ಮಾ.21: “ಕಲೈಕಾರ್ ಮ್ಯೂಸಿಯಂ’ ಉದ್ಘಾಟನೆ
Team Udayavani, Mar 11, 2021, 4:00 AM IST
ಗಂಗೊಳ್ಳಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಪೂರ್ವ ಪ್ರಾಚೀನ ವಸ್ತು ಸಂಗ್ರಹಕಾರ, ಕಲಾವಿದ ಗಂಗೊಳ್ಳಿಯ ಜಿ.ಬಿ.ಕಲೈಕಾರ್ ಅವರು ಮುಂದಿನ ಪೀಳಿಗೆಗಾಗಿ ಗಂಗೊಳ್ಳಿಯ ಕಲೈಕಾರ್ ಮಠದ ಬಳಿಯಲ್ಲಿ ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ “ಗಂಗೊಳ್ಳಿ ಭಾಸ್ಕರ ಕಲೈಕಾರ್ ಮ್ಯೂಸಿಯಂ’ ಮಾ.21ರಂದು ಉದ್ಘಾಟನೆ ನಡೆಯಲಿದೆ.
ಹಂಗಾರಕಟ್ಟೆ ಶ್ರೀ ಬಾಳೆಕುದ್ರು ಮಠದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿಯವರು ಉದ್ಘಾಟಿಸಿ ಆಶೀರ್ವಚಿಸಲಿದ್ದು, ಪತ್ರಕರ್ತ ಯು.ಎಸ್.ಶೆಣೈ, ಅಂಕಣಕಾರ ಕೋ.ಶಿವಾನಂದ ಕಾರಂತ, ಉದ್ಯಮಿ ದೇವರಾಯ ಶೇರುಗಾರ್, ಎಂ.ರಾಮಕೃಷ್ಣ ಪೈ, ವಸಂತ ಎಚ್.ಕರ್ಕಿಕರ್ ಹೊನ್ನಾವರ, ಡಾ| ಎಚ್.ರಾಮಮೋಹನ, ಘನಶ್ಯಾಮ ಟಿ.ಮೇಸ್ತ, ಡಾ| ಬಾಲಚಂದ್ರ ಮೇಸ್ತ ಹೊನ್ನಾವರ, ಪಿ.ಜಯವಂತ ಪೈ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಅಪೂರ್ವ ವಸ್ತುಗಳ ಸಂಗ್ರಹ
ಕಳೆದ ಆರು ದಶಕಗಳಿಂದ ಅಪೂರ್ವ ವಸ್ತುಗಳ ಸಂಗ್ರಹದ ಹವ್ಯಾಸ ಬೆಳೆಸಿಕೊಂಡು ಬಂದಿರುವ ನಿವೃತ್ತ ಶಿರಸ್ತೇದಾರ ಗಂಗೊಳ್ಳಿಯ ಜಿ.ಭಾಸ್ಕರ ಕಲೈಕಾರ್ ಅಪೂರ್ವ ದೇಶ ವಿದೇಶಗಳ ಅಂಚೆ ಚೀಟಿಗಳು, ನೋಟುಗಳು, ನಾಣ್ಯಗಳು, ಪುರಾತನ ಛಾಯಾಚಿತ್ರಗಳು, ಕಂಚಿನ ಕಲಾತ್ಮಕ ಪಾತ್ರೆಗಳು, ಹಳೆ ದಿನ ಪತ್ರಿಕೆಗಳು, ಗಡಿಯಾರಗಳು, ಗ್ರಾಮಾಫೋನ್, ಮದ್ಯ ತುಂಬುವ ಕಲಾತ್ಮಕ ಬಾಟಲಿಗಳು, ಪಂಚಲೋಹದ ವಿಗ್ರಹಗಳು, ಹಳೆ ವಿದೇಶಿ ಕ್ಯಾಮರಾಗಳು, ಹಳೆ ಕಾಲದ ವಿವಿಧ ಬಗೆಯ ಬೀಗಗಳು, ಟಿ.ವಿ., ರೇಡಿಯೊ, ಟೇಪ್ ರೆಕಾರ್ಡರ್, ಕ್ಯಾಸೆಟ್, ಫೌಂಟೇನ್ ಪೆನ್ನು ಇತ್ಯಾದಿಗಳು ಕಲೈಕಾರ್ ಸಂಗ್ರಹದಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ
“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ
Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ
Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ
Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು