ಕುಟುಂಬ ಮಾದರಿಯಂತಿದ್ದ ಚುನಾವಣ ವ್ಯವಸ್ಥೆ


Team Udayavani, Feb 9, 2023, 6:30 AM IST

ಕುಟುಂಬ ಮಾದರಿಯಂತಿದ್ದ ಚುನಾವಣ ವ್ಯವಸ್ಥೆ

ಜಯಪ್ರಕಾಶ್‌ ಹೆಗ್ಡೆ, ಮಾಜಿ ಸಚಿವರು
ಅದು 1980ರ ದಶಕ. ಈಗ ಗ್ರಾಮ ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸುವವರು ಖರ್ಚು ಮಾಡುವಷ್ಟು ಹಣವೂ ಅಂದು ವಿಧಾನಸಭೆ ಚುನಾವಣೆಯ ಕಣದಲ್ಲಿ ಖರ್ಚಾಗುತ್ತಿರಲಿಲ್ಲ. ಕಾರ್ಯಕರ್ತರು ಮಧ್ಯಾಹ್ನ ಸಾಮೂಹಿಕ ಗಂಜಿಯೂಟ ಬಿಟ್ಟರೆ ಬೇರೇನೂ ನಿರೀಕ್ಷೆ ಮಾಡುತ್ತಿರಲಿಲ್ಲ. ಬಹುತೇಕ ಕಾರ್ಯಕರ್ತರು ಸ್ವಂತ ಹಣ ಖರ್ಚು ಮಾಡಿ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಹಣ ಬಲಕ್ಕಿಂತ ಜನ ಬಲವೇ ಅಂದಿನ ಚುನಾವಣೆಯ ಆಸ್ತಿಯಾಗಿತ್ತು. ಎಲ್ಲಕ್ಕಿಂತ ಮುಖ್ಯವಾಗಿ ಅಲ್ಲಿ ನಾಯಕರು, ಅಭ್ಯರ್ಥಿಗಳು ಮತ್ತು ಕಾರ್ಯಕರ್ತರ ನಡುವೆ ಪ್ರೀತಿ, ವಾತ್ಸಲ್ಯ, ನಂಬಿಕೆ ಇತ್ತು. ಹೀಗಾಗಿಯೇ ಚುನಾವಣೆ ಬಂದಾಗಲೆಲ್ಲ ಊರುಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗುತ್ತಿತ್ತು.ಚುನಾವಣೆಯಲ್ಲಿ ಮೊದಲ ಬಾರಿಗೆ ಗೆದ್ದು ಶಾಸಕನಾಗಿ ಆಯ್ಕೆಯಾದಾಗ ಸಚಿವನಾಗಿಯೂ ಸೇವೆ ಸಲ್ಲಿಸುವ ಅವಕಾಶ ದೊರೆತ ಕೆಲವೇ ಕೆಲವು ಅದೃಷ್ಟಶಾಲಿ ರಾಜಕಾರಣಿಗಳಲ್ಲಿ ನಾನೂ ಒಬ್ಬ.

ಸಾಮೂಹಿಕ ಗಂಜಿ ಊಟವೇ ಶಕ್ತಿ
1985ರಲ್ಲಿ ಜನತಾ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿದ್ದೆ. ಆಗ ಬ್ರಹ್ಮಾವರ ವಿಧಾನಸಭಾ ಕ್ಷೇತ್ರವಿತ್ತು. ಈಗ ಅದು ಉಡುಪಿ, ಕುಂದಾಪುರ ವಿಧಾನಸಭಾ ಕ್ಷೇತ್ರದೊಂದಿಗೆ ವಿಲೀನವಾಗಿದೆ. ಜನತಾ ಪಾರ್ಟಿಯಿಂದ ಟಿಕೆಟ್‌ ಸಿಕ್ಕ ಸಂದರ್ಭದಲ್ಲಿ ಬ್ರಹ್ಮಾವರದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದೆ. ಮನೆ ಮುಂದೆ ಶಾಮಿಯಾನ ಹಾಕಿಸಿದ್ದೆವು. ನಿತ್ಯವೂ ಪ್ರಚಾರಕ್ಕೆ ಹೋಗುವ ಮೊದಲು ಕಾರ್ಯಕರ್ತರು ಶಾಮಿಯಾನದಡಿ ಸೇರುತ್ತಿದ್ದರು. ಒಟ್ಟಾಗಿ ಗಂಜಿ ಊಟ ಮಾಡಿ ಪ್ರಚಾರಕ್ಕೆ ಹೊರಡುತ್ತಿದ್ದೆವು. ಬಹುತೇಕ ದಿನಗಳಲ್ಲಿ ಪ್ರಚಾರಕ್ಕೆ ಹೋದಾಗ ಮಧ್ಯಾಹ್ನದ ಊಟ ಕಾರ್ಯಕರ್ತರ ಮನೆ ಯಲ್ಲೇ ಆಗುತ್ತಿತ್ತು. ಈಗಿನಂತೆ ಪ್ರಚಾರಕ್ಕೆ ಬಂದವರಿಗೆ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಬೇಕಾದ ಪರಿಸ್ಥಿತಿ ಇರಲಿಲ್ಲ. ರಾತ್ರಿ ಊಟ ಕಾರ್ಯಕರ್ತರು ತಮ್ಮ ಮನೆಗೆ ಹೋಗಿ ಮಾಡುತ್ತಿದ್ದರು. ಮನೆಯಿಂದ ಮನೆಗೆ ಅವೆಷ್ಟೋ ಕಿ.ಮೀ. ನಡೆದುಕೊಂಡೇ ಹೋಗಿದ್ದುಂಟು.

ಅಂದಿನ ಚುನಾವಣೆ ವ್ಯವಸ್ಥೆಯೆಂದರೆ ಕುಟುಂಬ ವ್ಯವಸ್ಥೆಯಂತೆ ಪ್ರೀತಿ, ವಾತ್ಸಲ್ಯ, ನಂಬಿಕೆ ಎಲ್ಲವೂ ಇತ್ತು. ಈಗ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಜನ ಪ್ರತಿನಿಧಿಗಳು ಕಾರ್ಯಕರ್ತರನ್ನು ಬದಲು ಮಾಡಿದ್ದಾರೆ. ಅಂದು ಕಾರ್ಯಕರ್ತರು ಮತ್ತು ಜನಪ್ರತಿನಿಧಿಗಳ ನಡುವೆ ಇರುತ್ತಿದ್ದ ಪ್ರೀತಿ, ವಿಶ್ವಾಸ ಇಂದು ಕಾಣಲು ಸಾಧ್ಯವೇ ಇಲ್ಲ.
“ಚುನಾವಣೆಯಲ್ಲಿ ಖರ್ಚು ಮಾಡಿದ್ದಾರೆ, ಹೀಗಾಗಿ ಹಣ ಮಾಡಲಿ ಅಥವಾ ರಾಜಕೀಯದಲ್ಲಿ ಹಣ ಮಾಡಿದ್ದಾರೆ ಚುನಾವಣೆಯಲ್ಲಿ ಖರ್ಚು ಮಾಡಲಿ’ ಎಂಬ ವ್ಯವಸ್ಥೆ ಬಂದು ಬಿಟ್ಟಿದೆ ಮತ್ತು ಸರಿಮಾಡಲಾಗದ ಸ್ಥಿತಿಗೆ ಬಂದು ತಲುಪಿದೆ.

ಹಬ್ಬದ ವಾತಾವರಣ
ಚುನಾವಣೆ ಪ್ರಚಾರಕ್ಕೆ ಈಗಿನ ರೀತಿಯಲ್ಲಿ ರಾಷ್ಟ್ರ ನಾಯಕರು ಮೇಲಿಂದ ಮೇಲೆ ಬರುತ್ತಿರಲಿಲ್ಲ. ಬ್ರಹ್ಮಾವರ ಕ್ಷೇತ್ರಕ್ಕೆ ರಾಮಕೃಷ್ಣ ಹೆಗಡೆ ಮತ್ತು ಎಚ್‌.ಡಿ.ದೇವೇಗೌಡ ಅವರು ಪ್ರಚಾರಕ್ಕೆ ಬಂದಿದ್ದರು. ಆ ಸಂದರ್ಭದಲ್ಲಿ ಇಡೀ ಊರಿನಲ್ಲಿ ಹಬ್ಬದ ವಾತಾ ವರಣ ಮನೆಮಾಡಿತ್ತು. ಈಗಿನಷ್ಟು ಫ್ಲೆಕ್ಸ್‌, ಬ್ಯಾನರ್‌, ಬಂಟಿಂಗ್‌ಗಳ ಹಾವಳಿ ಇರಲಿಲ್ಲ. ಕೈಬರಹದಬಟ್ಟೆಯ ಬ್ಯಾನರ್‌ಗಳ ಸ್ವಾಗತ ಇಂದಿಗೂ ಕಣ್ಣಿಗೆ ಕಟ್ಟುವಂತಿದೆ.

ಟಿಕೆಟ್‌ ಹಂಚಿಕೆ ಪ್ರಕ್ರಿಯೆಯೂ ತುಂಬ ಚೆನ್ನಾಗಿತ್ತು. ಈಗಿನ ರೀತಿಯಲ್ಲಿ ಟಿಕೆಟ್‌ಗಾಗಿ ದುಂಬಾಲು ಬೀಳುವುದು ಅಥವಾ ವರಿಷ್ಠರ ಮನವೊಲಿಸಲು ನಾನಾ ರೀತಿಯ ಕಸರತ್ತು ಮಾಡಬೇಕೆಂದಿರಲಿಲ್ಲ. ವರಿಷ್ಠರು ಹೆಸರನ್ನು ಅಂತಿಮಗೊಳಿಸಿ ಕಳುಹಿಸುತ್ತಿದ್ದರು. ಅದರಂತೆ ಕಾರ್ಯಕರ್ತರ ಜತೆ ಸೇರಿ ಅಭ್ಯರ್ಥಿಯೂ ಚುನಾವಣೆ ಪ್ರಚಾರ ಮಾಡುತ್ತಿದ್ದರು. ಬ್ರಹ್ಮಾವರ ಕ್ಷೇತ್ರದಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಲು ಅಭ್ಯರ್ಥಿಗಳೇ ಸಿಗುತ್ತಿರಲಿಲ್ಲ. ಅಭ್ಯರ್ಥಿಗಳು ಇಲ್ಲ ಎಂಬ ಕಾರಣಕ್ಕೆ ನನಗೆ ಟಿಕೆಟ್‌ ಸಿಕ್ಕಿದ್ದು ಉಂಟು. ತಂದೆಯವರು ನ್ಯಾಯಾಧೀಶರಾಗಿದ್ದರಿಂದ ಅವರ ಹೆಸರಿನ ಪ್ರಭಾವವೂ ಚುನಾವಣೆಯಲ್ಲಿ ಹೆಚ್ಚು ಸಹಕಾರಿಯಾಗಿತ್ತು. ವಕೀಲನಾಗಿ ಸೇವೆ ಆರಂಭಿಸಿ, ರಾಜಕೀಯದಲ್ಲಿ ಮುಂದುವರಿಯುವಂತಾಯಿತು.

1994ರಲ್ಲಿ ನಡೆದ ಚುನಾವಣೆಯಲ್ಲಿ ಮೊದಲ ಜಯ ಸಾಧಿಸಿ ವಿಧಾನಸಭೆ ಪ್ರವೇಶ ಮಾಡಿದೆ. ಮೊದಲ ಬಾರಿಗೆ ಶಾಸಕನಾಗಿ, ಸಚಿವನಾಗಿಯೂ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿತು. ಮೀನುಗಾರಿಕೆ ಮತ್ತು ಬಂದರು ಸಚಿವನಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸಂಚಾರ ಮಾಡಿದ ನೆನಪುಗಳು ಸದಾ ಹಸುರಾಗಿವೆ. ಸಚಿವನಾಗಿ ಮೊದಲ ಬಾರಿಗೆ ಜಿಲ್ಲೆಗೆ ಬಂದ ಸಂದರ್ಭದಲ್ಲಿ ಉಪ್ಪಿನಂಗಡಿಯಿಂದ ಕುಂದಾಪುರದ ವರೆಗೂ ಬೃಹತ್‌ ಮೆರವಣಿಗೆಯಲ್ಲಿ ಪಾಲ್ಗೊಂ ಡುದುದು, ಕಾರ್ಯಕರ್ತರೊಂದಿಗೆ ಹತ್ತಾರು ಕಿ.ಮೀ. ನಡೆದುಕೊಂಡು ಸಾಗಿದುದೆಲ್ಲವೂ ಸ್ಮತಿಪಟಲದಲ್ಲಿ ಅಚ್ಚಾಗಿ ಉಳಿದಿದೆ.

-ರಾಜು ಖಾರ್ವಿ

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.