ಕನಕಗಿರಿ: ಅಮಾನತಾದ ಮುಖ್ಯ ಶಿಕ್ಷಕನನ್ನು ಕರೆ ತರುವಂತೆ ವಿದ್ಯಾರ್ಥಿಗಳ ಪ್ರತಿಭಟನೆ


Team Udayavani, Mar 10, 2023, 1:30 PM IST

5–kanakagiri

ಕನಕಗಿರಿ: ಸಮೀಪದ ಗೋಡಿನಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಶೇಖರ ನಾಯ್ಕ್ ಸಾಮಾಜಿಕ ಜಾಲತಾಣದಲ್ಲಿ ಪುಲ್ವಾಮಾ ದಾಳಿ ಕುರಿತು ಸಂದೇಶ ರವಾನಿಸಿದ ಕಾರಣ ಶಿಕ್ಷಣ ಇಲಾಖೆ ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು.

ಈ ಕುರಿತು ಆದೇಶವನ್ನು ಹಿಂಪಡೆದು ಶಿಕ್ಷಕನನ್ನು ಮರಳಿ ಶಾಲೆಗೆ ಕಳುಹಿಸುವಂತೆ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಶುಕ್ರವಾರ ಪ್ರತಿಭಟಿಸಿದರು.

ಕೆಲವು ದಿನಗಳಿಂದ ಮುಖ್ಯ ಶಿಕ್ಷಕ ಅಮಾನತುಗೊಂಡಿರುವುದು ದು:ಖದ ವಿಷಯವಾಗಿದೆ. ಶೇಖರ ನಾಯ್ಕ್ ಶಿಕ್ಷಕ ಬೇಕೆ ಬೇಕು ಎಂದು ವಿದ್ಯಾರ್ಥಿಗಳು ಕಂಬನಿ ಮೀಡಿಯುವ ಮೂಲಕ ಶಾಲೆಯ ಆವರಣದ ಮುಂಬಾಗದಲ್ಲಿ ತರಗತಿಗಳಿಗೆ ಬೀಗ ಹಾಕಿ ಪ್ರತಿಭಟಿಸಿದರು.

ಇಲಾಖೆ ಅಧಿಕಾರಿಗಳು ಶೀಘ್ರವೇ ಶಿಕ್ಷಕನನ್ನು ಶಾಲೆಗೆ ಕಳುಹಿಸಿ ಗ್ರಾಮೀಣ ಭಾಗದ ಮಕ್ಕಳು ಶಿಕ್ಷಣದಲ್ಲಿ ಪ್ರಗತಿ ಹೊಂದಲು ಸಹಕರಿಸಬೇಕು ಎಂದು ಇಲಾಖೆಗೆ ಮನವಿ ಮಾಡಿಕೊಂಡರು.

ಎಸ್.ಡಿ.ಎಂ.ಸಿ. ಅಧ್ಯಕ್ಷ ಈರಯ್ಯ ಸ್ವಾಮಿ ಹೀರೆಮಠ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಸರ್ಕಾರಿ ಶಾಲೆಯನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುವುದರ ಮೂಲಕ ಗೋಡಿನಾಳ ಶಾಲೆಯನ್ನು ಮಾದರಿ ಶಾಲೆಯಾಗಿ ಮಾಡುವಲ್ಲಿ ಶೇಖರ್ ನಾಯ್ಕ್ ಶಿಕ್ಷಕರ ಪಾತ್ರ ಬಹುಮುಖ್ಯ. ಅಲ್ಲದೆ‌ ತಿಂಗಳು ಮೊರಾರ್ಜಿ ಪರೀಕ್ಷೆಗಳಿದ್ದು ಮುಖ್ಯ ಶಿಕ್ಷಕ ಶೇಖರ ನಾಯ್ಕ್ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಿ ಪರೀಕ್ಷೆಗಳನ್ನು ಬರೆಸುತ್ತಿದ್ದರು. ಮಕ್ಕಳ ಶಿಕ್ಷಣದಲ್ಲಿ ವೈಯಕ್ತಿಕ ಹಿತಾಸಕ್ತಿಯನ್ನು ಒತ್ತು ವಿದ್ಯಾರ್ಥಿಗಳ ಪ್ರೀತಿ ವಿಶ್ವಾಸವನ್ನು ಗಳಿಸಿದ್ದರು ಎಂದು ಹೇಳಿದರು.

ಗ್ರಾಮಸ್ಥರಾದ ದುರುಗಪ್ಪ ಹುಗ್ಗಿ, ಹನುಮೇಶ, ಸತ್ಯಪ್ಪ ಮಾತನಾಡಿ, ಶಿಕ್ಷಣ ಇಲಾಖೆ ಕೂಡಲೇ ಸಮಸ್ಯೆಯನ್ನು ಅರಿತು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಹೇಳಿದರು.

ಸ್ಥಳಕ್ಕೆ ಸಿಆರ್ ಪಿ ಸಂಗಮೇಶ, ಶಿಕ್ಷಣ ಸಂಯೋಜಕ ಆಂಜನೇಯ ಆಗಮಿಸಿ ಮಾತನಾಡಿ, ಈ ವಿಷಯವನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸುವುದಾಗಿದೆ ಎಂದು ಹೇಳಿದರು.

ಪೋಲಿಸ್ ಪೇದೆ ಕೆ.ಕೃಷ್ಣ ಸೇರಿದಂತೆ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.