Kadirudyavara: ಮನೆಗೆ ನುಗ್ಗಿ ನಗ, ನಗದು ಕಳ್ಳತನ
Team Udayavani, Feb 7, 2024, 9:43 PM IST
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಮುಸ್ತಫಾ ಅವರ ಮನೆಗೆ ರಾತ್ರಿ ನುಗ್ಗಿದ ಕಳ್ಳರು ನಗ ಮತ್ತು ನಗದು ಕಳ್ಳತನಗೈದಿದ್ದಾರೆ.
ಫೆ. 5ರಂದುಈ ಘಟನೆ ನಡೆದಿದೆ. ಮುಸ್ತಫಾ ತನ್ನ ಗೂಡ್ಸ್ ವಾಹನದ ಸರ್ವೀಸ್ಗಾಗಿ ಚಿಕ್ಕಮಗಳೂರಿಗೆ ತೆರಳಿದ್ದವರು ಅಲ್ಲಿಯೇ ತಂಗಿದ್ದರು. ಅವರ ತಾಯಿ ಮನೆಗೆ ಬೀಗ ಹಾಕಿ ಹತ್ತಿರದಲ್ಲಿರುವ ಮುಸ್ತಫಾ ಅವರ ಚಿಕ್ಕಪ್ಪನ ಮನೆಗೆ ಹೋಗಿದ್ದರು. ಅದೇ ದಿನ ರಾತ್ರಿ ಮನೆಯ ಹೆಂಚು ತೆರೆದು ಒಳನುಗ್ಗಿದ ಕಳ್ಳರು ಕಪಾಟಿನಲ್ಲಿಟ್ಟಿದ್ದ 1,71,000 ರೂ. ಮೌಲ್ಯದ ಚಿನ್ನಾಭರಣ ಹಾಗೂ 1,20,000 ರೂ. ಹಣವನ್ನು ಕಳವು ಮಾಡಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!