ಗುದ್ದಲಿ ಪೂಜೆ ಗುದ್ದಾಟ:ಮಂಡ್ಯದಲ್ಲಿ ಕೈ-ಜೆಡಿಎಸ್ ಫೈಟ್
ಜೆಡಿಎಸ್ ಶಾಸಕರಿಂದ ಕಾಂಗ್ರೆಸ್ ಮುಖಂಡನ ಮೇಲೆ ಅವಾಚ್ಯ ಶಬ್ಧ ಬಳಕೆ,ಉದ್ವಿಗ್ನ ಸ್ಥಿತಿ
Team Udayavani, Jul 5, 2019, 4:15 PM IST
ಮಳವಳ್ಳಿ: ಮೈತ್ರಿ ಪಕ್ಷಗಳ ಕಲಹದಿಂದ ಮಂಡ್ಯ ಮತ್ತೆ ಸುದ್ದಿಯಾಗಿದ್ದು, ಕಾಮಗಾರಿಯೊಂದರ ಗುದ್ದಲಿ ಪೂಜೆಗೆ ಸಂಬಂಧಿಸಿ ಹಾಲಿ ಶಾಸಕರು ಮತ್ತು ಮಾಜಿ ಶಾಸಕರ ಬೆಂಬಲಿಗರ ನಡುವೆ ಗುದ್ದಾಟ ನಡೆದಿದೆ.
ಮಳವಳ್ಳಿ ಜೆಡಿಎಸ್ ಶಾಸಕ ಅನ್ನದಾನಿ ಅವರು ಕಾಮಗಾರಿಯೊಂದರ ಗುದ್ದಲಿ ಪೂಜೆ ನಡೆಸುತ್ತಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿ ಈ ಕಟ್ಟಡ ಕಾಮಗಾರಿಗೆ ಈ ಹಿಂದೆಯೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಅಂದಿನ ಕಾಂಗ್ರೆಸ್ ಶಾಸಕರಾಗಿದ್ದ ನರೇಂದ್ರ ಸ್ವಾಮಿ ಅವರು ಗುದ್ದಲಿ ಪೂಜೆ ಮಾಡಿದ್ದಾರೆ ಎಂದು ತಕರಾರು ತೆಗೆದಿದ್ದಾರೆ. ಈ ವೇಳೆ ತೀವ್ರ ವಾಗ್ವಾದ ನಡೆದಿದೆ. ಅವಾಚ್ಯ ಶಬ್ಧಗಳನ್ನೂ ಬಳಸಿ ಬೈದಾಡಿಕೊಂಡಿದ್ದಾರೆ. ಮಾರಾಮಾರಿ ನರಡೆಸಲು ಮುಂದಾದಾಗ ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕರ ನರೇಂದ್ರ ಸ್ವಾಮಿ ಅನ್ನದಾನಿ ಅವರ ವಿರುದ್ಧ ಸ್ವೀಕರ್ಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ