ಹನುಮಸಾಗರ: ಮಾರ್ಚ 4, 5 ಎರಡು ದಿನಗಳ ಕನ್ನಡ ನುಡಿ ಹಬ್ಬ

ಸೈಬರ್ ತಜ್ಞ ಡಾ.ಉದಯ್ ಪುರಾಣಿಕ- ಸಮ್ಮೇಳನದ ನುಡಿಸಿರಿಗೆ ಸರ್ವಾಧ್ಯಕ್ಷತೆ ಗೌರವ

Team Udayavani, Feb 2, 2023, 3:30 PM IST

5-kushtagi1

ಕುಷ್ಟಗಿ: ಕೋವಿಡ್-19 ಎರಡನೇ ಅಲೆ ಹಿನ್ನೆಲೆ ಹನುಮಸಾಗರದಲ್ಲಿ ಮುಂದೂಡಿಕೆಯಾಗಿದ್ದ 2ನೇ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾರ್ಚ 4 ಮತ್ತು‌5 ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಮೈದಾನದಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಜಿಲ್ಲಾ ಕಸಾಪ ಹಿಂದಿನ ಅಧ್ಯಕ್ಷ ರಾಜಶೇಖರ ಅಂಗಡಿ ನೇತೃತ್ವದಲ್ಲಿ 2021, ಏಪ್ರಿಲ್ 1 ಹಾಗೂ 2ರಂದು ನಡೆಸಲು ನಿರ್ಧರಿಸಲಾಗಿತ್ತು. ಅಂತೆಯೇ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಹಿರಿಯ ಮಾಹಿತಿ ತಂತ್ರಜ್ಞಾನದ ‌ಸಲಹೆಗಾರ ಡಾ‌. ಉದಯ ಪುರಾಣಿಕ ಅವರನ್ನು ನೇಮಿಸಿತ್ತು.  ಆದರೆ ಆ ಸಂದರ್ಭದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಗಂಭೀರವಾಗಿ ಪರಿಗಣಿಸಿದ್ದರಿಂದ ಜಿಲ್ಲಾಡಳಿತ ಈ ಸಮ್ಮೇಳನವನ್ನು ಮುಂದೂಡಿತು.

ನಂತರ 2021ರ ನವೆಂಬರ್ ಕಸಾಪ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಗೆ ಹೊಸ ಅಧ್ಯಕ್ಷ ಶರಣಗೌಡ ಪಾಟೀಲ ಹೇರೂರು ಅಧ್ಯಕ್ಷರಾದ ಮೇಲೆ ಅರ್ಧಕ್ಕೆ ನಿಂತ ಸಮ್ಮೇಳನ ನಡೆಸಲು ರಾಜ್ಯಾಧ್ಯಕ್ಷ ಡಾ.ಮಹೇಶ ಜೋಷಿ ಅವರಿಂದ ಅನುಮತಿ ಸಿಗಲಿಲ್ಲ.

ಹಾವೇರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳಿಕ ಹನುಮಸಾಗರ 9ನೇ ಜಿಲ್ಲಾ ಸಮ್ಮೇಳನ ಆಯೋಜಿಸಲು ಇದೀಗ ಸಮ್ಮತಿ ಸಿಕ್ಕಿದ್ದು, ಜಿಲ್ಲಾ ಕಸಾಪ ಅಧ್ಯಕ್ಷ ಸಮ್ಮೇಳನ ಆಯೋಜಿಸಲು ಮುಂದಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಗುರುವಾರ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಅವರನ್ನು ಭೇಟಿ ಮಾಡಿದ್ದು, ಅದರಂತೆ ಅವರು ಮಾರ್ಚ್ 4‌,5 ರಂದು ದಿನಾಂಕ ಸೂಚಿಸಿದ್ದು, ಅದೇ ದಿನಾಂಕ ಆಯೋಜಿಸುವ ಸಾದ್ಯತೆಗಳಿವೆ.

ಈ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಶೇಖರಗೌಡ ಮಾಲಿ ಪಾಟೀಲ, ಜಿಲ್ಲಾ ತಾಲೂಕು ಅಧ್ಯಕ್ಷ ಹನುಮಸಾಗರ ಹೋಬಳಿ ಘಟಕ ಅಧ್ಯಕ್ಷರು ಹಾಜರಿದ್ದರು.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಹನುಮಸಾಗರ ಹೋಬಳಿ‌ ಕಸಾಪ ಘಟಕದವರು ಫೆ.3ರಂದು ಹನುಮಸಾಗರದಲ್ಲಿ ಸ್ಥಳೀಯ ಗ್ರಾ.ಪಂ. ಸ್ಥಳೀಯರು ಹಾಗೂ ಜಿಲ್ಲಾ ಕಾರ್ಯಕಾರಿ ಸಭೆ ನಡೆಸಲು ತೀರ್ಮಾನಿಸಿದ್ದಾರೆ. ಸಮ್ಮೇಳನವನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಯೋಜಿಸಲು ಸೂಕ್ತ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

ಹನುಮಸಾಗರ: ಮಾರ್ಚ 4, 5 ಎರಡು ದಿನಗಳ ಕನ್ನಡ ನುಡಿ ಹಬ್ಬ

ಹನುಮಸಾಗರಕ್ಕೆ 2ನೇ ಜಿಲ್ಲಾ ಸಮ್ಮೇಳನ ಭಾಗ್ಯ

ಹನುಮಸಾಗರದಲ್ಲಿ ಇದು ಎರಡನೇ ಜಿಲ್ಲಾ ಕಸಾಪ ಸಮ್ಮೇಳನ ಇದಾಗಿದೆ. ಕುಷ್ಟಗಿ ತಾಲೂಕಿನಲ್ಲಿ, ಜಿಲ್ಲಾ ಸಮ್ಮೇಳನ ಆಯೋಜನೆ 3 ನೇ ಬಾರಿ ಎನಿಸಿದೆ.

ಕಳೆದ 2007 ರಲ್ಲಿ ಡಿ.29 ಹಾಗೂ 29 ರಂದು ಡಾ. ‌ಮಹಾಂತೇಶ ಮಲ್ಲನಗೌಡ್ರು ಆಧ್ಯಕ್ಷತೆಯಲ್ಲಿ ಜಿಲ್ಲಾ ಸಮ್ಮೇಳನ ನಡೆದಿತ್ತು. 16 ವರ್ಷಗಳ‌ ಬಳಿಕ ಇದೀಗ 9ನೇ ಸಮ್ಮೇಳನದ ಇದೇ ಗ್ರಾಮದಲ್ಲಿ ಆಯೋಜನೆ ಆಗುತ್ತಿದೆ.

ಈ‌ ನಡುವೆಯೂ ಒಂದೇ ಗ್ರಾಮಕ್ಕೆ ಎರಡು ಜಿಲ್ಲಾ ಸಮ್ಮೇಳನ ಆಯೋಜನೆ ಭಾಗ್ಯ ಎನ್ನುವ ವಿಶೇಷತೆ ಇದೆ. ಕೆಲ ಸಾಹಿತಿಗಳು ಒಂದೇ ಊರಲ್ಲಿ ಎರಡು ಬಾರಿ ಸಮ್ಮೇಳನ ಬೇಡ ಬೇರೆ ಊರಲ್ಲಿ ನಡೆಸಿ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ.

-ಮಂಜುನಾಥ ಮಹಾಲಿಂಗಪುರ ಕುಷ್ಟಗಿ

ಟಾಪ್ ನ್ಯೂಸ್

Google Services Down!; ಜಿ ಮೇಲ್, ಯೂಟ್ಯೂಬ್, ಗೂಗಲ್ ಡ್ರೈವ್ ಸೇವೆಯಲ್ಲಿ ವ್ಯತ್ಯಯ

Google Services Down!; ಜಿ ಮೇಲ್, ಯೂಟ್ಯೂಬ್, ಗೂಗಲ್ ಡ್ರೈವ್ ಸೇವೆಯಲ್ಲಿ ವ್ಯತ್ಯಯ

punjab-kings

ಐಪಿಎಲ್ ಆರಂಭಕ್ಕೆ ಮೊದಲೇ ಪಂಜಾಬ್ ಕಿಂಗ್ಸ್ ಗೆ ಆಘಾತ; ಸ್ಟಾರ್ ಕ್ರಿಕೆಟರ್ ಔಟ್

ಕೊನೆ ಉಸಿರಿರುವವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

ಕೊನೆಯ ಉಸಿರಿರುವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

Vachanananda Swamiji spoke about getting reservation to Panchmasali community

ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-apc

ಭಾರತೀಯ ಸಂಸ್ಕೃತಿಯ ಪರಂಪರೆ ಆದಿ-ಅನಂತ…: ರಾಜ್ಯಪಾಲ ಗೆಹ್ಲೋಟ್

1-qweqw

ಕುಷ್ಟಗಿ:ಭಕ್ತ ಜನಸಾಗರದ ಮಧ್ಯೆ ಶ್ರೀ ವೀರಭದ್ರೇಶ್ವರ ಜಾತ್ರಾಮಹೋತ್ಸವ

2–gangavathi

ಮೂರು ತಾಸಿಗೂ ಹೆಚ್ಚು ಬೈಕ್ ನೊಳಗೆ ಹೊಕ್ಕ ಹಾವು; ಬೈಕ್ ಮಾಲೀಕರ ಪರದಾಟ

1-sada-das-d

ಮದರಸಾಗಳನ್ನು ಮುಚ್ಚಬೇಕೆನ್ನುವ ಅಸ್ಸಾಂ ಸಿಎಂ ಹೇಳಿಕೆ ಖಂಡಿಸಿದ ಗಾಲಿ ರೆಡ್ಡಿ

5–gangavathi

ಕೇಸರಟ್ಟಿ ಹಣವಾಳ ರಸ್ತೆ ದುರಸ್ಥಿಗೆ ಆಗ್ರಹಿಸಿ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರಕ್ಕೆ ನಿರ್ಧಾರ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

Google Services Down!; ಜಿ ಮೇಲ್, ಯೂಟ್ಯೂಬ್, ಗೂಗಲ್ ಡ್ರೈವ್ ಸೇವೆಯಲ್ಲಿ ವ್ಯತ್ಯಯ

Google Services Down!; ಜಿ ಮೇಲ್, ಯೂಟ್ಯೂಬ್, ಗೂಗಲ್ ಡ್ರೈವ್ ಸೇವೆಯಲ್ಲಿ ವ್ಯತ್ಯಯ

punjab-kings

ಐಪಿಎಲ್ ಆರಂಭಕ್ಕೆ ಮೊದಲೇ ಪಂಜಾಬ್ ಕಿಂಗ್ಸ್ ಗೆ ಆಘಾತ; ಸ್ಟಾರ್ ಕ್ರಿಕೆಟರ್ ಔಟ್

1-adsadsad

ಬನವಾಸಿ ನೂತನ ಮಹಾಸ್ಯಂದನ ರಥೋತ್ಸವ ಮುಂದಕ್ಕೆ; ಕಾರಣವೇನು?

1-a-wewq3

ಚಿಕ್ಕಮಗಳೂರು: ಸರಕಾರಿ ಬಸ್ ಢಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರ ಮೃತ್ಯು

ಕೊನೆ ಉಸಿರಿರುವವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

ಕೊನೆಯ ಉಸಿರಿರುವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.