ಕಮಾಲ್ ಮಾಡಿದ “ಡಬಲ್ ಎಂಜಿನ್’ ಮಂತ್ರ
Team Udayavani, Mar 11, 2022, 7:35 AM IST
“ಡಬಲ್ ಎಂಜಿನ್ ಸರ್ಕಾರ’! - ಪಂಚರಾಜ್ಯ ಚುನಾವಣೆಗಳ ಪ್ರತಿಯೊಂದು ವೇದಿಕೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಪಿಸಿದ ಮಂತ್ರ ಇದೇ ಆಗಿತ್ತು. ಕೇಂದ್ರದಲ್ಲೂ, ರಾಜ್ಯದಲ್ಲೂ ಒಂದೇ ಸರ್ಕಾರವಿದ್ದರೆ ಅಭಿವೃದ್ಧಿ ಸುಲಭ ಎಂಬ ಗುಟ್ಟನ್ನು ಜನತೆಗೆ ಮನದಟ್ಟು ಮಾಡಿಸುವಲ್ಲಿ ಬಿಜೆಪಿ ಬಹುತೇಕ ಸಫಲವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಮಣಿಪುರದ ವಿವಿಧೆಡೆ ನಡೆಸಿದ ಚುನಾವಣಾ ರ್ಯಾಲಿಗಳಲ್ಲಿ, “ಮಣಿಪುರದಲ್ಲಿ ಶಾಂತಿ ನೆಲೆಸಲು ಡಬಲ್ ಎಂಜಿನ್ ಸರ್ಕಾರವೇ ಕಾರಣ’ ಎಂದು ಪ್ರತಿಪಾದಿಸಿದ್ದರು. ಇದೇ ಮಂತ್ರವನ್ನು ಆಯಾ ಪ್ರದೇಶಕ್ಕೆ ತಕ್ಕಂತೆ ಮಿಕ್ಕ ರಾಜ್ಯಗಳಲ್ಲೂ ಪುನರುಚ್ಚರಿಸಿದ್ದರು.
ಮುಖ್ಯವಾಗಿ ಕೇಂದ್ರದ ಎನ್ಡಿಎ ಸರ್ಕಾರವು “ಉತ್ತರ ಪ್ರದೇಶವನ್ನು ಡಬಲ್ ಎಂಜಿನ್ ಸರ್ಕಾರದ ಪ್ರಯೋಗಶಾಲೆ’ ಎಂಬಂತೆ ಬಿಂಬಿಸಿತ್ತು. ಅದರಲ್ಲೂ ವಾರಾಣಸಿಯನ್ನು ದೇಶಕ್ಕೆ ಮಾದರಿ ಎಂದು ತೋರ್ಪಡಿಸುವಲ್ಲಿ ಬಹುತೇಕ ಯಶಸ್ವಿಯಾಗಿತ್ತು. ಕೇಂದ್ರ ಸರ್ಕಾರದ ಜತೆಗೂಡಿ ಸಿಎಂ ಯೋಗಿ ಆದಿತ್ಯನಾಥರು ಕೈಗೊಂಡ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಮೋದಿ ಮತ್ತೆ ಮತ್ತೆ ಕೊಂಡಾಡಿದ್ದರು.
ಮುಂಬರುವ ರಾಜ್ಯಗಳ ಚುನಾವಣೆಗಳಲ್ಲೂ ಬಿಜೆಪಿ ಇದೇ ಮಂತ್ರವನ್ನು ಪಠಿಸುವ ಸಾಧ್ಯತೆ ಇದೆ ಎಂದೇ ಅರ್ಥೈಸಲಾಗುತ್ತಿದೆ. ಕೇಂದ್ರದಲ್ಲೂ, ರಾಜ್ಯದಲ್ಲೂ ಒಂದೇ ಸರ್ಕಾರ ಇದ್ದಾಗ ನೀತಿ-ನಿಯಮಗಳ ಸಡಿಲಿಕೆ, ಉದ್ಯಮ- ಕೈಗಾರಿಕೆಗಳ ಪ್ರಗತಿಗೆ ಶರವೇಗ ಸಿಗುತ್ತದೆ ಎಂದೇ ಬಿಜೆಪಿ ಬಿಂಬಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ