ಅಗ್ನಿಶಾಮಕದಳದಲ್ಲಿ ಸಿಬ್ಬಂದಿ ಕೊರತೆ :181 ಮಂಜೂರಾತಿ ಹುದ್ದೆಗಳಲ್ಲಿ 106 ಹುದ್ದೆ ಭರ್ತಿ


Team Udayavani, Jan 6, 2021, 11:19 AM IST

ಅಗ್ನಿಶಾಮಕದಳದಲ್ಲಿ ಸಿಬ್ಬಂದಿ ಕೊರತೆ :181 ಮಂಜೂರಾತಿ ಹುದ್ದೆಗಳಲ್ಲಿ 106 ಹುದ್ದೆ ಭರ್ತಿ

ಹಾವೇರಿ: ಅಗ್ನಿ ಅವಘಡದಂತಹ ತುರ್ತು ಸಂದರ್ಭದಲ್ಲಿ ಶೀಘ್ರ ನೆರವಿಗೆ ಬರಬೇಕಾದ ಅಗ್ನಿಶಾಮಕದಳ ಸಿಬ್ಬಂದಿ ಕೊರತೆಯಿಂದ ಬಳಲುತ್ತಿದೆ. ಇದರಿಂದ ಸಕಾಲಕ್ಕೆ ಸಮರ್ಪಕ ಸೇವೆ ಒದಗಿಸಲು ಅಡಚಣೆಯಾಗುತ್ತಿದೆ.

ಜಿಲ್ಲಾ ಅಗ್ನಿಶಾಮಕ ಅಧಿ ಕಾರಿಗಳ ಕಚೇರಿಯಲ್ಲಿ ಒಟ್ಟು 181 ಮಂಜೂರಾತಿ ಹುದ್ದೆಗಳಿದ್ದು, ಇದರಲ್ಲಿ 106 ಹುದ್ದೆಗಳು
ಭರ್ತಿಯಾಗಿವೆ. ಉಳಿದ 75 ಹುದ್ದೆಗಳು ಖಾಲಿ ಇವೆ. ಹಾವೇರಿ ಅಗ್ನಿಶಾಮಕ ಠಾಣೆಯಲ್ಲಿ 6, ರಾಣೆಬೆನ್ನೂರು ಅಗ್ನಿಶಾಮಕ ಠಾಣೆಯಲ್ಲಿ 13, ಹಾನಗಲ್ಲ ಅಗ್ನಿಶಾಮಕ ಠಾಣೆಯಲ್ಲಿ 13, ಹಿರೇಕೆರೂರು ಅಗ್ನಿಶಾಮಕ ಠಾಣೆಯಲ್ಲಿ 12, ಶಿಗ್ಗಾವಿ ಅಗ್ನಿಶಾಮಕ ಠಾಣೆಯಲ್ಲಿ 11, ಬ್ಯಾಡಗಿ ಅಗ್ನಿಶಾಮಕ ಠಾಣೆಯಲ್ಲಿ 10, ಸವಣೂರು ಅಗ್ನಿಶಾಮಕ ಠಾಣೆಯಲ್ಲಿ 10 ಹುದ್ದೆಗಳು ಖಾಲಿ ಇವೆ.

ಮೂರು ಕಡೆ ಠಾಣಾಧಿ ಕಾರಿಗಳೇ ಇಲ್ಲ:
ಹಿರೇಕೆರೂರು, ಬ್ಯಾಡಗಿ, ಸವಣೂರು ಅಗ್ನಿಶಾಮಠ ಠಾಣೆಗಳಲ್ಲಿ ಠಾಣಾ ಧಿಕಾರಿಗಳೇ ಇಲ್ಲ. ಹಾನಗಲ್ಲನಲ್ಲಿ ಸಹಾಯಕ ಠಾಣಾ ಧಿಕಾರಿಯೂ ಇಲ್ಲದ ಪರಿಸ್ಥಿತಿ ಇದೆ. ಹಾನಗಲ್ಲ, ಹಿರೇಕೆರೂರು ಹಾಗೂ ಬ್ಯಾಡಗಿ ಠಾಣೆಗಳಲ್ಲಿ ಚಾಲಕ ತಂತ್ರಜ್ಞರು ಒಬ್ಬರೂ
ಇಲ್ಲ. ಹಾನಗಲ್ಲ ಹಾಗೂ ಶಿಗ್ಗಾವಿ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕರ ಕೊರತೆಯೂ ಇದೆ. ಈ ತುರ್ತು ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸುವ ಅಗ್ನಿಶಾಮಕರ ಸಂಖ್ಯೆಯೂ ಅರ್ಧಕ್ಕರ್ಧ ಖಾಲಿ ಇದೆ.

ಇದನ್ನೂ ಓದಿ:ಪಾಕ್ ಪರ ಘೋಷಣೆ ವಿಚಾರ:ಬೆಳ್ತಂಗಡಿ ಪೊಲೀಸ್ ಠಾಣೆ ಎದುರು ಜಮಾಯಿಸಿದ ನೂರಾರುSDPI ಕಾರ್ಯಕರ್ತರು

ಜಿಲ್ಲಾ ಅಗ್ನಿಶಾಮಕ ಕಚೇರಿಯಲ್ಲಿ ಜಿಲ್ಲಾ ಅಗ್ನಿಶಾಮಕ ಅಧಿ ಕಾರಿ ಹುದ್ದೆ ಒಂದು, ಅಗ್ನಿಶಾಮಕ ಠಾಣಾ ಧಿಕಾರಿಗಳು 7, ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಗಳು 6, ಚಾಲಕ ತಂತ್ರಜ್ಞರು 6, ಪ್ರಮುಖ ಅಗ್ನಿಶಾಮಕರು 27, ಅಗ್ನಿಶಾಮಕ ಚಾಲಕರು 32, ಅಗ್ನಿಶಾಮಕರು 102 ಹೀಗೆ ಒಟ್ಟು 181 ಮಂಜೂರಾತಿ ಹುದ್ದೆಗಳಿವೆ. ಆದರೆ, ಅಗ್ನಿಶಾಮಕ ಠಾಣಾಧಿಕಾರಿಗಳ 3 ಹುದ್ದೆ, ಸಹಾಯಕ ಠಾಣಾಧಿ ಕಾರಿಗಳ ಒಂದು ಹುದ್ದೆ, ಚಾಲಕ ತಂತ್ರಜ್ಞರ 3 ಹುದ್ದೆ, ಪ್ರಮುಖ ಅಗ್ನಿಶಾಮಕರ 2 ಹುದ್ದೆ, ಅಗ್ನಿಶಾಮಕ ಚಾಲಕರ 10 ಹುದ್ದೆ ಹಾಗೂ ಅಗ್ನಿಶಾಮಕರ 56 ಹುದ್ದೆಗಳು ಖಾಲಿ ಇವೆ.

ಜಿಲ್ಲಾ ಅಗ್ನಿಶಾಮಕ ಕಚೇರಿಯಲ್ಲಿ ಜಿಲ್ಲಾ ಅಗ್ನಿಶಾಮಕ ಅ ಧಿಕಾರಿ ಹುದ್ದೆ ಒಂದು, ಅಗ್ನಿಶಾಮಕ ಠಾಣಾಧಿ ಕಾರಿಗಳು 4, ಸಹಾಯಕ ಠಾಣಾಧಿಕಾರಿಗಳು 5, ಚಾಲಕ ತಂತ್ರಜ್ಞರು 3, ಪ್ರಮುಖ ಅಗ್ನಿಶಾಮಕರು 25, ಅಗ್ನಿಶಾಮಕ ಚಾಲಕರು 22, ಅಗ್ನಿಶಾಮಕರು 46 ಹೀಗೆ ಒಟ್ಟು 106 ಹುದ್ದೆಗಳು ಮಾತ್ರ ಭರ್ತಿಯಾಗಿವೆ.

ಸಿಬ್ಬಂದಿ ಕೊರತೆಯ ನಡುವೆಯೂ ಅಗ್ನಿಶಾಮಕ ದಳ ಇರುವಷ್ಟು ಸಿಬ್ಬಂದಿ ಬಳಸಿಕೊಂಡು ತುರ್ತು ಸೇವೆಯಲ್ಲಿ ನಿರತವಾಗಿದೆ. ಸರ್ಕಾರ ಕೂಡಲೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಸಿಬ್ಬಂದಿ ಮೇಲಿನ ಕೆಲಸದ ಒತ್ತಡ ಕಡಿಮೆ ಮಾಡುವ ಮೂಲಕ
ಅಗ್ನಿಶಾಮಕ ದಳಕ್ಕೆ ಇನ್ನಷ್ಟು ಬಲ ತುಂಬಬೇಕಿದೆ.

ಅಗ್ನಿಶಾಮಕ ಠಾಣೆ-ಹುದ್ದೆಗಳ ವಿವರ:
ಹಾವೇರಿ ಅಗ್ನಿಶಾಮಕ ಠಾಣೆಯಲ್ಲಿ ಒಟ್ಟು 25 ಮಂಜೂರಾತಿ ಹುದ್ದೆಗಳಿದ್ದು 19 ಹಾಲಿ ಹುದ್ದೆಗಳು ಭರ್ತಿಯಾಗಿವೆ. 6 ಹುದ್ದೆಗಳು ಖಾಲಿ ಇವೆ. ರಾಣೆಬೆನ್ನೂರು ಅಗ್ನಿಶಾಮಕ ಠಾಣೆಯಲ್ಲಿ ಒಟ್ಟು 27 ಮಂಜೂರಾತಿ ಹುದ್ದೆಗಳಿದ್ದು 14 ಹಾಲಿ ಹುದ್ದೆಗಳು ಭರ್ತಿಯಾಗಿವೆ. 13 ಹುದ್ದೆಗಳು ಖಾಲಿ ಇವೆ. ಹಾನಗಲ್ಲ ಅಗ್ನಿಶಾಮಕ ಠಾಣೆಯಲ್ಲಿ ಒಟ್ಟು 27 ಮಂಜೂರಾತಿ ಹುದ್ದೆಗಳಿದ್ದು, 14 ಹಾಲಿ ಹುದ್ದೆಗಳು ಭರ್ತಿಯಾಗಿವೆ. 13 ಹುದ್ದೆಗಳು ಖಾಲಿ ಇವೆ. ಹಿರೇಕೆರೂರು ಹಾನಗಲ್ಲ ಅಗ್ನಿಶಾಮಕ ಠಾಣೆಯಲ್ಲಿ ಒಟ್ಟು 27 ಮಂಜೂರಾತಿ ಹುದ್ದೆಗಳಿದ್ದು, 15 ಹಾಲಿ ಹುದ್ದೆಗಳು ಭರ್ತಿಯಾಗಿವೆ. 12 ಹುದ್ದೆಗಳು ಖಾಲಿ ಇವೆ. ಶಿಗ್ಗಾವಿ ಅಗ್ನಿಶಾಮಕ ಠಾಣೆಯಲ್ಲಿ ಒಟ್ಟು 27 ಮಂಜೂರಾತಿ ಹುದ್ದೆಗಳಿದ್ದು, 16 ಹಾಲಿ ಹುದ್ದೆಗಳು ಭರ್ತಿಯಾಗಿವೆ. 11 ಹುದ್ದೆಗಳು ಖಾಲಿ ಇವೆ. ಬ್ಯಾಡಗಿ ಅಗ್ನಿಶಾಮಕ ಠಾಣೆಯಲ್ಲಿ ಒಟ್ಟು 24 ಮಂಜೂರಾತಿ ಹುದ್ದೆಗಳಿದ್ದು, 14 ಹಾಲಿ ಹುದ್ದೆಗಳು ಭರ್ತಿಯಾಗಿವೆ. 10 ಹುದ್ದೆಗಳು
ಖಾಲಿ ಇವೆ. ಸವಣೂರು ಅಗ್ನಿಶಾಮಕ ಠಾಣೆಯಲ್ಲಿ ಒಟ್ಟು 24 ಮಂಜೂರಾತಿ ಹುದ್ದೆಗಳಿದ್ದು 14 ಹಾಲಿ ಹುದ್ದೆಗಳು ಭರ್ತಿಯಾಗಿವೆ. 10 ಹುದ್ದೆಗಳು ಖಾಲಿ ಇವೆ.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.