ಜ್ಯೋತಿಬಾ ದೇವಸ್ಥಾನಕ್ಕೆ ಕಳ್ಳರ ಲಗ್ಗೆ!ದೇವರ ಮೇಲಿದ್ದ 15ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
Team Udayavani, Nov 10, 2020, 12:35 PM IST
ಚಿಕ್ಕೋಡಿ: ತಾಲೂಕಿನ ಯಕ್ಸಂಬಾ ನಗರದ ಹೊರವಲಯದ ಜೊಲ್ಲೆ ಶಿಕ್ಷಣ ಸಂಸ್ಥೆಯ (ನನದಿ ಕ್ಯಾಂಪಸ್)
ಆವರಣದಲ್ಲಿರುವ ಜ್ಯೋತಿಬಾ ದೇವಸ್ಥಾನಕ್ಕೆ ಕನ್ನ ಹಾಕಿದ ಖದೀಮರು ರಾತ್ರೋರಾತ್ರಿ ದೇವರ ಮೇಲಿನ ಲಕ್ಷಾಂತರ
ಮೌಲ್ಯದ ಬೆಳ್ಳಿ ಮತ್ತು ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.
ಜ್ಯೋತಿಬಾ ದೇವಸ್ಥಾನಕ್ಕೆ ರವಿವಾರ ರಾತ್ರಿ ನುಗ್ಗಿದ ಕಳ್ಳರು ಚಿನ್ನ, ಬೆಳ್ಳಿ ಆಭರಣರಗಳು ಹಾಗೂ ಹುಂಡಿಯಲ್ಲಿರುವ ಹಣ ಸೇರಿದಂತೆ ಒಟ್ಟು ಅಂದಾಜು ಸುಮಾರು 15 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.
ಈ ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ನಸುಕಿನ ಜಾವದಲ್ಲಿ ಸ್ಥಳಕ್ಕೆ ಚಿಕ್ಕೋಡಿ ಡಿವೈಎಸ್ಪಿ ಮನೋಜಕುಮಾರ ನಾಯಿಕ, ಸಿಪಿಐ ಆರ್. ಆರ್.ಪಾಟೀಲ ಹಾಗೂ ಸದಲಗಾ ಪಿಎಸ್ಐ ಆರ್.ವೈ. ಬಿಳಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅದಲ್ಲದೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಕೂಡ ಭೇಟಿ ನೀಡಿದರು. ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಶೋಫಿಯಾನ್ ನಲ್ಲಿ ಭಾರತೀಯ ಸೇನೆಯಿಂದ ಇಬ್ಬರು ಉಗ್ರರ ಹತ್ಯೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ