JDS: ಸಂಬಂಧ ಕೆಡಬಾರದೆಂದು ಸಹಿಸಿಕೊಂಡಿದ್ದೇನೆ: ಸಿ.ಟಿ. ರವಿ
ಜೆಡಿಎಸ್ ವಿರುದ್ಧ ಪರೋಕ್ಷವಾಗಿ ಅಸಮಾಧಾನ
Team Udayavani, Feb 3, 2024, 10:50 PM IST
ಹಾಸನ: ಸಂಬಂಧ ಕೆಡಬಾರದು ಅಂತ ನಾವು ನೀಲಕಂಠ ಆಗಿದ್ದೇವೆ, ವಿಷಕಂಠ ಆಗಿದ್ದೇವೆ. ಒಳ್ಳೆಯ ಉದ್ದೇಶಕ್ಕಾಗಿ ಸಂಬಂಧ ಕೆಡಬಾರದು ಅಂತ ಇದ್ದೀವಿ. ಈಗ ಎಲ್ಲವನ್ನೂ ಬಿಡಿಸಿ ಹೇಳಲು ಆಗುವುದಿಲ್ಲ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಟಿ.ರವಿ ಅವರು ಜೆಡಿಎಸ್ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ಸೀತಾರಾಮಾಂಜನೇಯ ಸಭಾಭವನದಲ್ಲಿ ಶನಿವಾರ ಜರಗಿದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಿ, ಏನು, ಹೇಗೆ, ಪಿತೂರಿ ನಡೆಯಿತು ಎಂಬುದು ಗೊತ್ತು. ಎಲ್ಲವನ್ನೂ ಹೊಟ್ಟೆಯಲ್ಲಿ ಇಟ್ಟುಕೊಂಡಿದ್ದೇವೆ. ನಾವು ಅಷ್ಟು ಅಮಾಯಕರಲ್ಲ. ನಾವು ತತ್ವದ ಮೇಲೆ ನಂಬಿಕೆ ಇಟ್ಟವರು. ನಾವು ದೇಶ ಮೊದಲು ಅಂತ ಕೆಲಸ ಮಾಡುತ್ತಿದ್ದೇವೆ, ಮೋದಿ ಅವರ ಚಿತ್ರ ಕಣ್ಮುಂದೆ ಬರಬೇಕು. ಆ ಕಾರಣಕ್ಕಾಗಿ ಎಲ್ಲವನ್ನೂ ಸಹಿಸಿಕೊಂಡಿ ದ್ದೇವೆ ಎಂದು ಪರೋಕ್ಷ ವಾಗಿ ಜೆಡಿಎಸ್ ವಿರುದ್ಧ ಅಸಮಾಧಾನ ಹೊರ ಹಾಕಿದರು.
ಚಿಕ್ಕಮಗಳೂರಿನಲ್ಲಿ ನಾನು ಹಾಗೂ ಹಾಸನದಲ್ಲಿ ಪ್ರೀತಂಗೌಡ ಕೆಲಸ ಮಾಡಿಯೂ ರಾಜಕೀಯ ಪಿತೂರಿಗೆ ಬಲಿಯಾಗಿದ್ದೇವೆ, ನಮ್ಮನ್ನು ಕೆಲಸ ಮಾಡಿಲ್ಲ ಎಂದು ಯಾರೂ ದೂರುವುದಿಲ್ಲ. ನಮ್ಮಿಬ್ಬರ ವಿರುದ್ಧ ರಾಜಕೀಯ ಪಿತೂರಿ ಹೇಗೆ ನಡೆದಿದೆ ಅಂತ ಬಿಡಿಸಿ ಹೇಳಬೇಕಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್