ಸೋಂಕು ಹರಡುವ ಭೀತಿಯಲ್ಲಿ ನೀರಿನ ಸಮಸ್ಯೆ ಗೌಣ
ಕಾಗದದಲ್ಲೇ ಕಾಮಗಾರಿಗಳು ಪೂರ್ಣ
Team Udayavani, Apr 7, 2020, 5:41 PM IST
ಕಲಬುರಗಿ: ಪ್ರಸ್ತುತ ಬೇಸಿಗೆ ಸಮಯದಲ್ಲೀಗ ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆಯೂ ಕಂಡು ಬರುತ್ತಿದೆ. ಹಲವು ಹಳ್ಳಿಗಳಲ್ಲಿ ಜನರು ಕೊಡ ಹಿಡಿದುಕೊಂಡು ನೀರಿಗಾಗಿ ಅಲೆಯುತ್ತಿರುವುದು ಕಂಡುಬರುತ್ತಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ಗೌಣವಾಗಿ ಬಿಟ್ಟಿದೆ.
ಜಿಲ್ಲೆಯಲ್ಲೀಗ ಆರು ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ಹಾಗೂ 11 ಹಳ್ಳಿಗಳಲ್ಲಿ ಸಾರ್ವಜನಿಕರ ಕೊಳವೆ ಬಾವಿಗಳನ್ನು ಬಾಡಿಗೆ ಪಡೆದು ನೀರು ಪೂರೈಸಲಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆಗೆ ತುತ್ತಾಗುವ 90 ಹಳ್ಳಿಗಳನ್ನು ಜಿಲ್ಲಾಡಳಿತ ಗುರುತಿಸಿದೆ.
ವರ್ಷಂಪ್ರತಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯೇ ಹೆಚ್ಚು ಕಂಡು ಬರುತ್ತಿತ್ತು. ಈ ವರ್ಷ ಕಳೆದ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಸ್ವಲ್ಪ ಉತ್ತಮ ಎನ್ನಬಹುದಾದ ಮಳೆಯಾಗಿದ್ದರಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರ ನಿಟ್ಟಿನಲ್ಲಿ ಉಲ್ಬಣವಾಗಿಲ್ಲ ಎನ್ನುವುದಾದರೂ ಹಲವು ಹಳ್ಳಿಗಳಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿರುವುದು ಕಂಡು ಬರುತ್ತಿದೆ.
ಪ್ರತಿವರ್ಷ ಕುಡಿಯುವ ನೀರಿಗೆ ಕೋಟ್ಯಂತರ ರೂ. ಖರ್ಚು ಮಾಡಿದರೂ ಇಂದಿನ ದಿನದವರೆಗೂ ಶಾಶ್ವತವಾದ ಕ್ರಮ ಕಾರ್ಯಾನುಷ್ಠಾನಕ್ಕೆ ಬಾರದಿರುವುದು ವಿಪರ್ಯಾಸವಾಗಿದೆ. ನೀರಿನಂತೆ ಹಣ
ಖರ್ಚಾಗುತ್ತಿದೆಯೇ ವಿನಃ ನೀರು ಮಾತ್ರ ಸಮಪರ್ಕಕವಾಗಿ ಪೂರೈಕೆಯಾಗುತ್ತಿಲ್ಲ.
ಕಾಗದದಲ್ಲೇ ಕಾಮಗಾರಿ ಪೂರ್ಣ: ಕೊರೊನಾ ಭೀತಿ ನಡುವೆ ಅಧಿಕಾರಿಗಳು-ಗುತ್ತಿಗೆದಾರರು ಒಗ್ಗೂಡಿ ಕೆಲವು ಸಣ್ಣ ಪುಟ್ಟ ಕಾಮಗಾರಿಗಳನ್ನು ಕಾಗದದಲ್ಲೇ ಪೂರ್ಣಗೊಳಿಸಿದ್ದಾರೆ. ಬೋರವೆಲ್ ಕೊರೆಯುವುದು ಹಾಗೂ ನೀರು ಪೂರೈಕೆಯ ಕೆಲವು ಕಾಮಗಾರಿಗಳನ್ನು ಒಪ್ಪಂದ ಮಾಡಿಕೊಂಡು ಬಿಲ್ ಮಾಡಲಾಗುತ್ತಿದೆ. ದೊಡ್ಡ ಕುಡಿಯುವ ನೀರಿನ ಕಾಮಗಾರಿಗಳ ಟೆಂಡರ್ ನೀಡಿಕೆಯಲ್ಲಿ ಗೋಲ್ಮಾಲ್ ಆಗಿದ್ದು, ಕಡಿಮೆ ಮೊತ್ತದ ಬಿಡ್ ಮಾಡಿದ ಗುತ್ತಿಗೆದಾರನಿಗೆ ಕಾಮಗಾರಿ ನೀಡೋದನ್ನು ಬಿಟ್ಟು ಶಾಸಕರು ಹೇಳಿದ ಗುತ್ತಿಗೆದಾರನಿಗೆ ಕಾಮಗಾರಿ ನೀಡುವ ಮುಖಾಂತರ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಕೇಳಿದರೆ ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ. ಒಟ್ಟಾರೆ ಕುಡಿಯುವ ನೀರಿನ ಕಾಮಗಾರಿಗಳಲ್ಲಂತೂ ಗೋಲ್ಮಾಲ್ ನಡೆದಿರುವುದು ಸ್ಪಷ್ಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದೆಡೆ ಕಾಂಗ್ರೆಸ್ ಗೆದ್ದಿದೆ: ಡಾ. ಶರಣಪ್ರಕಾಶ
HKE ಚುನಾವಣೆ: ಅಧ್ಯಕ್ಷರಾಗಿ ಶಶೀಲ್ ಜಿ. ನಮೋಶಿ ಆಯ್ಕೆ
PM ಮೋದಿ ಸಮನಾದ ನಾಯಕ ಕಾಂಗ್ರೆಸ್ನಲ್ಲಿಲ್ಲ: ಬಿಎಸ್ವೈ
Kalaburagi; ಅರ್ಧ ಗಂಟೆ ಭಾಷಣದಲ್ಲಿ ಖರ್ಗೆ ಹೆಸರನ್ನೇ ಉಲ್ಲೇಖಿಸದ ಮೋದಿ
Kalaburagi; ಕರ್ನಾಟಕದ ಜನತೆ ಕೋಪಗೊಂಡಿದ್ದಾರೆ, ಎಚ್ಚೆತ್ತುಕೊಂಡಿದ್ದಾರೆ:ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…