ರಾಜ್ಯದ ಎಲ್ಲ ಅಂಗಡಿಗಳ ನಾಮಫಲಕ ಕನ್ನಡದಲ್ಲೇ ಇರಬೇಕು : ನಾಗಾಭರಣ
Team Udayavani, Jan 27, 2021, 8:49 PM IST
ಬೆಂಗಳೂರು: ರಾಜ್ಯದ ಎಲ್ಲ ಕಡೆಗಳಲ್ಲಿ ಅಂಗಡಿ-ಮುಂಗಟ್ಟುಗಳ ನಾಮಫಲಕಗಳು ಕಡ್ಡಾಯವಾಗಿ ಕನ್ನದಲ್ಲಿ ಇರಲೇಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಹೇಳಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಮೂರು ದಿನಗಳ ಶುದ್ಧ ಕನ್ನಡ ನಾಮಫಲಕ ಅಭಿಯಾನಕ್ಕೆ ಮಂಗಳವಾರ ಕಮರ್ಷಿಯಲ್ ಸ್ಟ್ರೀಟ್ ವೃತ್ತದಲ್ಲಿ ಚಾಲನೆ ನೀಡಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಅಂಗಡಿ, ಮಾಲ್ಗಳಲ್ಲಿ ಕನ್ನಡ ಮಾಯಾವಾಗುತ್ತಿದೆ. ಕನ್ನಡ ಅಕ್ಷರದ ಬದಲಾಗಿ ಬೇರೆ-ಬೇರೆ ಭಾಷೆಯ ಅಕ್ಷರಗಳು ದೊಡ್ಡದಾಗಿ ಕಾಣಿಸುತ್ತಿವೆ.ಇದನ್ನು ಯಾವುದೇ ಕಾರಣಕ್ಕೂ ಪ್ರಾಧಿಕಾರ ಸಹಿಸುವುದಿಲ್ಲ. ರಾಜ್ಯದ ಎಲ್ಲಾ ಅಂಗಡಿ-ಮುಂಗಟ್ಟಗಳ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲೆ ಇರಲೇಬೇಕು ಎಂದು ತಾಕೀತು ಮಾಡಿದರು.
ಇದನ್ನೂ ಓದಿ:ರಾಜ್ಯದ ಒಂದಿಂಚು ಜಾಗವನ್ನೂ ಬಿಡೆವು, ನಮ್ಮನ್ನು ಕೆಣಕಿದರೆ ಪರಿಣಾಮ ನೆಟ್ಟಗಿರಲ್ಲ :ನಾರಾಯಣಗೌಡ
ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಚೇರಿಗಳು ಮತ್ತು ಸಾರ್ವಜನಿಕ ಅಂಗಡಿ ಮುಂಗಟ್ಟುಗಳು ಶುದ್ಧ ಕನ್ನಡವನ್ನು ನಾಮಫಲಕದಲ್ಲಿ ಬಳಕೆ ಮಾಡಬೇಕು ಎಂಬ ಉದ್ದೇಶದಿಂದ ಈ ಅಭಿಯಾನ ರಾಜ್ಯಾದ್ಯಂತ ಪ್ರಾಧಿಕಾರದಿಂದ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಕಚೇರಿಯ ಮುಖ್ಯಸ್ಥರನ್ನು ಭೇಟಿ ಮಾಡಿ ಕನ್ನಡ ನಾಮಫಲಕ ಅಳವಡಿಕೆ ಮಾಡುವ ನಿಟ್ಟಿನಲ್ಲಿ ಮನವರಿಕೆ ಮಾಡಲಾಗುವುದು ಎಂದರು.
ಕೆಲವು ಕಡೆಗಳಲ್ಲಿ ಕನ್ನಡ ನಾಮಫಲಕ ಕಡೆಗಣೆ ಮಾಡಿರುವುದು ಹಾಗೂ ಚಿಕ್ಕದಾಗಿ ಹಾಕಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿದೆ. ಈ ಸಂಬಂಧ ಕನ್ನಡ ಹಕ್ಕೊತ್ತಾಯದ ಮನವಿ ಪತ್ರವನ್ನು ಮಾಲೀಕರಿಗೆ ನೀಡಲಾಗುವುದು. ಈ ನೆಲದ ಸವಲತ್ತುಗಳನ್ನು ಬಳಸಿಕೊಂಡು ವ್ಯಾಪಾರ ವಹಿವಾಟು ನಡೆಸುವ ಅಂಗಡಿಗಳ ಮಾಲೀಕರಿಗೆ ಸರ್ಕಾರದ ಭಾಷಾನೀತಿಯನ್ನು ಪಾಲಿಸುವಂತೆ ಸೂಚಿಸಲಾಗುವುದು ತಿಳಿಸಿದರು.
ಜಾಗೃತಿ ಅಭಿಯಾನದಲ್ಲಿ ಕನ್ನಡ ಜಾಗೃತಿ ಪಡೆಯ ಸದಸ್ಯರಾದ ಮಮತಾ ಅಶೋಕ್, ಗಿರೀಶ್ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರು, ಕನ್ನಡ ಜಾಗೃತಿ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಕನ್ನಡ ಕಾಯಕ ಪಡೆಯ ಸದಸ್ಯರು, ಕನ್ನಡಪರ ಚಿಂತಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ