ಕೆ.ಎಲ್. ರಾಹುಲ್ ತಾತ್ಕಾಲಿಕ ಕೀಪರ್: ಪಾರ್ಥಿವ್ ಪಟೇಲ್
Team Udayavani, May 21, 2020, 6:06 AM IST
ಹೊಸದಿಲ್ಲಿ: ಟೀಮ್ ಇಂಡಿಯಾದ ವಿಕೆಟ್ ಕೀಪಿಂಗ್ ಜವಾಬ್ದಾರಿಗೆ ಕೆ.ಎಲ್. ರಾಹುಲ್ ಕೇವಲ ತಾತ್ಕಾಲಿಕ ಪರಿಹಾರವಷ್ಟೇ ಎಂದು ಪಾರ್ಥಿವ್ ಪಟೇಲ್ ಅಭಿಪ್ರಾಯಪಟ್ಟಿದ್ದಾರೆ.
ರಾಹುಲ್ ಕೀಪಿಂಗ್ ಜವಾಬ್ದಾರಿ ಅತ್ಯುತ್ತಮವಾಗಿ ನಿಭಾಯಿಸಬಲ್ಲರು. ಇದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ರಿಷಭ್ ಪಂತ್ ಅವರಲ್ಲಿ ದೀರ್ಘ ಅವಧಿಗೆ ಕೀಪಿಂಗ್ ಸೇವೆ ನೀಡುವ ಸಾಮರ್ಥ್ಯವಿದೆ. ಪಂತ್ ಅವರನ್ನು ಭೇಟಿಯಾದಾಗಲೆಲ್ಲ ಅವರ ಬಳಿ ಇದನ್ನೇ ಹೇಳಿದ್ದೇನೆ. ನಿನ್ನ ಬಳಿ ಪ್ರತಿಭೆ ಇರುವ ಸಲುವಾಗಿಯೇ ಜನರು ಮಾತನಾಡುತ್ತಿದ್ದಾರೆ. ಇದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ಕೆಲವೊಮ್ಮೆ ಕಳೆದು ಹೋಗಿರುವ ಲಯವನ್ನು ಮರಳಿ ಪಡೆಯಲು ದೇಶಿ ಟೂರ್ನಿ ಗಳಲ್ಲಿ ಆಡಬೇಕು. ನಿನ್ನ ಜಾಗದಲ್ಲಿ ನಾನಿದ್ದರೂ ಕೂಡ ಒಂದೆರಡು ವರ್ಷ ದೇಶಿ ಕ್ರಿಕೆಟ್ ಆಡಿ ಲಯಕ್ಕೆ ಮರಳುತ್ತಿದ್ದೆ ಎಂದು ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದು ಪಾರ್ಥಿವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು