Kadaba; ಬಸ್ನಲ್ಲಿ ಯವತಿಯ ಜತೆ ಅನುಚಿತ ವರ್ತನೆ
Team Udayavani, Mar 10, 2024, 12:46 AM IST
ಕಡಬ: ಉಪ್ಪಿನಂಗಡಿಯಿಂದ ಕಡಬ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಸರಕಾರಿ ಬಸ್ ನಿಗದಿತ ಸ್ಥಳದಲ್ಲಿ ನಿಲ್ಲಿಸದೆ ಯುವತಿಯ ಜತೆ ಅನುಚಿತ ವರ್ತನೆ ತೋರಿದ ಅರೋಪದಲ್ಲಿ ಬಸ್ ನಿರ್ವಾಹಕನನ್ನು ಕಡಬ ಪೊಲೀಸರು ವಶಕ್ಕೆ ಪಡೆದ ಘಟನೆ ಕಡಬದಲ್ಲಿ ಶನಿವಾರ ಸಂಭವಿಸಿದೆ.
ರಾಮಕುಂಜ ಸಮೀಪದ ಕುಂಡಾಜೆ ಎಂಬ ಪ್ರದೇಶದಿಂದ ಯುವತಿ ಬಸ್ ಏರಿದ್ದರು. ಆಲಂಕಾರಿಗೆ ಟಿಕೆಟ್ ಕೊಡಿ ಎಂದು ಯುವತಿ ಹೇಳಿದ್ದರೂ ನಿರ್ವಾಹಕ ಕಡಬಕ್ಕೆ ಟಿಕೆಟ್ ನೀಡಿ ಯುವತಿ ಹೇಳಿದ ಸ್ಥಳದಲ್ಲಿ ನಿಲ್ಲಿಸದೆ ಪ್ರಯಾಣ ಮುಂದು ವರಿಸಿದರು. ಯುವತಿ ತಾನು ಇಳಿಯುವ ಸ್ಥಳ ಬಂದಾಗ ಬಸ್ನಿಂದ ಇಳಿಯಲು ಬಾಗಿಲಿನತ್ತ ಹೊರಟಾಗ ನಿರ್ವಾಹಕ ಅನುಚಿತ ವರ್ತನೆ ತೋರಿ ಇಳಿಯದಂತೆ ತಡೆ ಹಾಕಿದ ಎಂದು ಎಂದು ಆರೋಪಿಸಲಾಗಿದೆ.
ಆ ಬಗ್ಗೆ ಯುವತಿ ಪರಿಚಿತರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಕಡಬ ಬಳಿಯ ಸಂಘಟನೆಯೊಂದರ ಸದಸ್ಯರು ಕಡಬ ಠಾಣೆಗೆ ಮಾಹಿತಿ ನೀಡಿದ್ದರು. ಯುವತಿ ನೀಡಿದ ದೂರಿನಂತೆ ಬಸ್ ನಿರ್ವಾಹಕನನ್ನು ಪೊಲೀಸ್ ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿ ಕಳುಹಿಕೊಟ್ಟಿದ್ದಾರೆ. ಪ್ರಕರಣದ ಬಗ್ಗೆ ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ದೂರು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!