ಮಾನವೀಯ ಮೌಲ್ಯಗಳ ಪುನರುತ್ಥಾನಕ್ಕಾಗಿ ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ಗಮನ ಸೆಳೆದ ಪದವೀಧರ !

ಜ್ಞಾನ ಭಿಕ್ಷಾ ಕಾಲ್ನಡಿಗೆ ಯಾತ್ರೆಯ ಮೂಲಕ ರಾಜ್ಯಾದ್ಯಂತ ಸಂಚಾರ, 12 ಸಾವಿರ ಕಿ. ಮೀ. ಸಂಚಾರದ ಗುರಿ

Team Udayavani, Aug 2, 2021, 5:13 PM IST

ಮಾನವೀಯ ಮೌಲ್ಯಗಳ ಪುನರುತ್ಥಾನಕ್ಕಾಗಿ ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ಗಮನ ಸೆಳೆದ ಪದವೀಧರ !

ಕಾಪು : ಹಣದ ದಾಹದಿಂದಾಗಿ ಮನುಷ್ಯನಲ್ಲಿ ಮಾನವೀಯತೆ ಕಡಿಮೆಯಾಗುತ್ತಿದೆ. ಎಲ್ಲದಕ್ಕೂ ಹಣವೇ ಪ್ರಧಾನವಾಗಿರುವ ಇಂದಿನ ಆಧುನಿಕ ಕಾಲಘಟ್ಟದಲ್ಲಿ ದಿಢೀರ್ ಶ್ರೀಮಂತಿಕೆ ಗಳಿಸಬೇಕೆಂಬ ಮನುಷ್ಯನ ಹಂಬಲಕ್ಕೆ ಬಿದ್ದಿರುವ ಮನುಷ್ಯ ಯಂತ್ರದಂತೆ ಹಣದ ಹಿಂದೆ ಓಡಲಾರಂಭಿಸಿದ್ದಾನೆ. ಇದರಿಂದಾಗಿ ಸಾಮಾಜಿಕ ಮೌಲ್ಯಗಳು ಕುಸಿಯುತ್ತಿದ್ದು, ಮನುಷ್ಯನಲ್ಲಿ ಬುದ್ಧಿಮತ್ತೆ ಮತ್ತು ಪ್ರಾಪಂಚಿಕ ಜ್ಞಾನವು ನಶಿಸುತ್ತಿದೆ. ಇದನ್ನೆಲ್ಲಾ ಸಮಾಜದ ಮುಂದೆ ತಿಳಿಯಪಡಿಸಿ, ಕುಸಿಯುತ್ತಿರುವ ಮಾನವೀಯ ಮೌಲ್ಯಗಳನ್ನು ಮತ್ತೆ ಪುನರುತ್ಥಾನಗೊಳಿಸುವ ಹಂಬಲದೊಂದಿಗೆ ಬೆಂಗಳೂರಿನ ವಿವೇಕಾಂದ ಎಚ್.ಕೆ. ಅವರು ಕೈಗೊಂಡಿರುವ ಜ್ಞಾನ ಭಿಕ್ಷಾ ಪಾದಯಾತ್ರೆಗೆ ಜನರಿಂದ ಉತ್ತಮ ಸ್ಪಂದನೆ ದೊರಕಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 53 ವರ್ಷ ಪ್ರಾಯದ ಎಂ. ಎ. ಪದವೀಧರ ವಿವೇಕಾನಂದ ಎಚ್.ಕೆ. ಅವರು ಏಕ ವ್ಯಕ್ತಿ ಸಂಯೋಜನೆಯಡಿಯಲ್ಲಿ ಸಮಾಜ ಮತ್ತು ಸಮಾಜದ ಜನರಲ್ಲಿ ಕುಸಿಯುತ್ತಿರುವ ಮಾನವೀಯ ಮೌಲ್ಯಗಳನ್ನು ಪುನರುತ್ಥಾನಗೊಳಿಸುವ ಕನಸಿನೊಂದಿಗೆ ಜ್ಞಾನ ಭಿಕ್ಷಾ ಕಾಲ್ನಡಿಗೆ ಯಾತ್ರೆಯು ಶನಿವಾರ ಉಡುಪಿ ಜಿಲ್ಲೆಯ ಕಾಪುವಿನ ಮೂಲಕ ಹಾದು, ರವಿವಾರ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸಿದೆ.

ಮಾನವೀಯ ಮೌಲ್ಯಗಳ ಪುನರುತ್ಥಾನಕ್ಕಾಗಿ 2020 ನ. 1 ರಂದು ಬೀದರ್ ಜಿಲ್ಲೆಯ ಹೌರಾ ತಾಲೂಕಿನ ವನಮಾರಪಳ್ಳಿ ಎಂಬ ಹಳ್ಳಿಯಿಂದ ಜ್ಞಾನ ಭಿಕ್ಷಾ ಪಾದಯಾತ್ರೆಯನ್ನು ಆರಂಭಿಸಿರುವ ಇವರು ಕಾಲ್ನಡಿಗೆಯಲ್ಲೇ ರಾಜ್ಯದ ಪ್ರತೀ ಜಿಲ್ಲೆಗಳಿಗೆ ತೆರಳಿ ಜನಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈವರೆಗಿನ 273 ದಿನಗಳಲ್ಲಿ 8,300 ಕಿ.ಮೀ. ದೂರವನ್ನು ಕ್ರಮಿಸಿದ್ದು, ರಾಜ್ಯದ 180 ತಾಲೂಕುಗಳನ್ನು ಸಾಗಿ ಬಂದಿದ್ದು, ವರ್ಷಾಂತ್ಯದೊಳಗೆ ಚಾಮರಾಜನಗರ ತಲುಪುವ ಗುರಿ ಹೊಂದಿರುವ ಅವರು, ಆ ಮೂಲಕ ತನ್ನ ಒನ್ ಮೆನ್ ಆರ್ಮಿ ಪಾದಯಾತ್ರೆಯನ್ನು ಮುಗಿಸುವ ಸಂಕಲ್ಪ ತೊಟ್ಟಿದ್ದಾರೆ.

ಯಾಕಾಗಿ ಕಾಲ್ನಡಿಗೆ ಯಾತ್ರೆ ? : ತಂತ್ರಜ್ಞಾನ ಮತ್ತು ಆಧುನಿಕತೆ ಬೆಳೆಯುತ್ತಾ ಹೋದಂತೆ ಸಮಾಜದಲ್ಲಿ ಮಾನವೀಯ ಮೌಲ್ಯಗಳು ವೇಗವಾಗಿ ಕುಸಿಯುತ್ತಿವೆ. ವಸ್ತುಗಳು ನಮ್ಮನ್ನು ಆಳುತ್ತಿದ್ದು, ಧಾರ್ಮಿಕ, ಮಾದ್ಯಮ, ಶಿಕ್ಷಣ, ಆರೋಗ್ಯ, ರಾಜಕೀಯ ಹೀಗೆ ಎಲ್ಲಾ ಕ್ಷೇತ್ರಗಳೂ ಇಂದು ಸಂಕಷ್ಟಕ್ಕೆ ಸಿಲುಕಿವೆ. ನಮನ್ನು ಸಂಕಷ್ಟಕ್ಕೆ ಸಿಲುಕಿಸಿ ಬಿಟ್ಟಿವೆ. ಮನುಷ್ಯನ ದೇಹ ಮತ್ತು ಮನಸ್ಸು ನಶಿಸುತ್ತಿವೆ. ಯುವಕರಿಗೆ ಮಾನಸಿಕ ಮತ್ತು ದೈಹಿಕ ಧೃಡತೆಯನ್ನು ದೊರಕಿಸಿಕೊಡುವ ಉದ್ದೇಶದೊಂದಿಗೆ ಈ ಕಾಲ್ನಡಿಗೆ ಯಾತ್ರೆಯನ್ನು ಕೈಗೊಂಡಿದ್ದಾರೆ.

ಏನೇನು ಮಾಡ್ತಾರೆ ? : ಹಣ ಸಂಪಾದನೆಯೇ ಮುಖ್ಯವಾಗಿರುವುದರಿಂದ ಸಾಮಾಜಿಕ ಮೌಲ್ಯಗಳು ಅಪಮೌಲ್ಯಗೊಳ್ಳುತ್ತಿವೆ. ಘನತೆಯನ್ನು ಕಳೆದುಕೊಳ್ಳುತ್ತಿರುವ ಜನರ ನಡುವೆ ಗೊಂದಲದ ಗುಹೆಯೊಳಗೆ ಸಿಲುಕಿರುವ ಯುವ ಜನರ ಮನಪರಿವರ್ತನೆ ಮಾಡಿ,  ಮುಂದಿನ 15 ವರ್ಷಗಳೊಳಗೆ ಸಮಾಜದ ಸ್ವಾಸ್ಥ ವನ್ನು ಹೇಗೆಲ್ಲಾ ಕಾಪಾಡಿಕೊಳ್ಳಬಹುದು, ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬಹುದು ಎನ್ನುವುದನ್ನು ತಿಳಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಅಲ್ಲಲ್ಲಿ ಯುವ ಜನರು, ಸಮಾನ ಮನಸ್ಕರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಿ, ತಮ್ಮ ಮನದಾಳದ ಇಂಗಿತವನ್ನು ಆತಂಕವನ್ನು ಹಂಚಿಕೊಳ್ಳುತ್ತಿದ್ದಾರೆ. ಜನರಿಂದ ಪೂರಕ ಜ್ಞಾನ, ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿದ್ದಾರೆ.

ಎಲ್ಲರಿಂದಲೂ ಉತ್ತಮ ಸಹಕಾರ : ಜೀವನದಲ್ಲಿ ಮುಂದೆಂದೂ ಹಣ ಸಂಪಾದನೆಯ ಯಾವುದೇ ವ್ಯವಹಾರದಲ್ಲಿ ತೊಡಗುವುದಿಲ್ಲ ಎಂಬ ಸಂಕಲ್ಪ ಸ್ವೀಕರಿಸಿರುವ ಇವರು, ಮುಂದೆ ಬರವಣಿಗೆಯ ಮೂಲಕ ಬರುವ ಹಣವನ್ನಷ್ಟೇ ತನ್ನ ವೈಯಕ್ತಿಕ ಜೀವನದಲ್ಲಿ ಬಳಸಿಕೊಳ್ಳಲು ಇಚ್ಛಿಸಿದ್ದಾರೆ. ಕಾಲ್ನಡಿಗೆ ಯಾತ್ರೆಯುದ್ದಕ್ಕೂ ಯಾರೇ ಹಣ ಕೊಟ್ಟರೆ ಪಡೆದುಕೊಳ್ಳುವುದಿಲ್ಲ. ಹಣವಿಲ್ಲದೆ ಕಾಲಿ ಕೈಯಲ್ಲಿ ನಡೆಯುತ್ತಿರುವ ಇವರಿಗೆ ಪರಿಚಿತರು ಮತ್ತು ಇವರ ಕಾಲ್ನಡಿಗೆಯ ಯಾತ್ರೆಯ ಮಹತ್ವ ಅರಿತವರು ತಾವಾಗಿಯೇ ಮುಂದೆ ಬಂದು ಊಟ ವಸತಿ ವ್ಯವಸ್ಥೆಗಳನ್ನು ಜೋಡಿಸಿಕೊಡುವ ಮೂಲಕ ಜನರು ಉತ್ತಮ ಸ್ಪಂಧನೆ ನೀಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮುಂದೆ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಅಭಿಯಾನ : ಇತಿಹಾಸದಲ್ಲಿ ಎಂ. ಎ. ಪದವಿ ಪಡೆದಿರುವ ವಿವೇಕಾನಂದ ಎಚ್.ಕೆ. ಅವರು ಪತ್ರಿಕೋದ್ಯಮ ಮತ್ತು ಸಿನಿಮಾ ನಟನೆಯಲ್ಲಿ ಡಿಪ್ಲೋಮಾ ಮಾಡಿದ್ದು 20 ವರ್ಷ ಜಾಹೀರಾತು ರಂಗದಲ್ಲೂ ವೃತ್ತಿಯನ್ನು ನಿರ್ವಹಿಸಿದ್ದಾರೆ. ಮನುಷ್ಯತ್ವ ಮರೆಯಾಗಲು ಮನುಷ್ಯನಲ್ಲಿರುವ ಹಣದ ದುರಾಸೆಯೇ ಕಾರಣವೆಂಬ ಅಂಶವನ್ನು ಅರ್ಥೈಸಿಕೊಂಡ ಅವರು, ತನಗಾದ ಜ್ಞಾನೋದಯದ ಮಾರ್ಗವನ್ನು ಇತರರಿಗೂ ತಿಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಗ್ರಾಮ ಮಟ್ಟದಲ್ಲಿ ಸಂಚರಿಸುವ ಉದ್ದೇಶ ಹೊಂದಿರುವ ಅವರು ಗ್ರಾಮ, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲೂ ಸಂಚರಿಸಿ, ಶಾಲಾ ಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳ ಪುನರುತ್ಥಾನಕ್ಕಾಗಿ ಜನ ಜಾಗೃತಿ ಮೂಡಿಸುವ ಉದ್ದೇಶ ಹೊಂದಿದ್ದಾರೆ.

ಉಡುಪಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಂಚರಿಸಿದ ವಿವೇಕಾನಂದ್ ಎಚ್. ಕೆ. ಅವರೊಂದಿಗೆ ಉಡುಪಿ ನಗರದಿಂದ ಹೆಜಮಾಡಿಯವರೆಗೆ ಕೆ.ಎನ್. ಪ್ರಭು, ಪ್ರೇಮಾನಂದ್ ಕಲ್ಮಾಡಿ, ನಾಗರಾಜ ಮೂರ್ತಿ ಅವರು ಕೈ ಜೋಡಿಸಿದ್ದರು. ಕಾಪುವಿನಲ್ಲಿ ಕಾಪು ತಾಲೂಕು ಕಾರ್ಯ ನಿರತರ ಪತ್ರಕರ್ತರ ಸಂಘದ ಸದಸ್ಯರು, ಪಡುಬಿದ್ರಿಯಲ್ಲಿ ಕಾಪು ತಾಲೂಕು ಅಂಬೇಡ್ಕರ್ ಯುವಸೇನೆ ಮತ್ತು ಪಡುಬಿದ್ರಿ ಗ್ರಾಮ ಶಾಖೆಯ ವತಿಯಿಂದ ಸ್ವಾಗತಿಸಿ, ಬೀಳ್ಕೊಡಲಾಯಿತು.

– ರಾಕೇಶ್ ಕುಂಜೂರು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.