ಪಕ್ಷದಲ್ಲಿ ಹಿರಿಯರನ್ನು ಬಳಸಿಕೊಳ್ಳುತ್ತಿಲ್ಲ: ಕಾಗೋಡು ಅಸಮಾಧಾನ
Team Udayavani, Jan 29, 2020, 8:13 PM IST
ಬೆಂಗಳೂರು: ಪಕ್ಷದಲ್ಲಿ ಹಿರಿಯರನ್ನು ಬಳಸಿಕೊಳ್ಳುವ ಕೆಲಸ ಆಗುತ್ತಿಲ್ಲ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸಮಾಧಾನ ಹೊರಹಾಕಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿರಿಯರ ಮಾರ್ಗದರ್ಶನ ಪಡೆಯದ ಕಾರಣ ಕಾಂಗ್ರೆಸ್ ಪಕ್ಷಕ್ಕೆ ಇಂತಹ ಸ್ಥಿತಿ ಬಂದಿದೆ ಎಂದು ಹೇಳಿದರು.
ಎಲ್ಲದಕ್ಕೂ ಹೈಕಮಾಂಡ್ ಭೇಟಿ ಮಾಡುವ ಸ್ಥಿತಿ ಬರಬಾರದು. ಇಲ್ಲಿಯೇ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಸಿದ್ದರಾಮಯ್ಯ ಏನು ಬೆಳೆದು ನಿಂತವರಲ್ಲ, ಎಲ್ಲರಿಂದಾಗಿಯೇ ಅವರು ಅಧಿಕಾರ ಪಡೆದಿದ್ದು. ಪರಮೇಶ್ವರ್ ಕೂಡ ಸಂಸ್ಥೆ ಕಟ್ಟಿಕೊಂಡಿದ್ದವರು ಅದರ ಮೂಲಕವೇ ರಾಜಕೀಯಕ್ಕೆ ಬಂದದವರು ಎಂದು ತಿಳಿಸಿದರು.
ಕಾಂಗ್ರೆಸ್ ಜವಾಬ್ದಾರಿಯುತ ಪಕ್ಷ. ಪಕ್ಷವನ್ನು ಸಂಘಟಿಸಬೇಕಾದ ಅವಶ್ಯಕತೆಯಿದೆ. ಇದರತ್ತ ಎಲ್ಲರೂ ಗಮನಹರಿಸಬೇಕು. ಹೈಕಮಾಂಡ್ ಅಧಿಕಾರ ಇದ್ದಾಗ ಒಂದು ರೀತಿ, ಇಲ್ಲದಾಗ ಮತ್ತೂಂದು ರೀತಿ ಕಾಣುತ್ತಿದೆ.
ಅಧಿಕಾರ ಇದ್ದಾಗ ಬಹಳ ಉತ್ಸಾಹದಿಂದ ಇರುತ್ತಾರೆ. ಅಧಿಕಾರ ಇಲ್ಲ ಎಂದರೆ ಎಲ್ಲಿಗೆ ಹೋಗ್ತಾರೋ ಗೊತ್ತಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ