Kadri: ಕಾಯಕಲ್ಪ ನಿರೀಕ್ಷೆಯಲ್ಲಿ ಸಂಗೀತ ಕಾರಂಜಿ: ತೆರೆದಿದ್ದಕ್ಕಿಂತ ಮುಚ್ಚಿದ್ದೇ ಜಾಸ್ತಿ
Team Udayavani, Jun 7, 2023, 2:49 PM IST
ಮಹಾನಗರ: ಸುಮಾರು ಐದು ವರ್ಷಗಳ ಹಿಂದೆ ನಗರದ ಕದ್ರಿಯ ಜಿಂಕೆ ಪಾರ್ಕ್ನಲ್ಲಿ ನಿರ್ಮಾಣಗೊಂಡ ಕದ್ರಿ ಸಂಗೀತ ಕಾರಂಜಿ ಕಾಯಕಲ್ಪದ ನಿರೀಕ್ಷೆಯಲ್ಲಿದೆ. 2018ರಿಂದ ಈವರೆಗೆ ಕಾರಂಜಿ ಪ್ರವಾಸಿಗರಿಗೆ ತೆರೆದಿದ್ದಕ್ಕಿಂತ ಮುಚ್ಚಿದ್ದೇ ಜಾಸ್ತಿ !
ನಿರ್ವಹಣೆಯ ಕೊರತೆಯಿಂದ ಕಳೆದ ವರ್ಷದಿಂದೀಚೆಗೆ ಸಂಗೀತ ಕಾರಂಜಿ ಸೇವೆ ಸ್ಥಗಿತಗೊಳಿಸಿದ್ದು, ಅಲ್ಲಿರುವ ಪೈಪ್ಗ್ಳು ಸಹಿತ ಉಪಕರಣಗಳು ತುಕ್ಕು ಹಿಡಿಯಲು ಆರಂಭಿಸಿವೆ. 2018ರಲ್ಲಿ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರು ಕಾರಂಜಿ ಉದ್ಘಾಟಿಸಿದ್ದು, ಇದೀಗ ಮತ್ತೆ ಕಾರಂಜಿ ಚಾಲೂ ಆಗಲು ಸರಕಾರ ದಿಂದ ಅನುದಾನ ನಿರೀಕ್ಷಿಸಲಾಗಿದೆ.
ಮೈಸೂರು ಬಳಿಕ ಮಂಗಳೂರಿನಲ್ಲಿ ದೊಡ್ಡ ಮಟ್ಟದ ಕಾರಂಜಿ ನಿರ್ಮಿಸಲಾಗಿದೆ. ಆರಂಭದಲ್ಲಿ ಪ್ರವಾಸಿಗರನ್ನು ಆಕರ್ಷಿಸಿತ್ತು. ಆದರೆ ಬಳಿಕ ಒಂದಲ್ಲೊಂದು ತಾಂತ್ರಿಕ ಕಾರಣದಿಂದಾಗಿ ಕೆಲವು ಅವಧಿ ಮುಚ್ಚ ಬೇಕಾದ ಪರಿಸ್ಥಿತಿ ಉಂಟಾಯಿತು. ಕಾರಂಜಿ ಶೋ ಸಹಿತ ಮೂಲ ಸೌಕರ್ಯಕ್ಕೆಂದು ಕೆಲವು ವರ್ಷಗಳ ಹಿಂದೆ ಟೆಂಡರ್ ಕರೆದರೂ ಅದನ್ನು ವಹಿಸಲು ಬಿಡ್ಡುದಾರರು ಮುಂದೆ ಬರಲಿಲ್ಲ. ಮತ್ತೂಂದೆಡೆ ಸಂಘ-ಸಂಸ್ಥೆಗಳ ಸಿಎಸ್ಆರ್ ಅನುದಾನದಲ್ಲಿ ಅಥವಾ ಮುಡಾ ಮುಖೇನ ಅಭಿವೃದ್ಧಿ ಮಾಡಲು ಮಾತುಕತೆ ನಡೆಸಿದರೂ ಅಂತಿಮ ಗೊಂಡಿಲ್ಲ. ಇದೇ ಕಾರಣಕ್ಕೆ ಸಂಗೀತ ಕಾರಂಜಿಯಲ್ಲಿ ನೀರು ಚಿಮ್ಮದೆ ಸುಮಾರು ಮೂರು ವರ್ಷಗಳಾದವು. ಕಾರಂಜಿ ಕೊಳದಲ್ಲಿ ಪೈಪ್ಲೈನ್ ಸುತ್ತಮುತ್ತ ಕೊಳಚೆ ತುಂಬಿಕೊಂಡಿದ್ದು, ಸೊಳ್ಳೆ ಉತ್ಪತ್ತಿ ತಾಣವಾಗಿದೆ.
ಇದಕ್ಕೆ ಹೊಂದಿಕೊಂಡಿರುವ ಪಾರ್ಕ್ಗೆ ಪ್ರತೀ ದಿನ ಸಾರ್ವಜ ನಿಕರು ಆಗಮಿಸುತ್ತಿದ್ದು, ಆ ಪ್ರದೇಶದಲ್ಲಿ ಸೊಳ್ಳೆ ಕಾಟ ಹೆಚ್ಚಾಗಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ ಎನ್ನುತ್ತಾರೆ ಸ್ಥಳೀಯರು.
5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ
ಕದ್ರಿ ಜಿಂಕೆ ಪಾರ್ಕ್ ಬಳಿ ಹಳೆ ಮೃಗಾಲಯದಲ್ಲಿ ಮುಡಾ ವತಿಯಿಂದ 5 ಕೋ. ರೂ. ವೆಚ್ಚದಲ್ಲಿ ಸಂಗೀತ ಕಾರಂಜಿ ನಿರ್ಮಿ ಸಲಾಗಿದ್ದು, 2018ರ ಜ. 7ರಂದು ಉದ್ಘಾಟಿಸಲಾಗಿತ್ತು. ಕಾಮಗಾರಿ ಪೂರ್ಣಗೊಂಡು 6 ತಿಂಗಳುಗಳ ಬಳಿಕ ಕಾರಂಜಿ ಉದ್ಘಾಟಿಸಲಾಗಿತ್ತು. ಅಂದಿನ ಶಾಸಕ ಜೆ.ಆರ್. ಲೋಬೋ ನೇತೃತ್ವದಲ್ಲಿ ಸಂಗೀತ ಕಾರಂಜಿ ತಲೆ ಎತ್ತಿತ್ತು. ಕಾಮಗಾರಿ ಯನ್ನು ಬೆಂಗಳೂರಿನ ಬಿಎನ್ಎ ಟೆಕ್ನಾಲಜಿ ಕಂಪೆನಿ ವಹಿಸಿತ್ತು. ಇಲ್ಲಿ ಬಣ್ಣದ ಕಾರಂಜಿ ಮಾತ್ರವಲ್ಲದೆ, ಲೇಸರ್ ಲೈಟ್ ತಂತ್ರಜ್ಞಾನ ವ್ಯವಸ್ಥೆಯನ್ನು ಬಳಸಲಾಗಿದೆ. ಸದ್ಯ ನಿರ್ವಹಣೆಯ ಕೊರತೆ ಯಿಂದಾಗಿ ಕಾರಂಜಿ ಪ್ರದರ್ಶನ ಸ್ಥಗಿತಗೊಂಡಿದೆ.
ಸಂಪನ್ಮೂಲ ಕ್ರೋಡೀಕರಣವೇ ಸವಾಲು
ಕದ್ರಿ ಸಂಗೀತ ಕಾರಂಜಿ ಚಾಲೂ ಆಗಲು ತಿಂಗಳಿಗೆ ಸುಮಾರು 70 ಸಾವಿರ ರೂ. ನಿರ್ವಹಣೆಯ ಖರ್ಚು ತಗಲುತ್ತದೆ. ಖರ್ಚಿನ ಶೇ.10ರಷ್ಟು ಕೂಡ ಆದಾಯ ಬರುತ್ತಿರಲಿಲ್ಲ. ತಿಂಗಳಿಗೆ ಸುಮಾರು 35,000 ರೂ. ನಷ್ಟು ವಿದ್ಯುತ್ ಬಿಲ್ ಬರುತ್ತಿದೆ. ಅದರಂತೆ ಟೆಕ್ನೀಶಿಯನ್, ಸಿಬಂದಿ ವರ್ಗದವರಿಗೆಂದು ತಿಂಗಳಿಗೆ ಒಟ್ಟಾರೆ ಸುಮಾರು 50 ಸಾವಿರ ರೂ. ಹಣ ನೀಡಬೇಕು. ಕೋವಿಡ್ಗೂ ಮುನ್ನ ವಾರದಲ್ಲಿ ಬೆರಳೆಣಿಕೆ ದಿನ ಮಾತ್ರ ಕಾರಂಜಿ ಶೋ ನಡೆಯುತ್ತಿತ್ತು. ಪ್ರತೀ ದಿನ ಕೇವಲ 5-7 ಮಂದಿ ವೀಕ್ಷಣೆಗೆ ಬರುತ್ತಿದ್ದರು. ಹೀಗಿದ್ದಾಗ ತಿಂಗಳಿಗೆ 5 ಸಾವಿರ ರೂ. ಕೂಡ ಆದಾಯ ಬರುತ್ತಿಲ್ಲ. ಅದನ್ನು ಸರಿದೂಗಿಸಿ ಪ್ರವಾಸಿಗರಿಗೆ ಆಕರ್ಷಿಸುವುದು ಇನ್ನೂ ಸವಾಲಾಗಿಯೇ ಇದೆ. ಇದೇ ಕಾರಣಕ್ಕೆ ಮುಂದಿನ ದಿನಗಳಲ್ಲಿ ಯಾವ ರೀತಿ ಕಾರಂಜಿ ನಡೆಸಬಹುದು ಎಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿತ್ತು. ಅಧಿಕಾರಿಗಳ ಪ್ರಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ.
ಸೂಕ್ತ ಕ್ರಮ
ಕದ್ರಿ ಜಿಂಕೆ ಉದ್ಯಾನವನ ದಲ್ಲಿರುವ ಸಂಗೀತ ಕಾರಂಜಿ ಶೋ ಕೆಲವು ಸಮಯದಿಂದ ಸ್ಥಗಿತ ಗೊಂಡಿದೆ. ಮುಂದಿನ ದಿನಗ ಳಲ್ಲಿ ಇದನ್ನು ಚಾಲೂ ಮಾಡುವ ಉದ್ದೇಶಕ್ಕೆ ಸಂಬಂಧ ಪಟ್ಟ ಅಧಿ ಕಾರಿಗಳ ಜತೆ ಮಾತುಕತೆ ನಡೆಸಿ, ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ.
– ರವಿಕುಮಾರ್ ಎಂ.ಆರ್., ದ.ಕ. ಜಿಲ್ಲಾಧಿಕಾರಿ
- ನವೀನ್ ಭಟ್ ಇಳಂತಿಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ