ಬಸವಣ್ಣನ ಜನ್ಮಸ್ಥಳದಲ್ಲಿ ಜಯಂತ್ಯುತ್ಸವ
Team Udayavani, May 8, 2019, 3:06 AM IST
ಬಸವನಬಾಗೇವಾಡಿ: ಅಣ್ಣ ಬಸವಣ್ಣನವರ ಜನ್ಮಸ್ಥಳ ಬಸವನಬಾಗೇವಾಡಿಯ ಬಸವ ಜನ್ಮಸ್ಮಾರಕದಲ್ಲಿ ಬಸವೇಶ್ವರ ಜಯಂತ್ಯುತ್ಸವ ಕಾರ್ಯಕ್ರಮ ಸಡಗರ-ಸಂಭ್ರಮದಿಂದ ನೆರವೇರಿತು.
ವಿರಕ್ತಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಷಟಸ್ಥಲ ಧ್ವಜಾರೋಹಣ ಮಾಡುವ ಮೂಲಕ ಬಸವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮಹಾರಾಷ್ಟ್ರ ಬೀಳೂರ-ಸಂಕದ ವಿರಕ್ತಮಠದ ಮುರಘೇಂದ್ರ ಮಹಾಸ್ವಾಮಿಗಳು ಹಾಗೂ ಸಿದ್ಧಲಿಂಗ ಮಹಾಸ್ವಾಮಿಗಳನ್ನು ಸಕಲ ವಾದ್ಯ ವೈಭವದೊಂದಿಗೆ ಮಠದಿಂದ ಮೆರವಣಿಗೆ ಮಾಡುತ್ತ ಬಸವಸ್ಮಾರಕಕ್ಕೆ ಬರಮಾಡಿಕೊಳ್ಳಲಾಯಿತು.
ನಂತರ ಶ್ರೀಗಳ ಅಧ್ಯಕ್ಷತೆಯಲ್ಲಿ ಬಾಲ ಬಸವಣ್ಣನ ಬೆಳ್ಳಿಯ ಮೂರ್ತಿಯನ್ನು ಆರೋಗ್ಯ ಸಚಿವ ಶಿವಾನಂದ ಪಾಟೀಲ ತೊಟ್ಟಿಲಿಗೆ ಹಾಕುವ ಮೂಲಕ ತೊಟ್ಟಿಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಸುಮಂಗಲೆಯರು ಜೋಗುಳ ಹಾಡಿ ತೊಟ್ಟಿಲು ತೂಗಿದರು. ನಂತರ ನಾಮಕರಣ ಮಾಡಲಾಯಿತು.
ಕೊಪ್ಪಳ, ರಾಯಚೂರು, ಗದಗ, ಹುಬ್ಬಳ್ಳಿ, ಬಳ್ಳಾರಿ, ಕಲಬುರಗಿ, ದಾವಣಗೆರೆ ಸೇರಿ ಮಹಾರಾಷ್ಟ್ರದ ವಿವಿಧ ಜಿಲ್ಲೆಗಳ ಭಕ್ತರು ಬಸವಣ್ಣನ ತೊಟ್ಟಿಲು ತೂಗಿ ಪುನೀತರಾದರು.
ಪಟ್ಟಣದ ಬಸವೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ಶ್ರೀ ಮೂಲ ನಂದೀಶ್ವರನಿಗೆ ವಿಶೇಷ ಅಭಿಷೇಕ-ಪೂಜೆ ನೆರವೇರಿತು. ಸಚಿವ ಪಾಟೀಲ ಮೂಲ ನಂದೀಶ್ವರನ ದರ್ಶನ ಪಡೆದು, ಬಸವ ಮೂರ್ತಿಗೆ ಮಾಲಾರ್ಪಣೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ