ಕಡಲೆ ಕಾಯಿ ಪರಿಷೆ ಮಾಡಲು ನಿರ್ಧಾರ
Team Udayavani, Nov 11, 2021, 5:32 PM IST
ಬೆಂಗಳೂರು: ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಸಾಂಸ್ಕೃತಿಕ ಹಬ್ಬಗಳು ಮತ್ತು ಸಂಪ್ರದಾಯಿಕ ಜಾತ್ರೆಗಳಿಗೆ ಕಡಿವಾಣ ಹಾಕಲಾಗಿತ್ತು. ಆದರೆ ಪ್ರಸಕ್ತ ವರ್ಷದಲ್ಲಿ ಕೊರೊನಾ ಕ್ಷೀಣಿಸುತ್ತಿರುವ ಕಾರಣ ಕಡಲೆ ಕಾಯಿ ಪರಿಷೆಯನ್ನು ಕೋವಿಡ್-19 ನಿಯಮಾನುಸಾರ ಆಚರಣೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಹೇಳಿದರು.
ಬಿಬಿಎಂಪಿ ಕೇಂದ್ರದಲ್ಲಿ ಮಾತನಾಡಿದ ಅವರು, ಈ ಕಡಲೆ ಕಾಯಿ ಪರಿಷೆ ಮತ್ತು ಜಾತ್ರೆಗಳ ರೂಪುರೇಷೆಗಳನ್ನು ದೇವಸ್ಥಾನ, ಸ್ಥಳೀಯರೊಂದಿಗೆ ಚರ್ಚಿಸಿ ಅಧಿಕಾರಿಗಳು ಅನುಮತಿ ನೀಡಲಿದ್ದಾರೆ ಎಂದರು. ಆಸ್ಪತ್ರೆಯಲ್ಲಿ ದಾಖಲಾಗುತ್ತಿರುವ ಕೊರೊನಾ ಸೋಂಕಿತರ ಜೊತೆಗೆ ಪ್ರಾಥಮಿಕ ಕಾಂಟ್ಯಾಕ್ಟ್ ಅವರನ್ನೂ ಗುರುತಿಸಿ, ಪ್ರಾಥಮಿಕ ಚಿಕಿತ್ಸೆಯನ್ನೂ ನೀಡಲಾಗುತ್ತಿದೆ. ಒಟ್ಟು 20 ಜನ ವೈದ್ಯರು ಮತ್ತು ತಂಡದವರು ಪ್ರಸ್ತುತವಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಕೊರೊನಾ ಸಂಖ್ಯೆ ಹೆಚ್ಚಾಗುತ್ತಿರುವ ವಾರ್ಡ್ಗಳಲ್ಲಿ ಕಂಟೈನ್ಮೆಂಟ್ ಚಟುವಟಿಕೆಗಳನ್ನು ಚುರುಕುಗೊಳಿಸುತ್ತಿದ್ದೇವೆ ಎಂದು ಹೇಳಿದರು.
ಶಾಲಾ ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ರಾಜ್ಯ ಸರ್ಕಾರ ಚರ್ಚೆಗಳನ್ನು ನಡೆಸುತ್ತಿದೆ. ಮಕ್ಕಳು ಲಸಿಕೆಯನ್ನು ಯಾವಾಗ, ಎಲ್ಲಿ, ಹೇಗೆ ಪಡೆಯಬೇಕು ಎಂಬ ಸ್ಪಷ್ಟ ಆದೇಶ ಸರ್ಕಾರದಿಂದ ಬಂದಿಲ್ಲ. ಅತೀಶೀಘ್ರದಲ್ಲೇ ಲಸಿಕೆ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದರು. ಜೊತೆಗೆ ಪಾಲಿಕೆ ವ್ಯಾಪ್ತಿಗೆ ಬರುವ ಶಾಲಾ-ಕಾಲೇಜು ಮಕ್ಕಳಿಗೆ ನೋಟ್ ಬುಕ್ ಮತ್ತು ಸಮವಸ್ತ್ರ ವಿತರಿಸುವ ಬಗ್ಗೆ ಶಿಕ್ಷಣ ವಿಶೇಷ ಆಯುಕ್ತರ ಜೊತೆಗೆ ಚರ್ಚೆ ನಡೆದಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು