ಕಾಸರಗೋಡು: ಮತದಾನದ ಜಾಗೃತಿ ಮೂಡಿಸುತ್ತಿರುವ ಶತಾಯುಷಿ

ನೆಲ್ಲಿಯರ ಕಾಲನಿಯ ಮೂಪ್ಪನ್‌ ಆಗಿರುವ ಚಾಣ ಮೂಪ್ಪನ್‌ ಅವರನ್ನು ಗೌರವಿಸಲಾಗಿದೆ.

Team Udayavani, Mar 19, 2021, 5:03 PM IST

ಕಾಸರಗೋಡು: ಮತದಾನದ ಜಾಗೃತಿ ಮೂಡಿಸುತ್ತಿರುವ ಶತಾಯುಷಿ

ಕಾಸರಗೋಡು, ಮಾ.19: ಪುಲಿಯಂಕುಳಂ ನೆಲ್ಲಿಯರ ಕಾಲನಿ ನಿವಾಸಿ ಚಾಣಮೂಪ್ಪನ್‌ ಎಂಬ 106 ವರ್ಷ ಪ್ರಾಯದ ಹಿರಿಯ ವ್ಯಕ್ತಿ ಈ ಬಾರಿಯೂ ತಮ್ಮ ಮತ ಚಲಾಯಿಸಲಿದ್ದಾರೆ. ವಾಹನ ಸೌಲಭ್ಯ ಇಲ್ಲದ ಕಾಲಾವಧಿಯಲ್ಲೂ ಎರಡು ದಿನ ಮುನ್ನವೇ ನಡೆದು ಸಾಗಿ ಮತದಾನ ನಡೆಸಿದ ತಮ್ಮ ನೆನಪನ್ನು ಈ ಶತಾಯುಷಿ ಮೆಲುಕು ಹಾಕುತ್ತಾರೆ. ಕೂಲಿಕಾರ್ಮಿಕರಾಗಿ, ಜಾನುವಾರು ಮೇಯಿಸುವ ಕಾಯಕ ನಡೆಸಿ ಬದುಕುತ್ತಿರುವ ಇವರು ಪ್ರಜಾಪ್ರಭುತ್ವದ ಮಹತ್ವ ತಿಳಿದಿದ್ದಾರೆ.

ಇದನ್ನೂ ಓದಿ:ಅಸ್ಸಾಂ : ದ್ವೇಷವನ್ನು ಹರಡುವುದರ ಮೂಲಕ ಜನರನ್ನು ವಿಭಜಿಸುತ್ತಿದೆ ಬಿಜೆಪಿ : ರಾಹುಲ್ ಗಾಂಧಿ

ನೂತನ ತಲೆಮಾರಿನ ಮಂದಿಗೆ ಮತದಾನ ಜಾಗೃತಿ ಮೂಡಿಸುವ ಕಾಯದಲ್ಲೂ ಚಾಣ ಮೂಪನ್‌ ಅವರು ಉತ್ಸಾಹ ತೋರುತ್ತಿದ್ದಾರೆ. ಮತದಾನ ಜಾಗೃತಿ ಕಾರ್ಯಕ್ರಮ ಅಂಗವಾಗಿ ಕಾಂಞಂಗಾಡ್‌ ವಿಧಾನಸಭೆ ಕ್ಷೇತ್ರದ ಕಿನಾನೂರು-ಕರಿಂದಳಂ ಗ್ರಾಮ ಪಂಚಾಯತ್‌ನ ನೆಲ್ಲಿಯರ ಕಾಲನಿಯ ಮೂಪ್ಪನ್‌ ಆಗಿರುವ ಚಾಣ ಮೂಪ್ಪನ್‌ ಅವರನ್ನು ಗೌರವಿಸಲಾಗಿದೆ.

ಈ ಕಾಲನಿಯಲ್ಲಿ ಈ ಸಂಬಂಧ ನಡೆದ ಸಮಾರಂಭದಲ್ಲಿ ಸ್ವೀಪ್‌ ಜಿಲ್ಲಾ ನೋಡೆಲ್‌ ಅಧಿಕಾರಿ ಕವಿತಾರಾಣಿ ರಂಜಿತ್‌ ಅವರು ಚಾಣ ಮೂಪ್ಪನ್‌ ಅವರಿಗೆ ಶಾಲು ಹೊದಿಸಿ ಗೌರವಾರ್ಪಣೆ ಸಲ್ಲಿಸಿದರು. ಈ ವೇಳೆ ಪತ್ನಿ ಕೊರುಂಬಿ, ಮೂವರು ಮಕ್ಕಳೂ ಜತೆಗಿದ್ದರು.

ಈ ಸಂದರ್ಭದಲ್ಲಿ ಮತದಾನ ಜಾಗೃತಿ ಪ್ರತಿಜ್ಞೆ ಪಠಿಸಲಾಯಿತು. ಸ್ವೀಪ್‌ ಕಾರ್ಯಕರ್ತರಾದ ಎಂ.ಕೆ.ನಿಷಾ ನಂಬಪೊಯಿಲ್‌, ದಿಲೀಷ್‌ ಎ., ಝುಬೈರ್‌, ವಿನೋದ್‌ ಕುಮಾರ್‌ ಕೆ., ವಿದ್ಯಾ ವಿ., ಆನ್ಸ್‌, ಮೋಹನದಾಸ್‌ ವಯಲಾಕುಳಿ, ಕ್ರಿಸ್ಟಿ, ವಿಪಿನ್‌ ಡಿ, ರಜೀಷಾ, ಸುನಾ ಎಸ್‌.ಚಂದ್ರನ್‌ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮ ಅಂಗವಾಗಿ ಸ್ಥಳೀಯರಿಂದ ಮಂಗಲಂಕಳಿ ಜರುಗಿತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.