆ ಅನುಕರಣೀಯವಾಗಿದೆ. ಮಾತ್ರವಲ್ಲದೆ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆಮಲ್ಲಿಗೆ ಬೆಳೆಯ ಮೂಲಕ ಸಾಥ್‌ ನೀಡುವ ಇವರಿಗೊಂದು ಸಲಾಂ ಎನ್ನಲೇಬೇಕಾಗಿದೆ.

ವಿದ್ಯಾರ್ಥಿಗಳಿಗೆ ಅನುಕೂಲ
ಬಿಡುವಿನ ಸಮಯದ ಸದುಪಯೋಗದ ಜತೆಗೆ ಗಿಡಗಳೊಂದಿಗೆ ಬದುಕುವುದು ಮನಸ್ಸಿಗೂ ನೆಮ್ಮದಿ ನೀಡುತ್ತದೆ. ಐವತ್ತು ಮಲ್ಲಿಗೆ ಗಿಡಗಳನ್ನು ಬೆಳೆಸಿದರೆ ಒಂದು ಕುಟುಂಬಕ್ಕೆ ಬೇರೆ ದುಡಿಮೆಯ ಆವಶ್ಯಕತೆಯಿರುವುದಿಲ್ಲ. ಕಳೆದ ಮೂರು ವರ್ಷಗಳಿಂದ ಮಹಡಿಯ ಮೇಲೆ ಮಲ್ಲಿಗೆ ಗಿಡ ಬೆಳೆದಿದ್ದೇನೆ. ಇದರಿಂದ ಬರುವ ಆದಾಯವನ್ನು ಸಂಪೂರ್ಣವಾಗಿ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಮೀಸಲಿರಿಸಿದ್ದೇನೆ. ಇದುವರೆಗೆ ಹಲವಾರು ವಿದ್ಯಾರ್ಥಿಗಳು ಇದರ ಅನುಕೂಲ ಪಡೆದಿದ್ದಾರೆ.
-ಅಕ್ಷತಾ ಮೇಸ್ತ, ಮಲ್ಲಿಗೆ ಬೆಳೆಗಾರರು

-ಅರುಣ ಕುಮಾರ್‌ ಶಿರೂರು

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.