ಚಂಡರಕಿಯಲ್ಲಿ ಹಳ್ಳ ಹಿಡಿದ ಜೆಜೆಎಂ ಕಾಮಗಾರಿ

159 ಲಕ್ಷ ರೂ. ವೆಚ್ಚದ ಮಹತ್ವದ ಕಾಮಗಾರಿ | ಪೈಪ್‌ಲೈನ್‌ಗಾಗಿ ಎರಡು ಅಡಿಯೂ ತೋಡಿಲ್ಲ | ವಾಹನಗಳ ಸಂಚಾರ; ಪೈಪ್‌ ಒಡೆವ ಆತಂಕ

Team Udayavani, Mar 14, 2023, 4:13 PM IST

charandi

ಗುರುಮಠಕಲ್‌: ಪ್ರತಿ ಮನೆಗೂ ನೀರು ತಲುಪಿಸುವ ಅಂದಾಜು 159 ಲಕ್ಷ ರೂ. ವೆಚ್ಚದ ಕೇಂದ್ರ ಸರ್ಕಾರದ ಮಹತ್ವದ ಜಲ ಜೀವನ್‌ ಮಿಷನ್‌ ಯೋಜನೆ ಗಡಿ ತಾಲೂಕಿನ ಚಂಡರಕಿಯಲ್ಲಿ ಹಳ್ಳ ಹಿಡಿದಿದೆ. ಗ್ರಾಮದಲ್ಲಿ ಮುಂದಿನ 30 ವರ್ಷಗಳವರೆಗೆ ಮನೆ ಮನೆಗೆ ನೀರು ಪೂರೈಸುವ ದೂರದೃಷ್ಟಿಯ ಯೋಜನೆ ಕಾಮಗಾರಿಯನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಬೇಕಿತ್ತು ಆದರೆ ಸಂಬಂಧಿಸಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಲಕ್ಷ ವಹಿಸಿಲ್ಲ.

ಇದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗುವಂತೆ ಮಾಡಿದೆ. ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸುವ ಸಲುವಾಗಿ ಪೈಪ್‌ಲೈನ್‌ ಹಾಕಲು ಸುಮಾರು 6387 ಮೀಟರ್‌ ಸಿಸಿ ರಸ್ತೆ ಅಗೆಯಲಾಗಿದೆ. ಆದರೆ ಪೈಪ್‌ಲೈನ್‌ ಅಳವಡಿಕೆಗೆ ಎರಡು ಅಡಿ ಸಹ ಆಳ ತೋಡದೇ ಪೈಪ್‌ ಹಾಕಲಾಗಿದ್ದು, ವಾಹನಗಳ ಸಂಚಾರದಿಂದ ಪೈಪ್‌ ಒಡೆಯುವ ಆತಂಕ ಎದುರಾಗಿದೆ. ಇನ್ನು ಕೆಲವು ಕಡೆ  ಚರಂಡಿಗಳ ಮೂಲಕವೇ ಮನೆಗಳಿಗೆ ನಳದ ಸಂಪರ್ಕ ನೀಡಲಾಗಿದೆ. ತಾಲೂಕಿನ ಅನಪುರದಲ್ಲಿ ಕಲುಷಿತ ನೀರು ಸೇವನೆಯಿಂದ 3 ಜನರು ಮೃತಪಟ್ಟು, 60 ಜನರು ಅಸ್ವಸ್ಥಗೊಂಡ ಕಹಿ ಘಟನೆ ಕಣ್ಣೆದುರು ಇರುವಾಗಲೇ ಇಲ್ಲೊಂದು ಅಚಾತುರ್ಯಕ್ಕೆ ಅಧಿಕಾರಿಗಳು ಎಡೆ ಮಾಡಿದಂತಾಗಿದೆ.

ಗ್ರಾಮದಲ್ಲಿ 4 ಸಾವಿರದಷ್ಟು ಜನಸಂಖ್ಯೆಯಿದ್ದು, ಒಟ್ಟು 895 ನಳ ಸಂಪರ್ಕಗಳನ್ನು ನೀಡುವ ಉದ್ದೇಶವಿದೆ. ಈಗಾಗಲೇ ಗ್ರಾಮ ಪಂಚಾಯಿತಿ 423 ಮನೆಗಳಿಗೆ ನಳ ಸಂಪರ್ಕ ನೀಡಿದೆ. ಉಳಿದ 472 ಮನೆಗಳಿಗೆ ನೀರಿನ ನಳ ಜೋಡಣೆ ಕಾರ್ಯ ನಡೆಯುತ್ತಿದೆ. ಈಗಾಗಲೇ ಬಹುತೇಕ ನಳಗಳ ಜೋಡಣೆಯೇನೋ ಆಗಿದೆ. ನಳಗಳಿಗೆ ಟ್ಯಾಪ್‌ಗಳನ್ನು ಅಳವಡಿಸದೇ ಹಾಗೆ ಬಿಡಲಾಗಿದೆ. ಇನ್ನೂ ಕೆಲವು ಕಡೆ ನಳ ಸಂಪರ್ಕವೇ ನೀಡದೇ ಕೇವಲ ಮೀಟರ್‌ ಮಾತ್ರ ಕೂಡ್ರಿಸಿರುವುದು ಕಂಡು ಬರುತ್ತಿದೆ. ಕಾಮಗಾರಿ ಮುಗಿಯುವ ಹಂತಕ್ಕೆ ತಲುಪಿದೆ ಎನ್ನುವ ಮಾಹಿತಿ ತಿಳಿದು ಬಂದಿದ್ದು, ಅಪೂರ್ಣವಾಗಿರುವ ಕಾಮಗಾರಿಯನ್ನು ಸಂಪೂರ್ಣವಾಗಿ ಪರಿಶೀಲಿಸಿ ಗ್ರಾಮ ಪಂಚಾಯಿತಿ ತನ್ನ ಸುಪರ್ದಿಗೆ ಪಡೆಯುವುದು ಅಗತ್ಯವಿದೆ.

ನನ್ನ ಗಮನಕ್ಕೆ ಬಂದಿಲ್ಲ. ಆಯಾ ಸ್ಥಳೀಯ ಆಡಳಿತಕ್ಕೆ ದೂರು ನೀಡಿದಲ್ಲಿ ಕಾಮಗಾರಿ ಬಿಲ್‌ ತಡೆ ಹಿಡಿಯಲಾಗುವುದು ಹಾಗೂ ಜನರಿಗೆ ನೀರು ಒದಗಿಸುವ ಪ್ರಯತ್ನ ಪಡುತ್ತೇನೆ.

~ನಾಗನಗೌಡ ಕಂದಕೂರು, ಶಾಸಕ

ನಮ್ಮ ಮನೆಗೆ ನಳ ಹಾಕಿ ಎರಡು ತಿಂಗಳು ಆಯ್ತು. ಒಂದು ಹನಿ ನೀರೂ ಬಂದಿಲ್ಲ. ನೀರಿಗಾಗಿ ಪರದಾಡುವಂತಾಗಿದೆ. ಅಧಿಕಾರಿಗಳು ಜೆಜೆಎಂ ಕೆಲಸ ಮಾಡಿಯೂ ಮಾಡಿಲ್ಲದಂತಾಗಿದೆ. ನಮಗೆ ಉಪಯೋಗ ಆಗುವಂತೆ ಮಾಡಬೇಕಾಗಿದೆ.
~ ವೆಂಕಟೇಶ, ಸ್ಥಳೀಯ

~ಚೆನ್ನಕೇಶವುಲು ಗೌಡ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.