ಕಾನೂನು ವಿವಿ ಆಯ್ದ ಸೇವೆ ಸೇವಾಸಿಂಧು ವ್ಯಾಪ್ತಿಗೆ


Team Udayavani, Jan 11, 2020, 3:07 AM IST

kanoonu-vv

ಬೆಂಗಳೂರು: ಇದೇ ಮೊದಲ ಬಾರಿಗೆ ಕಾನೂನು ಇಲಾಖೆ ವ್ಯಾಪ್ತಿಯ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಆಯ್ದ ಸೇವೆಗಳನ್ನು ಸೇವಾಸಿಂಧು ಯೋಜನೆ ವ್ಯಾಪ್ತಿಗೆ ತರಲಾಗಿದ್ದು, ವಿದ್ಯಾರ್ಥಿಗಳು ಆಯ್ದ ಸೇವೆಗಳನ್ನು ಬೆರಳ ತುದಿಯಲ್ಲಿ ಅರ್ಜಿ ಸಲ್ಲಿಸಿ ಪಡೆಯಬಹುದಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

ವಿಧಾನಸೌಧದಲ್ಲಿ ಶುಕ್ರವಾರ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ 106 ಕಾನೂನು ಕಾಲೇಜುಗಳಿದ್ದು, ಕಾನೂನು ವಿವಿಗಳ ಆಯ್ದ ಸೇವೆಗಳನ್ನು ಸೇವಾಸಿಂಧು ಸೇವೆಯಡಿ ಅಳವಡಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳ ಅನಗತ್ಯ ಓಡಾಟ, ವಿಳಂಬವನ್ನು ತಪ್ಪಿಸಲು ಸ್ವಲ್ಪ ಮಟ್ಟಿಗೆ ಅನುಕೂಲವಾಗಲಿವೆ. ವಿದ್ಯಾರ್ಥಿ ಗಳು ಬಯಸಿದ ಸೇವೆ, ದಾಖಲೆಗಳಿಗೆ ಬೆರಳ ತುದಿಯಲ್ಲಿ ಅರ್ಜಿ ಸಲ್ಲಿಸಿ ಪಡೆಯಬಹುದಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಆಯ್ದ ಸೇವೆ ಪಡೆಯಲು ಅನಗತ್ಯವಾಗಿ ಓಡಾಡುವುದನ್ನು ತಪ್ಪಿಸಲು ಇದರಿಂದ ಅನುಕೂಲ ವಾಗಲಿದೆ. ದಾಖಲೆಗಳನ್ನು ಪಡೆಯುವ ಪ್ರಕ್ರಿಯೆಯನ್ನು ಸಾಕಷ್ಟು ಸರಳಗೊಳಿಸಲಾಗಿದೆ ಎಂದರು. ಹಾಗೆಯೇ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಅಂತರ್ಜಲ ನಿರ್ದೇಶನಾಲಯದ ಮೂರು ಸೇವೆಗಳನ್ನು ಸೇವಾ ಸಿಂಧು ಯೋಜನೆ ವ್ಯಾಪ್ತಿಗೆ ತರಲಾಗಿದೆ.

ಬಾವಿ ಅಥವಾ ಕೊಳವೆ ಸ್ಥಳ ಆಯ್ಕೆಗೆ ಭೂಭೌತಿಕ ವಿಧಾನಕ್ಕೆ 1000 ರೂ. ಹಾಗೂ ಭೂವೈಜ್ಞಾನಿಕ ವಿಧಾನಕ್ಕೆ 2,000 ರೂ. ಶುಲ್ಕ ಪಾವತಿಸಿ ಪಡೆಯಬಹುದು. ನಾಗರಿಕ ಸೇವಾ ಕೇಂದ್ರ ಸೇರಿ ಇತರೆ ಸೇವಾಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಬಹುದು. ಬಳಿಕ ನಿಗದಿತ ದಿನಾಂಕ ನೀಡಿ ಸಮೀಕ್ಷೆ ನಡೆಸಿ ಸೇವೆ ಒದಗಿಸಲಾಗುತ್ತದೆ ಎಂದು ಹೇಳಿದರು.

“ಸಕಾಲ’ ಯೋಜನೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್‌ ಚಾವ್ಲಾ, ಸೇವಾ ಸಿಂಧು ಯೋಜನೆಯು ಡಿಜಿ ಲಾಕರ್‌ ಜತೆಗೆ ಜೋಡಣೆಯಾಗಿದೆ. ಸೇವಾ ಸಿಂಧು ಯೋಜನೆ ಯಡಿ 354 ಸೇವೆ ಪಡೆಯ ಬಹುದಾಗಿದೆ. ಸಾಕಷ್ಟು ಮಂದಿ ಡಿಜಿ ಲಾಕರ್‌ ಸೇವೆ ಬಳಸುತ್ತಿಲ್ಲ. ಹಾಗಾಗಿ ಅರ್ಜಿ ಸಲ್ಲಿಸಿದಾಗ ಸ್ವಯಂ ಪ್ರೇರಿತವಾಗಿ ಡಿಜಿ ಲಾಕರ್‌ ತೆರೆಯಲಾಗುತ್ತದೆ.

ಬಳಿಕ ಅರ್ಜಿ ಸಲ್ಲಿಸಿದರೆ ನಿರ್ದಿಷ್ಟ ಸೇವೆಯು ಡಿಜಿ ಲಾಕರ್‌ಗೆ ವರ್ಗಾವಣೆಯಾಗಿ ಅರ್ಜಿ ದಾರರಿಗೆ ಲಭ್ಯವಾಗಲಿದೆ. ಆಯ್ದ ಇಲಾಖೆಗಳ ಹಾಲಿ ದಾಖಲೆಗಳು ಡಿಜಿ ಲಾಕರ್‌ನಲ್ಲಿ ದಾಖಲಾಗಿರದ ಕಾರಣ ಸೇವೆಯಲ್ಲಿ ವ್ಯತ್ಯಯವಾಗಿರಬಹುದು. ಆದರೆ ಈಗ ಸೇರ್ಪಡೆ ಮಾಡಿರುವ ಸೇವೆಗಳ ಎಲ್ಲ ದಾಖಲೆಯೂ ಲಭ್ಯವಿರಲಿದೆ ಎಂದು ಹೇಳಿದರು.

ಸೇವಾ ಸಿಂಧುವಿನಲ್ಲಿ ಲಭ್ಯವಿರುವ ಸೇವೆ
ರಾಜ್ಯ ಕಾನೂನು ವಿವಿ (ಕಾನೂನು ಇಲಾಖೆ): ಅರ್ಹತಾ ಪ್ರಮಾಣ ಪತ್ರ, ವಲಸೆ ಪ್ರಮಾಣ ಪತ್ರ, ಕಾಲೇಜು ಬದಲಾವಣೆ, ಪದವಿ ಪ್ರಮಾಣ ಪತ್ರ, ಎಸ್‌ಎಸ್‌ಎಲ್‌ಸಿ/ ಪಿಯುಸಿ ಅನ್ವಯ ಅಂಕಪಟ್ಟಿ ತಿದ್ದುಪಡಿ, ವಿದ್ಯಾರ್ಥಿ ದಾಖಲೆಗಳ ಅಧಿಕೃತ ಪ್ರತಿಲೇಖನಕ್ಕಾಗಿ ಅರ್ಜಿ, ಪ್ರಮಾಣಪತ್ರಗಳ ಸಾಚಾತನ ಪರಿಶೀಲನೆಗಾಗಿ ಅರ್ಜಿ, ತಾತ್ಕಾಲಿಕ ಪದವಿ ಪ್ರಮಾಣ ಪತ್ರ (ಪಿಡಿಸಿ), ನಕಲು ತಾತ್ಕಾಲಿಕ ಪದವಿ ಪ್ರಮಾಣ ಪತ್ರ (ಪಿಡಿಸಿ), ಪದವಿ ಪ್ರಮಾಣ ಪತ್ರದ ನಕಲು ಪ್ರತಿ, ಅಂಕ ಪಟ್ಟಿಗಳ ನಕಲು ಪ್ರತಿ, ಉತ್ತೀರ್ಣ ಪ್ರಮಾಣ ಪತ್ರ, ಉತ್ತೀರ್ಣ ಪ್ರಮಾಣ ಪತ್ರದ ನಕಲು ಪ್ರತಿ, ಎಸ್‌ಎಸ್‌ಎಲ್‌ಸಿ- ಪಿಯುಸಿ ಅಂಕಪಟ್ಟಿ ಆಧರಿಸಿ ಜಾತಿ ಪ್ರಮಾಣಪತ್ರ- ಜನ್ಮದಿನಾಂಕ ತಿದ್ದುಪಡಿ ಅರ್ಜಿ.

ಅಂತರ್ಜಲ ನಿರ್ದೇಶನಾಲಯ (ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ): ಅಂತರ್ಜಲ ರಾಸಾಯನಿಕ ವಿಶ್ಲೇಷಣೆ, ಭೂಭೌತಿಕ ವಿಧಾನದಿಂದ ಬಾವಿ ಅಥವಾ ಕೊಳವೆ ಬಾವಿ ಸ್ಥಳ ಆಯ್ಕೆಗೆ ತಾಂತ್ರಿಕ ಸಲಹೆ, ಭೂವೈಜ್ಞಾನಿಕ ವಿಧಾನದಿಂದ ಬಾವಿ ಅಥವಾ ಕೊಳವೆ ಬಾವಿ ಸ್ಥಳ ಆಯ್ಕೆಗೆ ತಾಂತ್ರಿಕ ಸಲಹೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.