Udupi ಕಳತ್ತೂರು ದಿವಾಕರ ಬಿ. ಶೆಟ್ಟರಿಗೆ “ಮಾಧ್ಯಮ ದತ್ತಿ ನಿಧಿ ಪ್ರಶಸ್ತಿ’ ಪ್ರದಾನ


Team Udayavani, Jul 19, 2024, 12:22 AM IST

ಕಳತ್ತೂರು ದಿವಾಕರ ಬಿ. ಶೆಟ್ಟರಿಗೆ “ಮಾಧ್ಯಮ ದತ್ತಿ ನಿಧಿ ಪ್ರಶಸ್ತಿ’ ಪ್ರದಾನ

ಉಡುಪಿ: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಪ್ರವಾಸೋದ್ಯಮ ಇಲಾಖೆ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಜು. 13ರಂದು ಕಾಸರಗೋಡಿನಲ್ಲಿ ನಡೆದ ಕನ್ನಡ ಸಂಸ್ಕೃತಿ ಉತ್ಸವದಲ್ಲಿ ಕಾಪು ತಾಲೂಕಿನ ಗ್ರಾಮೀಣ ಪರಿಸರದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ದ್ವಾದಶಿ ಪಬ್ಲಿಸಿಟಿಯ ಮಾಲಕ ಕಳತ್ತೂರು ದಿವಾಕರ ಬಿ. ಶೆಟ್ಟಿ ಅವರಿಗೆ ಮಾಧ್ಯಮ ಕ್ಷೇತ್ರದ ಸಾಧಕರಿಗೆ ನೀಡುವ “ಮಾಧ್ಯಮ ದತ್ತಿ ನಿಧಿ ಪ್ರಶಸ್ತಿ’ ಪ್ರದಾನ ನಡೆಯಿತು.

ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ, ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಕೆಯುಡಬ್ಲ್ಯುಜೆ ಕಾಸರಗೋಡು ಅಧ್ಯಕ್ಷ ಎ.ಆರ್‌. ಸುಬ್ಬಯ್ಯಕಟ್ಟೆ, ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಪು, ಗಡಿನಾಡ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಮಂಜೇಶ್ವರ ಶಾಸಕ ಅಶ್ರಫ್, ಕಾಸರಗೋಡು ಜಿಲ್ಲೆಯ ಜನಪ್ರತಿನಿಧಿಗಳು, ಉದ್ಯಮಿಗಳು ಉಪಸ್ಥಿತರಿದ್ದರು.

ದಿವಾಕರ ಶೆಟ್ಟಿಯವರು ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಬಡಜನರಿಗೆ ಸ್ವಂತ ಖರ್ಚಿನಿಂದ ಸಾವಿರಕ್ಕೂ ಮಿಕ್ಕಿ ಪಲಾನುಭವಿಗಳಿಗೆ ಸರಕಾರದ ವಿಧವಾ ವೇತನ, ವೃದ್ಧಾಪ್ಯ ವೇತನ, ಸಂಧ್ಯಾ ಸುರûಾ ಯೋಜನೆ, ಗೃಹಲಕ್ಷ್ಮೀ ಯೋಜನೆಯನ್ನು ಕೊಡಿಸಿರುವುದು, ಕೊರೊನಾ ಸಮಯದಲ್ಲಿ ಸುಮಾರು 6,000 ಕುಟುಂಬಗಳಿಗೆ ಹಲವಾರು ಸಂಘಟನೆ ಮೂಲಕ ಆಹಾರ ಕಿಟ್‌ಗಳನ್ನು ಒದಗಿಸಿದ್ದರು.

ಜಾಗತಿಕ ಬಂಟರ ಸಂಘದ ಮೂಲಕ ಶಶಿ ಲಾಜಿಸ್ಟಿಕ್‌ನ ಎಂ.ಡಿ. ಶಶಿಕಿರಣ್‌ ಶೆಟ್ಟಿಯವರು ನೀಡಿದ ಕಳತ್ತೂರು ಗ್ರಾಮದ 4 ಬಂಟ ಕುಟುಂಬಗಳಿಗೆ ತಲಾ 7 ಲ.ರೂ. ವೆಚ್ಚದ ಮನೆ ನಿರ್ಮಿಸಿಕೊಡುವಲ್ಲಿ ಪ್ರಯತ್ನಿಸಿ ಯಶಸ್ವಿಯಾಗಿದ್ದಾರೆ. ದಿಲ್ಲಿಯಲ್ಲಿ ಏಷ್ಯಾ ಪೆಸಿಫಿಕ್‌ ಗೋಲ್ಡ್‌ ಸ್ಟಾರ್‌ ಅವಾರ್ಡ್‌, ಗೋವಾ ಮತ್ತು ಕೇರಳ ರಾಜ್ಯದಲ್ಲಿ ರಾಷ್ಟ್ರೀಯ ಪ್ರಶಸ್ತಿ, ಕಾಸರಗೋಡಿನಲ್ಲಿ ಕರ್ನಾಟಕ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯೊಂದಿಗೆ ಹಲವಾರು ಸಮ್ಮಾನಗಳನ್ನು ಸ್ವೀಕರಿಸಿದ್ದಾರೆ.

Ad

ಟಾಪ್ ನ್ಯೂಸ್

RCB overtakes CSK to become the most valuable team in IPL

RCB: ಸಿಎಸ್‌ಕೆಯನ್ನು ಹಿಂದಿಕ್ಕಿ ಐಪಿಎಲ್‌ನ ಅತ್ಯಂತ ಮೌಲ್ಯಯುತ ತಂಡವಾದ ಆರ್‌ ಸಿಬಿ

BJP Karnataka: We are not bigger than the party….: Kumar Bangarappa

BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

10-

Madikeri: ಹಸು, ಎಮ್ಮೆಗಳ ಕಳ್ಳತನ : ನಾಲ್ವರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

13 IAS officers including D.Kannada CEO transferred

IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್‌ ಅಧಿಕಾರಿಗಳ ವರ್ಗಾವಣೆ

9-train

ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗೆ ಪ್ರಯತ್ನ; ಸೋಮಣ್ಣ ನೇತೃತ್ವದ ಸಭೆಯಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kaup: 8 ಬಾವಿ ನೀರು ಕಲುಷಿತ; ತಜ್ಞರಿಂದ ಪರಿಶೀಲನೆ

1-gurme

Udupi: ಶಾಸಕರೊಬ್ಬರ ಹೇಳಿಕೆ ರಾಜ್ಯ ಕಾಂಗ್ರೆಸ್ ಸರಕಾರದ ಇಂದಿನ ನೈಜ ಸ್ಥಿತಿ ಅನಾವರಣ: ಗುರ್ಮೆ

9

Udupi: ಆಯುರ್ವೇದ ಶಿಕ್ಷಣ, ಚಿಕಿತ್ಸೆ, ಔಷಧ ಕ್ಷೇತ್ರದಲ್ಲಿ ದಾಪುಗಾಲು

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

EPF

EPFO; ಕಾರ್ಮಿಕರ ಭವಿಷ್ಯನಿಧಿ ಇಎಲ್‌ಐ ಯೋಜನೆ : 25 ಸಾವಿರ ಉದ್ಯೋಗ ನಿರೀಕ್ಷೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

RCB overtakes CSK to become the most valuable team in IPL

RCB: ಸಿಎಸ್‌ಕೆಯನ್ನು ಹಿಂದಿಕ್ಕಿ ಐಪಿಎಲ್‌ನ ಅತ್ಯಂತ ಮೌಲ್ಯಯುತ ತಂಡವಾದ ಆರ್‌ ಸಿಬಿ

hun-Arrest

ರಸ್ತೆಯಲ್ಲಿ ವ್ಹೀಲಿಂಗ್‌, ಲಾಂಗ್‌ ಹಿಡಿದು ರೀಲ್ಸ್‌: ಯುವಕ ಬಂಧನ

BJP Karnataka: We are not bigger than the party….: Kumar Bangarappa

BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

22

Mangaluru: ಕೆಲಸಕ್ಕೆ ಹೋದವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.