![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Jharkhand: ದೇಶದ ಅತೀ ದೊಡ್ಡ ಅಕ್ರಮ ಹಣ ಬೇಟೆ- ಬಗೆದಷ್ಟೂ ಹೊರಬರುತ್ತಿದೆ ನೋಟುಗಳ ಕಟ್ಟು
Team Udayavani, Dec 10, 2023, 12:44 AM IST
![MONEY GONI](https://www.udayavani.com/wp-content/uploads/2023/12/MONEY-GONI-1-620x372.jpg)
ಹೊಸದಿಲ್ಲಿ: ಝಾರ್ಖಂಡ್ನ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಕುಮಾರ್ ಸಾಹೂ ಅವರಿಗೆ ಸೇರಿದ ಡಿಸ್ಟಿಲರಿ ಮತ್ತು ಇತರ ಸಂಸ್ಥೆಗಳಿಂದ ವಶಪಡಿಸಿಕೊಂಡಿರುವ ಅಕ್ರಮ ಹಣ ದೇಶದಲ್ಲಿಯೇ ಬೃಹತ್ ಪ್ರಮಾಣದ್ದು ಎನ್ನಲಾಗಿದೆ.
ಇದುವರೆಗೆ ಸರಿಸುಮಾರು 300 ಕೋಟಿ ರೂ. ಹಣ ಎಣಿಕೆ ಮಾಡಲಾಗಿದೆ. ಹಲವು ಚೀಲಗಳಲ್ಲಿ ತುಂಬಿರುವ ನೋಟುಗಳ ಎಣಿಕೆ ಇನ್ನೂ ಬಾಕಿ ಇದೆ. ಅಲ್ಲದೆ ಸಾಹೂ ಇನ್ನಷ್ಟು ಸ್ಥಳಗಳಲ್ಲಿ ನಗದು ಸಂಗ್ರಹಿಸಿ ಇರಿಸಿರುವ ಸಂಶಯ ವ್ಯಕ್ತವಾಗಿದೆ. ಝಾರ್ಖಂಡ್, ಪ. ಬಂಗಾಲ, ಒಡಿಶಾಗಳಲ್ಲಿ 7 ಕೊಠಡಿಗಳಲ್ಲಿರುವ 9 ಲಾಕರ್ಗಳನ್ನು ಇನ್ನಷ್ಟೇ ತೆರೆದು ಪರಿಶೀಲಿಸಬೇಕಾಗಿದೆ.
ನಿವಾಸಗಳ ಮೇಲೆ ದಾಳಿ
ಸಾಹೂ ಅವರ ಕಂಪೆನಿಗಳಿಗೆ ಸಂಬಂಧಿಸಿದ ಸ್ಥಳಗಳಿಗೆ ದಾಳಿ ನಡೆಸಿದ ಬಳಿಕ ಐಟಿ ಇಲಾಖೆ ಈ ಕಂಪೆನಿಗಳ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ಆರಂಭಿಸಿದೆ.
ಶನಿವಾರ ಒಡಿಶಾದ ಬೊಲಾಂಗಿರ್ ಜಿಲ್ಲೆಯ ಸುದಾಪಾರ ಎಂಬಲ್ಲಿ ಒಂದು ಮನೆಯ ಮೇಲೆ ದಾಳಿ ನಡೆಸಿ 20 ಚೀಲಗಳಲ್ಲಿ ತುಂಬಿಸಿ ಇರಿಸಲಾಗಿದ್ದ ನಗದನ್ನು ವಶಕ್ಕೆ ಪಡೆದು, ಕೊಂಡೊ ಯ್ದಿದ್ದಾರೆ. ಶುಕ್ರವಾರದ ವರೆಗೆ ಒಟ್ಟು 156 ಚೀಲಗಳಲ್ಲಿ ನಗದು ಇರಿಸಿದ್ದು ಪತ್ತೆಯಾಗಿತ್ತು. ಶನಿವಾರದ್ದು ಸೇರಿ ದಂತೆ ನಗದು ಚೀಲಗಳ ಸಂಖ್ಯೆ 176ಕ್ಕೆ ಏರಿದೆ. ಅವುಗಳನ್ನು ಎಸ್ಬಿಐಯ ಬೊಲಾಂಗಿರ್ ಶಾಖೆಯಲ್ಲಿ ಬಿಗಿ ಭದ್ರತೆಯಲ್ಲಿ ಇರಿಸಲಾಗಿದೆ.
ಮಾಹಿತಿಯನ್ನೇ ನೀಡಿಲ್ಲ
ಯಾವ ಕಾರಣಕ್ಕಾಗಿ ಧೀರಜ್ ಕುಮಾರ್ ಸಾಹೂ ಅವರಿಗೆ ಸಂಬಂಧಿ ಸಿದ ಸ್ಥಳಗಳ ಮೇಲೆ ದಾಳಿ ನಡೆಸಿದೆ ಎನ್ನುವುದರ ಬಗ್ಗೆ ಆದಾಯ ತೆರಿಗೆ ಇಲಾಖೆ ಸ್ಪಷ್ಟನೆ ನೀಡಿಲ್ಲ ಎಂದು ಝಾರ್ಖಂಡ್ ಕಾಂಗ್ರೆಸ್ ವಕ್ತಾಕ ರಾಕೇಶ್ ಸಿನ್ಹಾ ದೂರಿದ್ದಾರೆ. ಸಾಹೂ ಹಲವು ವರ್ಷಗಳಿಂದ ಉದ್ದಿಮೆ ನಡೆಸುತ್ತಿದ್ದಾರೆ. ಆತಿಥ್ಯ, ಸಾರಿಗೆ, ಮೀನು ಗಾರಿಕೆ, ಅಬಕಾರಿ ಕ್ಷೇತ್ರಗಳಲ್ಲಿ ಸಾಹೂ ಕುಟುಂಬ ತೊಡಗಿಸಿಕೊಂಡಿದೆ ಎಂದವರು ತಿಳಿಸಿದ್ದಾರೆ.
ಎಲ್ಲೆಲ್ಲಿ ಹಣ ಇರಿಸಲಾಗಿತ್ತು?
ವಶಪಡಿಸಿಕೊಳ್ಳಲಾಗಿರುವ 300 ಕೋಟಿ ರೂ.ಗಳ ಪೈಕಿ ಹೆಚ್ಚಿನ ಮೊತ್ತ ವನ್ನು ಬೊಲಾಂಗಿರ್ನಿಂದಲೇ ವಶಪಡಿ ಸಲಾಗಿದೆ. ಈ ಮೊತ್ತವನ್ನು ಎಂಟರಿಂದ ಹತ್ತು ಕಪಾಟುಗಳಲ್ಲಿ ಸಂಗ್ರಹಿಸಿ ಇರಿಸಲಾಗಿತ್ತು. ಉಳಿದ ಮೊತ್ತವನ್ನು ತಿತ್ಲಾಗಢ, ಸಂಭಾಲ್ಪುರ, ರಾಂಚಿಯಿಂದ ವಶಪಡಿಸಿಕೊಳ್ಳಲಾಗಿದೆ.
ತಲೆಮಾರಿನಿಂದ ತಲೆಮಾರಿಗೆ ಕಾಂಗ್ರೆಸ್
ಭ್ರಷ್ಟಾಚಾರವನ್ನು ಪೋಷಣೆ ಮಾಡಿಕೊಂಡು ಬರುತ್ತಿದೆ ಎನ್ನುವುದಕ್ಕೆ ಈ ದಾಳಿ ಸಾಕ್ಷಿ. ಭ್ರಷ್ಟರಿಂದ ವಶಪಡಿಸಿ ಕೊಳ್ಳಲಾಗಿ ರುವ ಅತ್ಯಂತ ದೊಡ್ಡ ಮೊತ್ತ ಇದು. ವ್ಯವಸ್ಥೆಯ ಲೋಪವನ್ನು ದುರ್ಬಳಕೆ ಮಾಡಿರುವುದಕ್ಕೆ ಇದು ಸಾಕ್ಷಿ -ಮೀನಾಕ್ಷಿ ಲೇಖೀ, ಕೇಂದ್ರ ಸಚಿವೆ
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.