BJP ತತ್ವ, ಸಿದ್ಧಾಂತಕ್ಕೆ ಜೆಡಿಎಸ್ ಬದ್ಧವಾಗಿರಬೇಕು: ಪ್ರೀತಂ ಜೆ.ಗೌಡ
Team Udayavani, Oct 5, 2023, 11:03 PM IST
ಹಾಸನ: ಹಾಸನದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಬಿಜೆಪಿಯ ಮಾಜಿ ಶಾಸಕ ಪ್ರೀತಂ ಜೆ.ಗೌಡ, ಬಿಜೆಪಿ -ಜೆಡಿಎಸ್ ಮೈತ್ರಿ ಬಗ್ಗೆ ವರಿಷ್ಠರ ಮಟ್ಟದಲ್ಲಿ ನಿರ್ಧಾರವಾಗಿದೆ. ಪಕ್ಷದ ಕಾರ್ಯಕರ್ತನಾಗಿ ಹಿರಿಯರ ನಿರ್ಧಾರಕ್ಕೆ ನಾನು ಬದ್ಧನಾಗಿರುವೆ. ಬಿಜೆಪಿ ರಾಷ್ಟ್ರೀಯ ಪಕ್ಷ, ಜೆಡಿಎಸ್ ಪ್ರಾದೇಶಿಕ ಪಕ್ಷ. ಹೊಂದಾಣಿಕೆಗೆ ಬಿಜೆಪಿ ಬಳಿ ಜೆಡಿಎಸ್ ಬಂದಿದೆ. ಮನೆಗೆ ಬಂದ ನೆಂಟರನ್ನು ಹೇಗೆ ನಡೆಸಿಕೊಳ್ಳಬೇಕೋ ಹಾಗೆ ನಡೆಸಿಕೊಳ್ಳಲಾಗುತ್ತದೆ. ಬಿಜೆಪಿ ಜತೆಗೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದೆಯೇ ಹೊರತು ಜೆಡಿಎಸ್ ಜತೆಗೆ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು ಹೇಳಿದರು.
ಜೆಡಿಎಸ್ನವರು ನಮ್ಮ ಸಂಬಂಧ ಬೆಳೆಸಿದ ಮೇಲೆ ಬಿಜೆಪಿಯ ಸಿದ್ಧಾಂತ, ಸಂಸ್ಕಾರವನ್ನು ತಿಳಿದುಕೊಂಡಿರುತ್ತಾರೆ. ಬಿಜೆಪಿಯದು ರಾಷ್ಟ್ರೀಯತೆ. ದೇಶ ಮೊದಲು ವ್ಯಕ್ತಿ ಕೊನೆಗೆ ಎಂಬ ನಿಲುವು ಬಿಜೆಪಿಯದ್ದು. ಇದೆಲ್ಲವನ್ನೂ ಒಪ್ಪಿಕೊಂಡು ಬರುವುದಾದರೆ ಬೇಡ ಎನ್ನಲಾಗದು. ನಮ್ಮಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ