ಕಲ್ಯಾಣಪುರ ಸಂತೆಕಟ್ಟೆ; ಓವರ್‌ಪಾಸ್‌ ಕಾಮಗಾರಿ ಶುರು-ಬದಲಿ ಮಾರ್ಗದ ವ್ಯವಸ್ಥೆ

ಟ್ರಾಫಿಕ್‌ ದಟ್ಟಣೆಯಾಗದಂತೆ ಸುಗಮ ಸಂಚಾರಕ್ಕೆ ವ್ಯವಸ್ಥೆ ರೂಪಿಸಲಾಗಿದೆ

Team Udayavani, Jan 31, 2023, 3:26 PM IST

ಕಲ್ಯಾಣಪುರ ಸಂತೆಕಟ್ಟೆ; ಓವರ್‌ಪಾಸ್‌ ಕಾಮಗಾರಿ ಶುರು-ಬದಲಿ ಮಾರ್ಗದ ವ್ಯವಸ್ಥೆ

ಉಡುಪಿ: ಕಲ್ಯಾಣಪುರ ಸಂತೆಕಟ್ಟೆ ಜಂಕ್ಷನ್‌ ನಲ್ಲಿ (ರಾ.ಹೆ. 66) ವೈಹಿಕುಲರ್‌ ಓವರ್‌ಪಾಸ್‌ ನಿರ್ಮಾಣ ಕಾಮಗಾರಿ ಸೋಮವಾರದಿಂದ ಆರಂಭಗೊಂಡಿದೆ. ಸರ್ವಿಸ್‌ ರಸ್ತೆಯಲ್ಲಿ ವಾಹನ ಬಿಡಲಾಗುತ್ತಿದೆ. ಈಗಿರುವ ವೃತ್ತ ಬಂದ್‌ ಮಾಡಿ, ತಾತ್ಕಾಲಿಕ ಯು ಟರ್ನ್ ವ್ಯವಸ್ಥೆ ಮಾಡಲಾಗಿದೆ.

ಹಲವಾರು ವರ್ಷಗಳಿಂದ ಸಂಚಾರ ದಟ್ಟಣೆ, ಅಪಘಾತಗಳ ಕೇಂದ್ರವಾಗಿದ್ದ ಈ ಜಂಕ್ಷನ್‌ನಲ್ಲಿ ಓವರ್‌ಪಾಸ್‌ ನಿರ್ಮಿಸುವಂತೆ ಸಾರ್ವಜನಿಕ ವಲಯದಲ್ಲಿ ಬೇಡಿಕೆ ಹೆಚ್ಚಿತ್ತು. ಅನಂತರ ಇಲ್ಲಿ ಓವರ್‌ಪಾಸ್‌ ನಿರ್ಮಾಣ ಕುರಿತ ಪ್ರಸ್ತಾವನೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಎಚ್‌ಎಐ) 27.4 ಕೋ. ರೂ. ವೆಚ್ಚದ ಅನುಮೋದನೆ ನೀಡಿದ್ದು, ಟೆಂಡರ್‌ಪಕ್ರಿಯೆ ಪೂರ್ಣಗೊಂಡು ಜ.12ರಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೂಮಿ ಪೂಜೆ ನೆರವೇರಿಸಿದ್ದರು.

ಈ ಓವರ್‌ಪಾಸ್‌ ಬಹುತೇಕ ಕಿನ್ನಿಮೂಲ್ಕಿ ಓವರ್‌ಪಾಸ್‌ ಮಾದರಿಯಲ್ಲಿ ನಿರ್ಮಾಣಗೊಳ್ಳಲಿದೆ ಎಂದು ರಾ. ಹೆ. ಎಂಜಿನಿಯರ್ ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿ ಮೂಲದ ಟ್ರಿನಿಟಿ ಕನ್‌ಸ್ಟ್ರಕ್ಷನ್‌ ಸಂಸ್ಥೆಯು ಓವರ್‌ಪಾಸ್‌ ನಿರ್ಮಾಣ ಗುತ್ತಿಗೆ ಪಡೆದಿದೆ. ಆಶೀರ್ವಾದ್‌ ಸಮೀಪ ಜೆಸಿಬಿ, ಬೃಹತ್‌ ಯಂತ್ರೋಪಕರಣ ಮೂಲಕ ಅಗೆಯುವ ಕೆಲಸ ಆರಂಭವಾಗಿದೆ. ಒಂದು ವರ್ಷದ ಒಳಗೆ ಕಾಮಗಾರಿ ಮುಗಿಸುವಂತೆ ಗುರಿ ನೀಡಲಾಗಿದೆ.

ಸೋಮವಾರದಿಂದ ಜಂಕ್ಷನ್‌ನಲ್ಲಿ ವಾಹನಗಳು ಸಂಚರಿಸದಂತೆ ಬದಲಿ ಮಾರ್ಗದ ವ್ಯವಸ್ಥೆಯನ್ನು ಜಿಲ್ಲಾಡಳಿತ, ಪೊಲೀಸ್‌ ಇಲಾಖೆ, ರಾ. ಹೆ. ಪ್ರಾಧಿಕಾರ ಪ್ರಾಯೋಗಿಕವಾಗಿ ಮಾಡಿದೆ.

ಬದಲಿ ಮಾರ್ಗದ ವ್ಯವಸ್ಥೆ ಮತ್ತು ನಿರ್ವಹಣೆ ಸವಾಲು
ಕಾಮಗಾರಿ ಹಿನ್ನೆಲೆಯಲ್ಲಿ ಟ್ರಾಫಿಕ್‌ ದಟ್ಟಣೆಯಾಗದಂತೆ ಸುಗಮ ಸಂಚಾರಕ್ಕೆ ವ್ಯವಸ್ಥೆ ರೂಪಿಸಲಾಗಿದೆ. ಕುಂದಾಪುರದಿಂದ ಉಡುಪಿ ಕಡೆಗೆ ಬರುವ ಬಸ್‌ ಸಹಿತ ಎಲ್ಲ ವಾಹನಗಳು ಸಂತೆಕಟ್ಟೆಯಿಂದ ಸರ್ವಿಸ್‌ ರಸ್ತೆಯಲ್ಲಿ ಉಡುಪಿಗೆ ಹೋಗಲು ವ್ಯವಸ್ಥೆ ಮಾಡಲಾಗುತ್ತಿದೆ. ಸ್ಥಳೀಯರಿಗೆ ಮತ್ತು ಕಲ್ಯಾಣಪುರ, ಮಲ್ಪೆ, ಕೊಡವೂರು, ಲಕ್ಷ್ಮೀನಗರ, ಬೇಂಗ್ರೆ, ಹೂಡೆ, ಕೆಮ್ಮಣ್ಣು, ನೇಜಾರ್‌ ಭಾಗಕ್ಕೆ ಹೋಗುವವರಿಗೆ ಅನುಕೂಲ ಆಗುವಂತೆ ಸಂತೆಕಟ್ಟೆ ಸೇತುವೆಯಿಂದ ಸ್ವಲ್ಪ ಮುಂದಕ್ಕೆ(ಕುಂದಾಪುರದಿಂದ ಉಡುಪಿಗೆ ಬರುವಾಗ) ಡಿವೈಡರ್‌ ಒಡೆದು ತಾತ್ಕಾಲಿಕ ಯು-ಟರ್ನ್ ವ್ಯವಸ್ಥೆ ಕಲ್ಪಿಸಿ, ಸೂಚನ ಫ‌ಲಕ ಅಳವಡಿಸಲಾಗಿದೆ. ಹಾಗೆಯೇ ಸರ್ವಿಸ್‌ ರಸ್ತೆ ಅಗಲೀಕರಣವೂ ನಡೆಯುತ್ತಿದೆ. ಸ್ಥಳೀಯರಿಗೆ ಅನುಕೂಲವಾಗುವಂತೆ ಪೂರ್ಣ ಪ್ರಮಾಣದಲ್ಲಿ ಸರ್ವೀಸ್‌ ರಸ್ತೆ ಬಳಕೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಉಡುಪಿಯಿಂದ ಕುಂದಾಪುರದ ಕಡೆಗೆ ಹೋಗುವ ಎಲ್ಲ ವಾಹನಗಳು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸಲಿದೆ. ಕುಂದಾಪುರದಿಂದ ಉಡುಪಿಗೆ ಬರುವವರು ಸದ್ಯಕ್ಕೆ ಕೊಳಲಗಿರಿ, ಶೀಂಬ್ರಾ, ಮಣಿಪಾಲ ಸುತ್ತುವರಿದು ಬರಬೇಕಾಗಿಲ್ಲ.

ಟಾಪ್ ನ್ಯೂಸ್

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.