ಭಾಗವತರಿಗೆ ಸ್ಟಾರ್ ವ್ಯಾಲ್ಯೂ ತಂದು ಕೊಟ್ಟಿದ್ದ ಕಾಳಿಂಗ ನಾವಡರು ಅದ್ಭುತ ಸ್ನೇಹಜೀವಿ

ತರಬೇತಿ ಕೇಂದ್ರದಲ್ಲಿ ನಾರಾಣಪ್ಪ ಉಪ್ಪೂರರು ಇರದಿದ್ದಾಗ ಕೆಲವೊಮ್ಮೆ ಕಾಳಿಂಗ ನಾವಡರೇ ಕ್ಲಾಸ್ ಅನ್ನು ತೆಗೆದುಕೊಳ್ಳುತ್ತಿದ್ದರು.

Team Udayavani, May 27, 2020, 8:37 PM IST

ಭಾಗವತರಿಗೆ ಸ್ಟಾರ್ ವ್ಯಾಲ್ಯೂ ತಂದು ಕೊಟ್ಟಿದ್ದ ಕಾಳಿಂಗ ನಾವಡರು ಅದ್ಭುತ ಸ್ನೇಹಜೀವಿ

ಮಣಿಪಾಲ:ದಿ.ಕಾಳಿಂಗ ನಾವಡರ ತಂದೆ ರಾಮಚಂದ್ರ ನಾವಡರು ಕೂಡಾ ಆ ಕಾಲದಲ್ಲಿ ಹೆಸರಾಂತ ಭಾಗವತರಾಗಿದ್ದರು. ಹೀಗಾಗಿ ಕಿರಿಯ ವಯಸ್ಸಿನಲ್ಲಿಯೇ ನಾವಡರಿಗೆ ಯಕ್ಷಗಾನದ ಕುರಿತು ಆಸಕ್ತಿ ಇದ್ದಿತ್ತು. ನವರಾತ್ರಿ ಸಂದರ್ಭದಲ್ಲಿ ಮಗನನ್ನು ಜತೆಗೆ ಕರೆದುಕೊಂಡು ಹೋಗುತ್ತಿದ್ದರು. ಆದರೆ ಚಿಕ್ಕವಯಸ್ಸಿನಲ್ಲಿ ತುಂಬಾ ತುಂಟನಾಗಿದ್ದರಿಂದ ಮಗನನ್ನು ದಾರಿಗೆ ತನ್ನಿ ಎಂದು ಸಾಲಿಗ್ರಾಮದ ಹಂಗಾರಕಟ್ಟೆಯ ಯಕ್ಷಕಲಾ ಕೇಂದ್ರ ಭಾಗವತ ತರಬೇತಿ ಕೇಂದ್ರಕ್ಕೆ ತಂದೆ ಸೇರಿಸಿದ್ದರು.

1973ರಲ್ಲಿ ನಾವಡರು ಯಕ್ಷಕಲಾ ಕೇಂದ್ರಕ್ಕೆ ಸೇರಿದ್ದಾಗ ನಾರಣಪ್ಪ ಉಪ್ಪೂರರು ಗುರುಗಳಾಗಿದ್ದರು. ಚಿಕ್ಕಂದಿನಲ್ಲಿಯೇ ಯಕ್ಷಗಾನದ ಬಗ್ಗೆ ಗೊತ್ತಿದ್ದರಿಂದ ನಾವಡರಿಗೆ ಕಲಿಯಲು ಕಷ್ಟ ಆಗಲಿಲ್ಲ. ತಾಳ, ಲಯ ಎಲ್ಲವನ್ನೂ ಕಲಿತುಕೊಂಡಿದ್ದರು…ಅವೆಲ್ಲಕ್ಕಿಂತ ಹೆಚ್ಚಾಗಿ ಅವರಲ್ಲಿ ಅದ್ಭುತವಾದ ಸ್ವರ ಇದ್ದಿತ್ತು. ಅವರ ತಂದೆಗೂ ಉತ್ತಮವಾದ ಸ್ವರ ಇತ್ತು. ಕಾಳಿಂಗ ನಾವಡರಿಗೆ ಯಾವುದನ್ನೇ ಆಗಲಿ ಕೂಡಲೇ ಗ್ರಹಿಸುವ ಶಕ್ತಿ ಇದ್ದಿತ್ತು. ತುಂಬಾ ಆಸಕ್ತಿಯಿಂದ ಕಲಿತು ಭಾಗವತಿಕೆಯಲ್ಲಿ ಕೃಷಿ ಮಾಡಿ ಅದನ್ನು ಕರಗತ ಮಾಡಿಕೊಂಡಿದ್ದರು.

ತರಬೇತಿ ಕೇಂದ್ರದಲ್ಲಿ ನಾರಾಣಪ್ಪ ಉಪ್ಪೂರರು ಇರದಿದ್ದಾಗ ಕೆಲವೊಮ್ಮೆ ಕಾಳಿಂಗ ನಾವಡರೇ ಕ್ಲಾಸ್ ಅನ್ನು ತೆಗೆದುಕೊಳ್ಳುತ್ತಿದ್ದರು. ನಂತರ ತಮ್ಮ ಪ್ರೀತಿಯ ಶಿಷ್ಯನನ್ನು ಉಪ್ಪೂರರು ಕೋಟ ಶ್ರೀ ಅಮೃತೇಶ್ವರಿ ಮೇಳಕ್ಕೆ ಸೇರಿಸಿದ್ದರು. ಕೇವಲ 16ನೇ ವಯಸ್ಸಿನ ಯುವ ಪ್ರತಿಭೆ ಮುಖ್ಯ ಭಾಗವತರಾಗಿ ಯಕ್ಷಗಾನ ಕಲಾ ಸೇವೆ ಆರಂಭಿಸಿದ್ದರು. ಸುಮಾರು ನಾಲ್ಕೈದು ವರ್ಷ ಉಪ್ಪೂರರ ಜತೆ ತಿರುಗಾಟದಲ್ಲಿ ಪಳಗಿದ ಬಳಿಕ ಆರ್ಥಿಕ ಅವಶ್ಯಕತೆ ಹಿನ್ನೆಲೆಯಲ್ಲಿ ಪೆರ್ಡೂರು ಮೇಳಕ್ಕೆ ಭಾಗವತರಾಗಿ ಸೇರ್ಪಡೆಗೊಂಡಿದ್ದರು. ಕಂಚಿನ ಕಂಠದ ನಾವಡರು ಅಲ್ಪಾವಧಿಯಲ್ಲಿಯೇ ಅಪಾರ ಜನಪ್ರಿಯತೆ ಗಳಿಸಿಬಿಟ್ಟಿದ್ದರು. ನಂತರ ಸಾಲಿಗ್ರಾಮ ಮೇಳದಲ್ಲಿ ಖಾಯಂ ಪ್ರಧಾನ ಭಾಗವತರಾಗಿ ಮೇರು ಶಿಖರವೇರಿದ್ದರು.

ಭಾಗವತಿಕೆಯಲ್ಲಿ ಹೊಸತನ ತಂದ ವ್ಯಕ್ತಿ ಕಾಳಿಂಗ ನಾವಡರು. ಮೊದಲು ಯಕ್ಷಗಾನದಲ್ಲಿ ಭಾಗವತರು ನಿರ್ದೇಶಕರಾಗಿದ್ದರು ಕೂಡಾ ಅದು ಅಷ್ಟೊಂದು ಪರಿಣಾಮಕಾರಿಯಾಗಿರಿಲಿಲ್ಲವಾಗಿತ್ತು. ನಾವಡರು ಅದಕ್ಕೊಂದು ಸ್ಟಾರ್ ವ್ಯಾಲ್ಯೂ ತಂದು ಕೊಟ್ಟಿದ್ದರು. ಗುರುಗಳ ಬಗ್ಗೆ ಅವರಿಗೆ ಅಪಾರ ಗೌರವ. ಆ ನಿಟ್ಟಿನಲ್ಲಿ ಅವರು ಪ್ರತಿವರ್ಷ ಉಪ್ಪೂರರನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸುತ್ತಿದ್ದರು. ಕಲಾಕೇಂದ್ರದ ಕಟ್ಟಡ ಕಟ್ಟುವ ವೇಳೆಯೂ ಸಹ ಕಾರ್ಯದರ್ಶಿಯಾಗಿ ತುಂಬಾ ಕೆಲಸ ಮಾಡಿದ್ದರು. ಕಾಳಿಂಗ ನಾವಡರು ಒಬ್ಬ ಉತ್ತಮ ಸ್ನೇಹಜೀವಿ. ಅಲ್ಲದೇ ರಂಗಸ್ಥಳದಲ್ಲಿ ನಿಯಂತ್ರಣ ಸಾಮರ್ಥ್ಯವನ್ನು ಇಟ್ಟುಕೊಂಡಿರುವ ಸಮರ್ಥ ವ್ಯಕ್ತಿ ಅವರಾಗಿದ್ದರು.

ರಾಜಶೇಖರ್ ಹೆಬ್ಬಾರ್
ಸಾಲಿಗ್ರಾಮ ಯಕ್ಷಗಾನ ಕಲಾ ಕೇಂದ್ರದ ಕಾರ್ಯದರ್ಶಿ

ಟಾಪ್ ನ್ಯೂಸ್

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Happiness: ಸಂತೋಷದ ಮಾರುಕಟ್ಟೆ ಮತ್ತು ಮನಶಾಂತಿಯ ಹುಡುಕಾಟ

Happiness: ಸಂತೋಷದ ಮಾರುಕಟ್ಟೆ ಮತ್ತು ಮನಶಾಂತಿಯ ಹುಡುಕಾಟ

5-

ಸಮುದಾಯ ಪ್ರಜ್ಞೆ ಬಿತ್ತಲು ಮನೆಯೇ ಪ್ರಶಸ್ತ

1-sadsdsa

Children ಹದಿಹರೆಯ -ತಾಯಿಯ ಕರ್ತವ್ಯ

1-sadsdsad

Emotion-language-life; ಭಾವ-ಭಾಷೆ-ಬದುಕು

Election ಅವಿರತವಾಗಿರಲಿ ರಾಷ್ಟ್ರ ರಾಜಕೀಯ ಧಾರೆ

Election ಅವಿರತವಾಗಿರಲಿ ರಾಷ್ಟ್ರ ರಾಜಕೀಯ ಧಾರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.