ಜೆಹಾದಿ ಮಾಸ್ಟರ್ ಮೈಂಡ್ ಸೆರೆ : ಬೆಂಗಳೂರಿನಲ್ಲಿ ಪೊಲೀಸರ ಕಾರ್ಯಾಚರಣೆ
Team Udayavani, Jan 16, 2020, 7:00 AM IST
ಬೆಂಗಳೂರು: ರಾಜ್ಯದಲ್ಲಿ ಐಸಿಸ್ ಪ್ರೇರಿತ ಜೆಹಾದಿ ಚಟುವಟಿಕೆಯನ್ನು ಸಕ್ರಿಯಗೊಳಿಸಿದ ಮಾಸ್ಟರ್ ಮೈಂಡ್ ಮನ್ಸೂರ್ ಖಾನ್ನನ್ನು ಬೆಂಗಳೂರು ಸಿಸಿಬಿ ಹಾಗೂ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.
ರಾಜ್ಯದ ಐಸಿಸ್ ಪ್ರಮುಖ ಮೆಹಬೂಬ್ ಪಾಷಾನ ಆಪ್ತನಾಗಿರುವ ಮನ್ಸೂರ್ ಖಾಸಗಿ ಶಾಲೆಯೊಂದರ ಬಸ್ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ರಾಜ್ಯದಲ್ಲಿ ಐಸಿಸ್ ಪ್ರೇರಿತನಾಗಿದ್ದ ಮನ್ಸೂರ್ ಖಾನ್ ರಾಜ್ಯದ ಜೆಹಾದಿ ಚಟುವಟಿಕೆಗಳನ್ನು ಬಲಗೊಳಿಸಲು ಯುವಕರನ್ನು ಸಂಘಟಿಸಿದ್ದ. ಈ ಸಂಬಂಧ ಗುರಪ್ಪನಪಾಳ್ಯದ ನಿವಾಸದಲ್ಲಿ ಹಲವು ಸಭೆಗಳನ್ನು ನಡೆಸಿದ್ದ ಎಂಬುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ಮೂಲಗಳು ಹೇಳಿವೆ.
ಮನ್ಸೂರ್ ಖಾನ್ ಜೆಹಾದಿ ಚಟುವಟಿಕೆಗಳಿಗೆ ತನ್ನ ಸ್ವಂತ ಸಹೋದರ ಮೊಹಮದ್ ಹನೀಫ್ನನ್ನು ಸಜ್ಜುಗೊಳಿಸಿದ್ದ ಎಂದು ತಿಳಿದು ಬಂದಿದೆ. ಕೆಲವು ದಿನಗಳ ಹಿಂದೆ ಚೆನ್ನೈಯ “ಕ್ಯು’ ಬ್ರಾಂಚ್ ಪೊಲೀಸರಿಂದ ಇನ್ನೊಬ್ಬ ಶಂಕಿತ ಉಗ್ರ ಹನೀಫ್ ಬಂಧನಕ್ಕೆ ಒಳಗಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!